• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ,ಗುರುತಿನ ಚೀಟಿ ಧರಿಸಲು ಆದೇಶ

ಮೋಹನ್‌ ಕುಮಾರ್‌ ದಾನಪ್ಪನವರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌..

ಪ್ರತಿಧ್ವನಿ by ಪ್ರತಿಧ್ವನಿ
May 18, 2026
in Top Story, ಇದೀಗ, ಕರ್ನಾಟಕ, ಸರ್ಕಾರಿ ಗೆಜೆಟ್
0
ಇಂಧನ ಇಲಾಖೆಯ ಎಲ್ಲಾ ಎಸ್ಕಾಂಗಳ ಲೈನ್ ಮ್ಯಾನ್ ಗಳು ಕಡ್ಡಾಯ ಸಮವಸ್ತ್ರ,ಗುರುತಿನ ಚೀಟಿ ಧರಿಸಲು ಆದೇಶ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಇಂಧನ ಇಲಾಖೆ ವ್ಯಾಪ್ತಿಯಲ್ಲಿನ ಎಲ್ಲಾ ನಿಗಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಮೀಟರ್ ರೀಡರ್, ಲೈನ್ ಮ್ಯಾನ್‌ಗಳು ಕರ್ತವ್ಯದ ಸಮಯದಲ್ಲಿ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲಗಳು ಮೂಡುತ್ತಿದ್ದವು. ಹೀಗಾಗಿ ಕಡ್ಡಾಯವಾಗಿ ಸಮವಸ್ತ್ರ ಮತ್ತು ಸರ್ಕಾರದ ಗುರುತಿನ ಚೀಟಿಯನ್ನು ಧರಿಸುವಂತೆ ಹಾಗೂ ನಕಲಿ ಸಿಬ್ಬಂದಿಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರ ಇಂಧನ ಸಚಿವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ.

ADVERTISEMENT
Shivanand Neelannavar NEWS : ಯುವಕರಿಗೆ ಸ್ಫೂರ್ತಿ ತುಂಬಿದ ಯುವ ಉದ್ಯಮಿಯ ಭಾಷಣ..! #pratidhvani

ಇತ್ತಿಚ್ಚೆಗೆ ಹುಬ್ಬಳ್ಳಿಯ ಆನಂದನಗರದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಸಮವಸ್ತ್ರ ಧರಿಸಿ ಇಂಧನ ಇಲಾಖೆಯ ಬಿಲ್ ಕಲೆಕ್ಟರ್ ಎಂದು ಸಾರ್ವಜನಿಕರ ಮನೆಗಳಿಗೆ ತೆರಳಿ ಹಣ ವಸೂಲಿ ಮಾಡುತ್ತಿದ್ದ. ಆ ವ್ಯಕ್ತಿಯನ್ನು ಸಾರ್ವಜನಿಕರು ಪತ್ತೆಹಚ್ಚಿ ಪೊಲೀಸ್‌ರ ವಶಕ್ಕೆ ನೀಡಿದ ಘಟನೆಯೊಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಪತ್ರಿಕೆಯಲ್ಲಿ ವರದಿಯಾಗಿತ್ತು.

ಈ ಕಾರಣಕ್ಕಾಗಿ ರಾಜ್ಯದ ಇಂಧನ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕೆಳಸಿಬ್ಬಂದಿ ಮೀಟರ್ ರೀಡರ್, ಬಿಲ್ ಕಲೆಕ್ಟರ್, ಲೈನ್‌ ಮ್ಯಾನ್‌ಗಳನ್ನೂ ಕಂಡು ಭಯಭೀತರಾದ ಜನ ಅಧಿಕೃತ ಸಿಬ್ಬಂದಿಗಳನ್ನು ಕಂಡರು ಅನುಮಾನ ಪಡುವಸ್ಥಿತಿ ಎದುರಾಗಿದೆ. ಇದನ್ನು ದೂರವಾಗಿಸಲು ಇಂಧನ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬೆಸ್ಕಾಂ, ಸೆಸ್ಕ್, ಮೆಸ್ಕಾಂ, ಹೆಸ್ಕಾಂ, ಜೆಸ್ಕಾಂಗಳಲ್ಲಿ ಸೇರಿದಂತೆ ಎಲ್ಲಾ ನಿಗಮ/ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಶಿಸ್ತು ಪಾಲಿಸಬೇಕು ಎಂದು ಸರ್ಕಾರದ ಗಮನ ಸೆಳೆದಿದ್ದರು.

ಇದನ್ನೂ ಓದಿ : ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

ಅಲ್ಲದೆ ಸಿಬ್ಬಂದಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ಗ್ರಾಹಕರ/ಸಾರ್ವಜನಿಕರ ಮನೆಗೆ ಕಾರ್ಯನಿಮಿತ್ಯ ತೆರಳುವಾಗ ಶುಭ್ರವಾಗಿ ತಲೆ ಕೂದಲು ಮತ್ತು ಗಡ್ಡಗಳನ್ನು ಚೊಕ್ಕವಾಗಿ ಮಾಡಿಸಿಕೊಂಡು ಇಲಾಖೆಯ ಸಮವಸ್ತ್ರಗಳನ್ನು ಹಾಗೂ ಇಲಾಖೆ ನೀಡಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿಕೊಳ್ಳಬೇಕು. ಅಲ್ಲದೆ ನಕಲಿ ಬಿಲ್ ಕಲೆಕ್ಟರ್,ಮೀಟರ್ ರೀಡರ್, ಲೈನ್ ಮ್ಯಾನ್‌ ಗಳ ಹಾವಳಿಯಿಂದ ಬೇಸತ್ತು ಭಯಬೀತರಾದ ಸಾರ್ವಜನಿಕರಿಗೆ/ಗ್ರಾಹಕರ ಆತಂಕ ದೂರವಾಗಿಸಬೇಕು ಎಂದು ಮನವಿ ಮಾಡಿದ್ದರು.

ಈ ಆಂತಕದಿಂದ ಸಾರ್ವಜನಿಕರನ್ನು ಹೊರತರಲು ಆಯಾ ನಿಗಮದ ಪ್ರತಿ ಕಛೇರಿ ವ್ಯಾಪ್ತಿಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ, ಎಫ್‌ ಎಂ, ರೇಡಿಯೋ, ಸ್ಥಳೀಯ ಹಾಗೂ ಇತರೆ ಟಿವಿ ಮಾಧ್ಯಮಗಳಲ್ಲಿ, ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟಣೆ ಹೊರಡಿಸಿ ಪರಿಣಾಮಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕಿದೆ. ಇದಕ್ಕಾಗಿ ಎಲ್ಲಾ ನಿಗಮ/ಸಂಸ್ಥೆಗಳಿಗೆ ಸೂಕ್ತ ಆದೇಶ ನೀಡುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪನವರು ಇಂಧನ ಸಚಿವರಿಗೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮಾರ್ಗದರ್ಶನದಲ್ಲಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ!

Tags: BescomBill CollectorDesciplaneHESCOMHescom workersHome DepartmentK J GeorgeKarnataka GovernmentKarnataka Police Complaint AuthorityKPCLline manMohan Kumar DanappaPower DepartmentPower minister
Previous Post

ಸಂತೆಮಾಳದಲ್ಲಿ ಯುವಜನರ ಭವಿಷ್ಯದ ಕನಸುಗಳು

Next Post

“ದರ್ಶನ್ ಸಿಎಂ ಆದರೆ ನಾನು ಡಿಸಿಎಂ” : “ರೈಲಿನಿಂದ ಜೈಲಿನವರೆಗೂ ಫ್ರೀ”

Related Posts

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ
Top Story

ಆರ್‌ಎಸ್‌ಎಸ್‌ ಹೆಸರಲ್ಲಿ ರಾಜಕೀಯ ರಣಕಹಳೆ: ಖರ್ಗೆ-ವಿಜಯೇಂದ್ರ ನಡುವೆ ವಾಕ್ಸಮರ

by ಪ್ರತಿಧ್ವನಿ
June 10, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಗ್ವಾದ ತೀವ್ರಗೊಂಡಿದೆ. ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಮಗೆ ಜೀವ ಬೆದರಿಕೆ ಬಂದಿರುವುದನ್ನು...

Read moreDetails
ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

ಕಾರ್ಮಿಕರ ಕಲ್ಯಾಣ ಯೋಜನೆಯಲ್ಲಿ ಕೋಟಿ ಕೋಟಿ ಲೂಟಿ? ಸರ್ಕಾರಕ್ಕೆ ಅಶೋಕ್ ಪ್ರಶ್ನೆಗಳ ಸುರಿಮಳೆ

June 10, 2026
ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

ದೇವೇಗೌಡರ ರಾಜ್ಯಸಭೆ ಟಿಕೆಟ್ ವಿವಾದಕ್ಕೆ ನಾಳೆ ತೆರೆ? ಜೆಪಿ ಭವನದಲ್ಲಿ ಮಾಜಿ ಪ್ರಧಾನಿಯ ಮಹತ್ವದ ಸುದ್ದಿಗೋಷ್ಠಿ

June 9, 2026
ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

ಶಕ್ತಿ ಯೋಜನೆಯ ಹೊಡೆತಕ್ಕೆ ಸಿಲುಕಿ ದುರಂತ ಅಂತ್ಯಕಂಡಿತಾ ವ್ಯಾಪಾರಿ ಕುಟುಂಬ..?

June 9, 2026
ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

ಟಿಎಂಸಿಯಲ್ಲಿ ಬಂಡಾಯದ ಬಿರುಗಾಳಿಯ ನಡುವೆ ದೀದಿ ಬೆನ್ನಿಗೆ ನಿಂತ ಸಂಸದರು : ಭಿನ್ನಮತೀಯರ ತರಾಟೆ

June 9, 2026
Next Post
“ದರ್ಶನ್ ಸಿಎಂ ಆದರೆ ನಾನು ಡಿಸಿಎಂ” : “ರೈಲಿನಿಂದ ಜೈಲಿನವರೆಗೂ ಫ್ರೀ”

“ದರ್ಶನ್ ಸಿಎಂ ಆದರೆ ನಾನು ಡಿಸಿಎಂ” : “ರೈಲಿನಿಂದ ಜೈಲಿನವರೆಗೂ ಫ್ರೀ”

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada