• Home
  • About Us
  • ಕರ್ನಾಟಕ
Thursday, October 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

ಯಲಚಹಳ್ಳಿ ಕೆರೆಯಂಗಳದ ಸೌರ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ. ಕುಸುಮ್ ಸಿ ಯೋಜನೆಯಡಿ 1383 ಕೃಷಿ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್. ಹೊಸಕೋಟೆಯ 33 ಗ್ರಾಮಗಳ ರೈತರಿಗೆ ಅನುಕೂಲ

ಪ್ರತಿಧ್ವನಿ by ಪ್ರತಿಧ್ವನಿ
October 30, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram


ಪಿಎಂ ಕುಸುಮ್‌- ಸಿ ಯೋಜನೆಯಡಿ ಹೊಸಕೋಟೆಯ ಯಲಚಹಳ್ಳಿ ಕೆರೆ ಅಂಗಳದಲ್ಲಿ ಸ್ಥಾಪಿಸಿರುವ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಗುರುವಾರ ಚಾಲನೆ ನೀಡಿದರು.

ADVERTISEMENT

ಹೊಸಕೋಟೆ ಶಾಸಕ ಶರತ್‌ ಬಚ್ಚೇಗೌಡ ಅವರೊಂದಿಗೆ ಸೌರ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, “ಈ ಘಟಕದಲ್ಲಿ 7.3 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಆಗಲಿದ್ದು, ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಮುಗಬಾಳ ಗ್ರಾಮ ಪಂಚಾಯ್ತಿಯ ಒಟ್ಟು 33 ಗ್ರಾಮಗಳ 1383 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ,”ಎಂದರು.

“ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸಲು ನೆರವಾಗುವ ಫೀಡರ್‌ ಮಟ್ಟದ ಸೌರೀಕರಣ ಯೋಜನೆಯಾದ ‘ಕುಸುಮ್‌- ಸಿ’ಗೆ ವೇಗ ನೀಡಿ, ಶಕ್ತಿ ತುಂಬಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ. ಈ ಯೋಜನೆಯಿಂದ ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್‌ ನೀಡಲು ಸಾಧ್ಯವಾಗಲಿದೆ.ಯಲಚಹಳ್ಳಿಯ ಈ ಸೌರ ಘಟಕದಿಂದ ಒಟ್ಟು 4 ಕೃಷಿ ಫೀಡರ್‌ಗಳು ಸೋಲಾರ್‌ ವಿದ್ಯುತ್‌ ವಿತರಣೆ ಜಾಲವಾಗಿ ಬದಲಾಗಲಿದೆ,” ಎಂದರು.

“ಕುಸುಮ್-ಸಿ ಯೋಜನೆ ರೈತರಿಗೆ ಅದರಲ್ಲೂ ಮುಖ್ಯವಾಗಿ ಬೆಂಗಳೂರಿನ ಗೇಟ್‌ವೇ ಎನಿಸಿಕೊಂಡಿರುವ ಹೊಸಕೋಟೆ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿದೆ. ಯೋಜನೆ ಜಾರಿಗೊಳಿಸಲು ಸರ್ಕಾರ ಎಲ್ಲಾ ರೀತಿಯ ಬೆಂಬಲ ನೀಡುತ್ತಿದೆ. ಸ್ಥಳೀಯ ಶಾಸಕರಾದ ಶರತ್‌ ಬಚ್ಚೇಗೌಡ ಅವರು ಆಸಕ್ತಿ ವಹಿಸಿ ಯೋಜನೆ ಅನುಷ್ಠಾನಕ್ಕೆ ನೆರವಾಗಿದ್ದಾರೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ,” ಎಂದರು.

“ಸರ್ಕಾರಿ ಭೂಮಿ ಲಭ್ಯವಿರದ ಸ್ಥಳಗಳಲ್ಲಿ ರೈತರೇ ಭೂಮಿಯನ್ನು ಗುತ್ತಿಗೆ ನೀಡುವ ಮೂಲಕ ವಾರ್ಷಿಕ ಆದಾಯಗಳಿಸಬಹುದಾಗಿದೆ. ಹಾಗಾಗಿ, ರೈತರು ಭೂಮಿ ನೀಡಲು ಮುಂದೆ ಬರಬೇಕು. ಕುಸುಮ್‌ ಸಿ ಯೋಜನೆಯಡಿ ಪ್ರತಿ ಎಕರೆ ಭೂಮಿಗೆ 25 ಸಾವಿರ ರೂ. ಅನ್ನು ಖಾಸಗಿ ವಿದ್ಯುತ್ ಉತ್ಪಾದಕರು ಪಾವತಿಸಬೇಕು. ಆ ಮೊತ್ತವನ್ನು ಜಿಲ್ಲಾಧಿಕಾರಿಗಳ ಬಳಿ ಇಟ್ಟು ಉಪಕೇಂದ್ರ ಇರುವ ಗ್ರಾಮದ ಸರ್ಕಾರಿ ಶಾಲೆ, ಅಂಗನವಾಡಿಗಳ ಅಭಿವೃದ್ಧಿಗೆ ಬಳಸಿಕೊಳ್ಳಲಾಗುವುದು. ಖಾಸಗಿ ಭೂಮಿಯಾಗಿದ್ದರೆ, ನವೀಕರಿಸಬಹುದಾದ ಇಂಧನ ಸೇವಾ ಕಂಪನಿಯ ಡೆವಲಪರ್‌ಗಳು ಗುತ್ತಿಗೆಗೆ ತೆಗೆದುಕೊಂಡು, ಭೂಮಾಲೀಕರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡುತ್ತಾರೆ,” ಎಂದು ಹೇಳಿದರು.

“ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪಕೇಂದ್ರಗಳ ಬಳಿ ಸೌರ ಘಟಕಗಳನ್ನು ಸ್ಥಾಪಿಸಲಾಗುತ್ತದೆ. ಖಾಸಗಿಯವರು ಸೌರ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಸರ್ಕಾರ ಖರೀದಿಸಿ ಆಯಾ ಫೀಡರ್‌ಗಳ ವ್ಯಾಪ್ತಿಯ ಕೃಷಿ ಪಂಪ್‌ಸೆಟ್‌ಗಳಿಗೆ ಪೂರೈಸುತ್ತದೆ. ಹಗಲು ವೇಳೆ ಸೌರ ವಿದ್ಯುತ್ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿರುವುದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲೇ ಸಮರ್ಪಕ ವಿದ್ಯುತ್ ಲಭ್ಯವಾಗಲಿದೆ,” ಎಂದು ಸಚಿವರು ಹೇಳಿದರು.

“ಕುಸುಮ್‌-ಸಿ ಜತೆಗೆ ಪಂಪ್‌ಸೆಟ್‌ಗೆ ಅಗತ್ಯ ಇರುವ ವಿದ್ಯುತ್ತನ್ನು ಜಮೀನಿನಲ್ಲೇ ಉತ್ಪಾದಿಸಲು ನೆರವಾಗುವ ಪಿಎಂ ಕುಸುಮ್-ಬಿ ಯೋಜನೆಯ ಲಾಭವನ್ನು ರೈತರು ಪಡೆಯಬೇಕು. ಕೇಂದ್ರ ಸರ್ಕಾರವು ಯೋಜನೆಗೆ ಶೇ.30ರಷ್ಟು ಸಹಾಯಧನ ಒದಗಿಸಿದರೆ, ರಾಜ್ಯ ಸರ್ಕಾರವು ಶೇ.50ರಷ್ಟು ಸಬ್ಸಿಡಿ ನೀಡುತ್ತಿದೆ. ಫಲಾನುಭವಿಗಳು ಶೇ.20ರಷ್ಟನ್ನು ಭರಿಸಿದರೆ ಸಾಕು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯ ಪಡೆಯಬಹುದು,”ಎಂದರು.

120 ಹೊಸ ಸಬ್‌ಸ್ಟೇಷನ್‌
“ನಮ್ಮ ಸರ್ಕಾರ ಬಂದ ಸಂದರ್ಭದಲ್ಲಿ 8-9 ಸಾವಿರ ಮೆಗಾ ವ್ಯಾಟ್‌ನಷ್ಟಿದ್ದ ವಿದ್ಯುತ್‌ ಬೇಡಿಕೆ ಏಕಾಏಕಿ 18 ಸಾವಿರ ಮೆಗಾವ್ಯಾಟ್‌ಗೆ ಏರಿತು. ಆಗ ಅನ್ಯ ರಾಜ್ಯಗಳೊಂದಿಗೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಂಡು ಜನರಿಗೆ ತೊಂದರೆ ಆಗದಂತೆ ನೋಡಿಕೊಂಡೆವು. ನಂತರದ ದಿನಗಳಲ್ಲಿ ಹಲವಾರು ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡು ವಿದ್ಯುತ್‌ ಉತ್ಪಾದನೆ ಹೆಚ್ಚಿಸಲಾಗಿದೆ. ಸದ್ಯ ವಿದ್ಯುತ್‌ ಕೊರತೆ ಇಲ್ಲ. ಆದರೆ, ಲೋಡ್‌ ಹೆಚ್ಚಳವಾಗಿ ಪೂರೈಕೆಯಲ್ಲಿ ಸಮಸ್ಯೆ ಆಗುತ್ತದೆ. ಇದನ್ನು ಸರಿಪಡಿಸುವ ಉದ್ದೇಶದಿಂದ 120 ಹೊಸ ಸಬ್‌ಸ್ಟೇಷನ್‌ಗಳನ್ನು ನಿರ್ಮಿಸಲಾಗುವುದು,” ಎಂದು ವಿವರಿಸಿದರು.

ಶಾಲಾ ಕಟ್ಟಡದ ಶಂಕು ಸ್ಥಾಪನೆ
ಇದೇ ವೇಳೆ ಸಚಿವ ಕೆ.ಜೆ.ಜಾರ್ಜ್ ಅವರು ವೋಲ್ವೊದ ಸಿಎಸ್‌ಆರ್‌ ನಿಧಿಯಡಿ 3.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ತಾವರೆಕೆರೆಯ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಕಿಯೋನಿಕ್ಸ್‌ ಅಧ್ಯಕ್ಷ ಶರತ್‌ ಬಚ್ಚೇಗೌಡ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್‌. ಶಿವಶಂಕರ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: biography of k j georgecm siddaramaiah and k j georgeenergy minister k j georgeK J Georgek j george biok j george biographyk j george educationk j george familyk j george historyk j george interviewk j george kannadak j george latest newsk j george livek j george newsk j george on gruha jyoti applicationk j george political journeyk j george speechk j george statusKJ Georgekj george edkj george firkj george mlakj george sonminister k j george reactmla kj george
Previous Post

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

Next Post

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

Related Posts

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
0

"ಟನಲ್ ರಸ್ತೆ, ಮೇಲ್ಸೇತುವೆ ಯೋಜನೆ, 'ಬಿ' ಖಾತೆಯಿಂದ 'ಎ' ಖಾತೆ ನೀಡುವ ಯೋಜನೆ ಕುರಿತು ಕೇಂದ್ರ ನಗರಾಭಿವೃದ್ಧಿ ಸಚಿವರಾದ ಮನೋಹಲ್ ಲಾಲ್ ಖಟ್ಟರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು....

Read moreDetails

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

October 30, 2025

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

October 30, 2025
ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

ತುರ್ತು ನಿರ್ಗಮನ ದ್ವಾರದ ಅರಿವಿಲ್ಲದವರಿಂದ ಸಂಚಾರದಟ್ಟಣೆ ನಿವಾರಣೆ ಉಪನ್ಯಾಸ ಎಂತಹ ವಿಪರ್ಯಾಸ!: ಬಿ.ವಿ. ಶ್ರೀನಿವಾಸ್

October 30, 2025
Next Post

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

Recent News

Top Story

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 30, 2025
Top Story

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

by ಪ್ರತಿಧ್ವನಿ
October 30, 2025
Top Story

Sharana Prakash Patil: ಕೌಶ್ಯಲ ತರಬೇತಿ ಕೇಂದ್ರ ಆರಂಭಿಸುವವರಿಗೆ ಅಗತ್ಯ ಭೂಮಿ ಮಂಜೂರು..!

by ಪ್ರತಿಧ್ವನಿ
October 30, 2025
Top Story

KJ George: ಹೊಸಕೋಟೆಯ ಸೌರ ಘಟಕಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಚಾಲನೆ

by ಪ್ರತಿಧ್ವನಿ
October 30, 2025
Top Story

KJ George: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
October 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ಟನಲ್ ರಸ್ತೆ, ‘ಎ’ ಖಾತೆ ಯೋಜನೆಗಳಿಗೆ ಕೇಂದ್ರ ಸಚಿವರ ಮೆಚ್ಚುಗೆ, ರಾಜ್ಯದ ಬೇಡಿಕೆಗಳ ಸಲ್ಲಿಕೆ: ಡಿ.ಕೆ. ಶಿವಕುಮಾರ್

October 30, 2025

ಕನ್ನಡ ಚಿತ್ರರಂಗದ ಹದಿನಾಲ್ಕು ಜನಪ್ರಿಯ ನಾಯಕರು ಈ ಚಿತ್ರದ ಹಾಡೊಂದರಲ್ಲಿ ಅಭಿನಯಿಸಿರುವುದು ವಿಶೇಷ .

October 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada