• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಇಂದಿನಿಂದ ರಾಜ್ಯ ಕಂದಾಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆಕೋವರ್‌ ಕೊಲ್ಲಿ ಇಂದ್ರೇಶ್‌

ಪ್ರತಿಧ್ವನಿ by ಪ್ರತಿಧ್ವನಿ
September 2, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆಯು ಒತ್ತುವರಿ ಆಗಿರುವ ಅರಣ್ಯ ಭೂಮಿಯ ತೆರವು ಕಾರ್ಯಾಚರಣೆ ಚುರುಕುಗೊಳಿಸಿರುವ ಬೆನ್ನಲ್ಲೇ ಸೆಪ್ಟೆಂಬರ್‌ ೨ (ಇಂದಿನಿಂದ ) ರಾಜ್ಯ ಕಂದಾಯ ಇಲಾಖೆಯೂ ಭಾರೀ ಪ್ರಮಾಣದಲ್ಲಿ ಒತ್ತುವರಿ ಆಗಿರುವ ತನ್ನ ಭೂಮಿಯನ್ನು ಹಿಂಪಡೆಯಲು ಕಾರ್ಯಾಚರಣೆ ಆರಂಬಿಸಿದೆ.

ADVERTISEMENT

ರಾಜ್ಯದಲ್ಲಿ ಈವರೆಗೆ ಒಟ್ಟು 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿರುವುದು ನಿಖರ ಸರ್ವೇ ಯಲ್ಲಿ ಧೃಢಪಟ್ಟಿದೆ.ಗೂಗಲ್‌ ಮ್ಯಾಪ್‌ ಸಹಾಯದಿಂದ ಸರ್ವೇ ಇಲಾಖೆಯ ಲ್ಯಾಂಡ್‌ ಬೀಟ್‌ ಮತ್ತು ದಿಶಾಂಕ್‌ ಆಪ್‌ ನಲ್ಲಿ ಒತ್ತುವರಿ ಆಗಿರುವ ಎಲ್ಲಾ ಭೂಮಿಗಳ ಮಾಹಿತಿ ಇಲಾಖೆ ಬಳಿ ಇದೆ. ಕಂದಾಯ ಸಚಿವ ಕೃಷ್ಣ ಭೈರೇ ಗೌಡ ಅವರು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಒತ್ತುವರಿ ತೆರವಿಗೆ ಕಾರ್ಯಚರಣೆ ಚುರುಕುಗೊಳಿಸಿ ಪ್ರತಿಯೊಬ್ಬರಿಗೂ ಜವಾಬ್ದಾರಿ ನಿಗದಿಪಡಿಸಿದ್ದಾರೆ.

ರಾಜ್ಯಾದ್ಯಂತ ಒಟ್ಟು 239 ತಹಸೀಲ್ದಾರ್‌ಗಳಿದ್ದು, ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯಲ್ಲಿ ತಿಂಗಳಿಗೆ 10ರಿಂದ 20 ಒತ್ತುವರಿ ಪ್ರಕರಣಗಳಲ್ಲಿ ತೆರವು ಕಾರ್ಯ ಕೈಗೊಳ್ಳಬೇಕು. ಆಯಾ ಜಿಲ್ಲಾಧಿಕಾರಿಗಳು ವಾರಾಂತ್ಯದಲ್ಲಿ ಪ್ರಗತಿ ಪರಿಶೀಲಿಸಿ ವಿವರವನ್ನು ಕಂದಾಯ ಆಯುಕ್ತಾಲಯಕ್ಕೆ ಸಲ್ಲಿಸಲು ಸೂಚಿಸಲಾಗಿದೆ. ಆ ಮೂಲಕ ವಾರ, ಮಾಸಿಕವಾರು ಪ್ರಗತಿ ಪರಿಶೀಲನೆ ಮೂಲಕ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿ ಕಂದಾಯ ಭೂಮಿಯನ್ನು ವಶಕ್ಕೆ ಪಡೆಯುವ ಕಾರ್ಯಾಚರಣೆಗೆ ಶುರುವಾಗಿದೆ.

ಕೆರೆ, ಸ್ಮಶಾನ ಭೂಮಿ ಒತ್ತುವರಿಯನ್ನು ಆದ್ಯತೆ ಮೇರೆಗೆ ತೆರವುಗೊಳಿಸಬೇಕು. ಕಂದಾಯ ಜಮೀನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ವಾಣಿಜ್ಯ ಕಟ್ಟಡ, ಇತರೆ ರೀತಿಯಲ್ಲಿ ಲಾಭದಾಯಕ ಉದ್ದೇಶಕ್ಕೆ ಅಭಿವೃದ್ಧಿಪಡಿಸಿದ್ದರೆ ಅವುಗಳನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ. ಕೃಷಿ ಭೂಮಿಯಾಗಿದ್ದರೆ, ಬೆಳೆ ಬೆಳೆದಿದ್ದರೆ, ಕೃಷಿ ಚಟುವಟಿಕೆ ನಡೆದಿರುವ ಭೂಮಿಯ ಒತ್ತುವರಿ ಕೊನೆಯ ಹಂತದಲ್ಲಿ ಪರಿಶೀಲಿಸಿ ನಿಯಮಾನುಸಾರ ತೆರವುಗೊಳಿಸಲು ಇಲಾಖೆ ನಿರ್ಧರಿಸಿದೆ.

ರಾಜ್ಯಾದ್ಯಂತ ಸುಮಾರು 26 ಲಕ್ಷ ಎಕರೆ ಕಂದಾಯ ಭೂಮಿ ಇದ್ದು ಇದರಲ್ಲಿ ಸುಮಾರು 13.17 ಲಕ್ಷ ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ಕಂದಾಯ ಇಲಾಖೆ ಗುರುತಿಸಿದೆ.ಇದರಲ್ಲಿ ನಮೂನೆ- 50, 53, 57ರ ಸಲ್ಲಿಕೆಯಾಗಿ ಬಗರ್‌ ಹುಕುಂ ಸಮಿತಿಯಲ್ಲಿ ಬಾಕಿ ಇರುವ ಪ್ರಕರಣಗಳ ಭೂಮಿಯೂ ಸೇರಿದೆ. ಒತ್ತುವರಿಯನ್ನು ತೆರವುಗೊಳಿಸುವ ಸಂದರ್ಭದಲ್ಲಿಯೇ ಸರ್ವೆಯನ್ನೂ ನಡೆಸಲೂ ಆದೇಶ ನೀಡಲಾಗಿದೆ.

ಆಯಾ ತಾಲ್ಲೂಕುಗಳ ಭೂದಾಖಲೆಗಳ ಸಹಾಯಕ ನಿರ್ದೇಶಕರು (ಎಡಿಎಲ್‌ಆರ್‌) ಸರ್ವೆ ಮಾಡಿಕೊಡುತ್ತಾರೆ ಆಗಲೇ ತಹಸೀಲ್ದಾರ್‌ಗಳು ಒತ್ತುವರಿ ತೆರವುಗೊಳಿಸುವ ಜತೆಗೆ ‘ಜಿಯೋ ಫೆನ್ಸಿಂಗ್‌’ನಡಿ ಸರ್ಕಾರೀ ಭೂಮಿಗಳ ಗಡಿಗಳನ್ನು ಕಂಪ್ಯೂಟರ್‌ ನಲ್ಲಿ ದಾಖಲಿಸುವ ಕಾರ್ಯ ಕೈಗೊಳ್ಳಲಿದ್ದಾರೆ. ತಹಸೀಲ್ದಾರ್‌ಗಳು ಒತ್ತುವರಿ ತೆರವುಗೊಳಿಸುವಲ್ಲಿ ನಿರ್ಲಕ್ಷ್ಯ ತೋರಿದರೆ ಜಿಲ್ಲಾಧಿಕಾರಿಗಳು ನೋಟಿಸ್‌ ನೀಡುವಂತೆ ಸೂಚಿಸಲಾಗಿದೆ.

ದೈನಂದಿನ ಕಾರ್ಯಾಚರಣೆಯ ಕಂದಾಯ ಭೂಮಿ ಒತ್ತುವರಿ ತೆರವು ಕಾರ್ಯ ಪ್ರಗತಿಯ ನಿರಂತರ ಮೇಲ್ವಿಚಾರಣೆಗೆ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಡ್ಯಾಶ್‌ಬೋರ್ಡ್‌ ಸ್ಥಾಪಿಸಲಾಗಿದೆ. ಇಲ್ಲಿ ಮಾಹಿತಿ ನಿತ್ಯವೂ ಅಪ್‌ ಡೇಟ್‌ ಆಗುತ್ತಿದ್ದು ಪ್ರಗತಿಯನ್ನು ಹಿರಿಯ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಾರೆ.ರೈತರು ಸಾಗುವಳಿ ಮಾಡುತ್ತಿರುವ ಭೂಮಿ ಹೊರತುಪಡಿಸಿ ಉಳಿದ ಒತ್ತುವರಿ ತೆರವುಗೊಳಿಸಲು ಸೂಚಿಸಲಾಗಿದ್ದು ಕೆರೆ-ಕುಂಟೆ, ಸ್ಮಶಾನ, ಗುಂಡು ತೋಪು, ರಸ್ತೆ ಒತ್ತುವರಿಯನ್ನು ಕೂಡಲೇ ತೆರವುಗೊಳಿಸಲು ಸೂಚನೆ ನೀಡಲಾಗಿದೆ.

Tags: Environment Minister Eshwar KhandreKarnataka forest departmentRevenue Department
Previous Post

ಚಾಮುಂಡಿಬೆಟ್ಟಕ್ಕೆ ಮಂಗಳವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿ

Next Post

ಹೈಕೋರ್ಟ್​ನಲ್ಲಿ ಸಿಎಂ Siddaramaiah ಅರ್ಜಿ ವಿಚಾರಣೆ ಕ್ಲೈಮಾಕ್ಸ್​

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post

ಹೈಕೋರ್ಟ್​ನಲ್ಲಿ ಸಿಎಂ Siddaramaiah ಅರ್ಜಿ ವಿಚಾರಣೆ ಕ್ಲೈಮಾಕ್ಸ್​

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada