• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

ತುರ್ತು ಸೇವೆಯ ಅಗ್ನಿಶಾಮಕ, ಪೊಲೀಸ್ ವಾಹನಗಳಿಗೆ ಮುಂದಾಗುವ ಅನಾಹುತಗಳನ್ನು, ವಿಪತ್ತುಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಉಲ್ಲೇಖ..!

ಪ್ರತಿಧ್ವನಿ by ಪ್ರತಿಧ್ವನಿ
May 29, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!
Share on WhatsAppShare on FacebookShare on Telegram

ಬೆಂಗಳೂರು : ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ!‌

ADVERTISEMENT
Eshwar Khandre : ಸಿದ್ದರಾಮಯ್ಯ ವ್ಯಕ್ತಿತ್ವ ಎಂಥದ್ದು ಅಂದ್ರೆ... #pratidhvani

ಬೆಂಗಳೂರು ಮಹಾನಗರವು ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ನಗರವಾಗಿದ್ದು ಕಛೇರಿ ಕೆಲಸ, ವ್ಯವಹಾರ, ಉದ್ದಿಮೆ, ತುರ್ತು ಸೇವೆಯ ವಾಹನಗಳು ಸೇರಿದಂತೆ ಪ್ರತಿದಿನ ನಗರದಲ್ಲಿ ಲಕ್ಷಾಂತರ ವಾಹನಗಳು ಸಂಚರಿಸುತ್ತಿರುತ್ತವೆ, ಆದರೆ ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವು ಪಂಕ್ಚರ್ ಶಾಪ್‌ನ ಮಾಲೀಕರು/ವ್ಯಕ್ತಿಗಳು ಕಿಡಿಗೇಡಿಗಳು ಅಡ್ಡದಾರಿಯಲ್ಲಿ ಹಣ ಮಾಡುವ ದುರುದ್ದೇಶದಿಂದ ಪ್ರತಿದಿನ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆ ಹೊಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಮುಖ ರಸ್ತೆ, ಸುರಂಗ ಮಾರ್ಗ, ಪ್ಲ ಓವರ್‌ಗಳ ಮೇಲೆ ಸೇರಿದಂತೆ ವಾಹನಗಳ ದಟ್ಟಣೆ ಹೆಚ್ಚಿರುವ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡಿ ವಾಹನಗಳು ಪಂಕ್ಚರ್ ಆಗುವಂತೆ ಮಾಡಿ, ನಂತರ ಪಂಕ್ಚರ್ ಹಾಕಲು ಸಾರ್ವಜನಿಕರಿಂದ ಅಧಿಕ ಹಣಕ್ಕೆ ಒತ್ತಾಯಿಸಿ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ರೀತಿಯ ದುರುದ್ದೇಶದಿಂದ ವಾಹನಗಳು ಅಪಘಾತಕ್ಕೊಳಗಾಗುವ ಸಂಭವಗಳು ಹೆಚ್ಚಿರುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು..?

ಅಲ್ಲದೇ ತುರ್ತು ಸೇವೆಯ ವಾಹನಗಳಾದ ಅಂಬುಲೆನ್ಸ್‌ ಗಳು ರೋಗಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವಲ್ಲಿ ವಿಫಲವಾಗಿ ರೋಗಿಗಳು ಸಾವನ್ನಪ್ಪುವ ಸಂಭವವು ಅಧಿಕವಾಗಿರುತ್ತದೆ, ಅಲ್ಲದೇ ತುರ್ತು ಸೇವೆಯ ಅಗ್ನಿಶಾಮಕ, ಪೊಲೀಸ್ ವಾಹನಗಳಿಗೆ ಹಾನಿಯಾಗುವುದರಿಂದ ಮುಂದಾಗುವ ಅನಾಹುತಗಳನ್ನು, ವಿಪತ್ತುಗಳನ್ನು ನಿರ್ವಹಿಸಲು ವಿಫಲವಾಗುವ ಸಂಭವಗಳಿದ್ದು ಹಾಗೂ ಎಲ್ಲಾ ಸಾರ್ವಜನಿಕ ವಾಹನಗಳು ನಿಗದಿತ ಸಮಯದಲ್ಲಿ ಕಛೇರಿಗಳಿಗೆ, ಮನೆಗಳಿಗೆ, ಶಾಲೆ-ಕಾಲೇಜ್ ಗಳಿಗೆ ಹಾಗೂ ಇತರೆ ಕೆಲಸಗಳಿಗೆ ತಲುಪಲಾಗದೇ ಮಾನಸಿಕ ಒತ್ತಡಕ್ಕೊಳಗಾಗುತ್ತಿದ್ದಾರೆ ಎಂದು ಗಮನ ಸೆಳೆದಿದ್ದಾರೆ.

ಅನಗತ್ಯ ಹಣ ವ್ಯಯಿಸುತ್ತಿರುವುದನ್ನು ಖಂಡಿಸಿ ಸಾರ್ವಜನಿಕರು ಪ್ರತಿದಿನ ಸ್ವತಃ ಕಾರ್ಯಾಚರಣೆಗಳನ್ನು ನಡೆಸಿ ಸಾಮಾಜಿಕ ತಾಣ ಹಾಗೂ ಮಾಧ್ಯಮದಲ್ಲಿ ವರದಿ ಮಾಡುತ್ತಿರುತ್ತಾರಲ್ಲದೇ, ಹಲವು ರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಫಿಯಾವನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿರುತ್ತಾರೆ, ಈ ಚಟುವಟಿಕೆಗಳು ನಗರದ ಕೆಲವು ಪೊಲೀಸ್ ಠಾಣೆಯ ಮುಂಭಾಗದ ರಸ್ತೆಗಳಲ್ಲೇ ರಾಜಾರೋಷವಾಗಿ ನಡೆಸುತ್ತಿರುವುದು ಸಹ ವರದಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರು ನಗರದ ಸಾರ್ವಜನಿಕ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಸಮಸ್ಯೆ ಉಂಟುಮಾಡಿ ಹಣ ವಸೂಲಿ ಮಾಡುವ ದುರುದ್ದೇಶದಿಂದ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ (ಮೊಳೆ ಮಾಫಿಯಾ) ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ನಗರದ ಆಯಾ ಠಾಣೆ ವ್ಯಾಪ್ತಿಯ ಎಲ್ಲಾ ಪಂಚರ್ ಶಾಪ್‌ನ ಮಾಲೀಕರಿಗೆ ಗಂಭೀರ ಎಚ್ಚರಿಕೆಗಳನ್ನು ನೀಡಿ ಅವರ ಮೇಲೆ ನಿಗಾವಹಿಸುವಂತೆ ಎಂದು ಮೋಹನ್‌ ಕುಮಾರ್‌ ದಾನಪ್ಪ ಆಯಕ್ತರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Tags: ambulanceBenglore Police CommissionerFire extinguisher vanHome DepartmentKarnataka GovernmentMohan Kumar DanappaNail MafiaPolice Complaint Authority memberPuncture ShopsTwo WheelerVan
Previous Post

ಭ್ರಮೆ ವಾಸ್ತವಗಳ ನಡುವೆ ಸಾಂಕೇತಿಕ ಹೋರಾಟಗಳು

Next Post

BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

Related Posts

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?
ಕರ್ನಾಟಕ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

by ಪ್ರತಿಧ್ವನಿ
May 29, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಈಗ ಮತ್ತೊಂದು ಕುತೂಹಲಕಾರಿ ಪ್ರಶ್ನೆ ಚರ್ಚೆಗೆ ಗ್ರಾಸವಾಗಿದೆ — “ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಿದೆಯಾ? ಅಥವಾ ಇನ್ನೂ ಬಾಕಿಯಿದೆಯಾ?”...

Read moreDetails
ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

May 29, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

May 28, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
Next Post
BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

BREAKING NEWS : 2 ಕುಟುಂಬಗಳ ಆಸ್ತಿ ವ್ಜಾಜ್ಯ : 6 ಜನರ ಕೊಲೆಯಲ್ಲಿ ಅಂತ್ಯ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada