• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಪಶ್ಚಿಮ ಘಟ್ಟದಲ್ಲಿ ಡ್ಯಾಂ ನಿರ್ಮಿಸುವುದರಿಂದ ಪರಿಸರಕ್ಕೆ ತೀವ್ರ ಹಾನಿ ಉಂಟುಮಾಡಲಿದೆ

ಫಾತಿಮಾ by ಫಾತಿಮಾ
August 16, 2021
in ಕರ್ನಾಟಕ
0
ಪಶ್ಚಿಮ ಘಟ್ಟದಲ್ಲಿ ಡ್ಯಾಂ ನಿರ್ಮಿಸುವುದರಿಂದ ಪರಿಸರಕ್ಕೆ ತೀವ್ರ ಹಾನಿ ಉಂಟುಮಾಡಲಿದೆ
Share on WhatsAppShare on FacebookShare on Telegram

ಪರಿಸರ ಸೂಕ್ಷ್ಮ ಪ್ರದೇಶವಾದ ಪಶ್ಚಿಮ ಘಟ್ಟದಲ್ಲಿ ‘ಸಮುದ್ರಕ್ಕೆ ಹರಿಯುವ ನೀರನ್ನು ಹಿಡಿದಿಡಲು’ 1,400 ಚೆಕ್ ಡ್ಯಾಂಗಳನ್ನು ನಿರ್ಮಿಸುವುದು ಪರಿಸರಕ್ಕೆ ತೀವ್ರ ಹಾನಿಯನ್ನು ಉಂಟುಮಾಡಲಿದೆ ಎಂದು ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

ಅಣೆಕಟ್ಟುಗಳಿಗಾಗಿ ನೀರಾವರಿ ಸಚಿವಾಲಯದಿಂದ ಹಣವನ್ನು ಕೋರಿ ಸಣ್ಣ ನೀರಾವರಿ ಇಲಾಖೆಯು ಈ ಪ್ರಸ್ತಾಪವನ್ನು ಇತ್ತೀಚೆಗೆ ಮಂಡಿಸಿತ್ತು. ಪಶ್ಚಿಮ ಘಟ್ಟಗಳಲ್ಲಿ ವರದಿಯಾಗಿರುವ ಭೂಕುಸಿತಕ್ಕೆ ಇಂತಹ ಯೋಜನೆಗಳು ಒಂದು ಪ್ರಮುಖ ಕಾರಣವಾಗಿದೆ ಎಂದು ಪರಿಸರ ತಜ್ಞರು ದಶಕಗಳಿಂದಲೂ ಪ್ರತಿಪಾದಿಸುತ್ತಾ ಬಂದಿದ್ದಾರೆ. ‘ಸಮುದ್ರಕ್ಕೆ ನೀರಿನ ಹರಿವನ್ನು ತಡೆಯುವುದು’ ಎಂಬ ಪರಿಕಲ್ಪನೆಯು ಸಮುದ್ರ ಜೀವಿಗಳ ಮೇಲೂ ಪರಿಣಾಮ ಬೀರಲಿದೆ.

ಡೆಕ್ಕನ್ ಹೆರಾಲ್ಡ್ ಜೊತೆ ಮಾತನಾಡಿದ ಪರಿಸರವಾದಿ ಎ ಎನ್ ಯಲ್ಲಪ್ಪ ರೆಡ್ಡಿ, ಪಶ್ಚಿಮ ಘಟ್ಟಗಳ ದುರ್ಬಲವಾದ ಪರಿಸರ ವ್ಯವಸ್ಥೆಯಲ್ಲಿ ಮಧ್ಯಪ್ರವೇಶಿಸುವುದು ಆ ಪ್ರದೇಶಗಳಿಗೆ ಸಮಸ್ಯಾತ್ಮಕವಾಗಲಿದೆ ಎಂದಿದ್ದಾರೆ.

“ಈಗಾಗಲೇ ಈ ಪ್ರದೇಶದಲ್ಲಿ ಅಸ್ತಿತ್ವದಲ್ಲಿರುವ ಮಿನಿ-ಹೈಡಲ್ ಯೋಜನೆಗಳು ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತಿವೆ. ಈ ಚೆಕ್ ಡ್ಯಾಂಗಳನ್ನು ನಿರ್ಮಿಸುವುದು ಅಲ್ಲಿನ ಪರಿಸರವನ್ನು ಇನ್ನಷ್ಟು ಹದಗೆಡಿಸುತ್ತದೆ ” ಎಂದು ಅವರು ಹೇಳಿದ್ದಾರೆ. ಅಂತಹ ಯೋಜನೆಗಳ ಸುತ್ತಲಿನ ಪ್ರದೇಶಗಳು ಅರಣ್ಯಗಳಂತೆ ನೀರನ್ನು ಹಿಡಿದಿಡಲು ಸಾಧ್ಯವಿಲ್ಲ ಮತ್ತು ಭೂಕುಸಿತ ಸಮಸ್ಯೆಯನ್ನು ಉಲ್ಬಣಗೊಳಿಸುತ್ತದೆ. ಮೇಲಾಗಿ, ನದಿ ನೀರು ಸಮುದ್ರಕ್ಕೆ ಹರಿಯುವುದನ್ನು ತಡೆಯುವ ಇಂತಹ ಯೋಜನೆಗಳು ನದೀಮುಖ ಜಲವನ್ನು ಒಣಗಿಸುತ್ತವೆ ಮತ್ತು ಹಲವಾರು ಜಾತಿಯ ಸಮುದ್ರ ಜೀವಿಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಈ ಚೆಕ್ ಡ್ಯಾಂಗಳನ್ನು ‘ನೀರನ್ನು ಟ್ಯಾಪ್ ಮಾಡಲು’ ಸರ್ಕಾರವು ನಿರ್ಮಿಸಬಹುದು ಎಂದು ಹೇಳುವ ಇನ್ನೊಬ್ಬ ಪರಿಸರವಾದಿ ಶಿವಾನಂದ್ ಕಳವೆ ಅಂತಹ ರಚನೆಗಳು ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ. ಯಾವುದೇ ಅಣೆಕಟ್ಟುಗಳು ಅಥವಾ ಚೆಕ್ ಡ್ಯಾಂಗಳನ್ನು ನಿರ್ಮಿಸಲು ಅಡಿಪಾಯಕ್ಕೆ ಬಲವಾದ ರಾಕ್ ಬೇಸ್ ಅಗತ್ಯವಿರುತ್ತದೆ, ಆದರೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಇಂತಹ ಬೇಸ್ ಇರುವುದು ಕಷ್ಟ ಎಂದು ಹೇಳಿರುವ ಅವರು “ಅಂತಹ ರಚನೆಗಳನ್ನು ನಿರ್ಮಿಸಿದರೂ ಸಹ, ಮಳೆ ನೀರನ್ನು ಸಂಗ್ರಹಿಸುವ ಮರಗಳು ಮತ್ತು ಇತರ ಅಂಶಗಳು ಅವನ್ನು ಛಿದ್ರವಾಗಿಸಬಹುದು ಅಥವಾ ಒಂದೆರಡು ವರ್ಷಗಳ ಹಿಂದೆ ಪ್ರವಾಹದ ಸಮಯದಲ್ಲಿ ನೋಡಿದಂತೆ ಅವುಗಳು ಕುಸಿದು ಬೀಳಬಹುದು” ಎಂದು ಅವರು ಹೇಳಿದರು.

ಅವರ ಪ್ರಕಾರ, ಸಮುದ್ರಕ್ಕೆ ಸೇರುವ ನದಿ ನೀರನ್ನು ಟ್ಯಾಪ್ ಮಾಡುವ ಬದಲು, ಸರ್ಕಾರವು ಕೃಷ್ಣಾ ಮತ್ತು ಇತರ ಪ್ರಮುಖ ನದಿಗಳ ಪ್ರವಾಹದ ನೀರನ್ನು ಸರೋವರಗಳಿಗೆ ತಿರುಗಿಸುವತ್ತ ಗಮನ ಹರಿಸಬೇಕು.

ಈ ಬಗ್ಗೆ ಸಣ್ಣ ನೀರಾವರಿ ಸಚಿವ ಜೆ ಸಿ ಮಾಧುಸ್ವಾಮಿಯನ್ನು ಡೆಕ್ಕನ್ ಹೆರಾಲ್ಡ್ ಸಂಪರ್ಕಿಸಿದಾಗ, ಚೆಕ್ ಡ್ಯಾಂಗಳನ್ನು 50-60 ಎಕರೆ ಅಳತೆಯ ಸಣ್ಣ ಭೂಮಿಗಳಿಗೆ ನೀರುಣಿಸಲು ಮತ್ತು ಕುಡಿಯುವ ನೀರಿನ ಉದ್ದೇಶಗಳಿಗಾಗಿ ಮಾತ್ರ ಬಳಸಲಾಗುವುದು ಎಂದು ಹೇಳಿದ್ದಾರೆ.

“ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚೆಕ್ ಡ್ಯಾಂಗಳು ಬರಲಿವೆ” ಎಂದ ಅವರು ಅಣೆಕಟ್ಟುಗಳಿಂದ ಯಾವುದೇ ಅರಣ್ಯ ಭೂಮಿ ಮುಳುಗುವುದಿಲ್ಲ ಎಂದೂ ಭರವಸೆ ಕೊಟ್ಟಿದ್ದಾರೆ.

ಹೊಳೆಗಳಿಗೆ ಅಡ್ಡಲಾಗಿ ನಿರ್ಮಿಸಲಾಗುವ ಚೆಕ್ ಡ್ಯಾಂಗಳು ಕೇವಲ ಐದರಿಂದ ಆರು ಅಡಿಗಳಷ್ಟು ಎತ್ತರದಲ್ಲಿರುತ್ತವೆ ಮತ್ತು ಯಾವುದೇ ಪರಿಸರ ಸಮಸ್ಯೆಗಳನ್ನು ಉಂಟುಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

Tags: Basavaraj BommaiBJPDamsWestern Ghatsಬಿಜೆಪಿ
Previous Post

ನೆಹರೂ ಹುಕ್ಕಾಬಾರ್‌ ಮಾಡಿ ಎಂದ ಸಿ ಟಿ ರವಿ ಒಬ್ಬ ದೇಶದ್ರೋಹಿ – ರಮಾನಾಥ ರೈ

Next Post

ಮೈಸೂರು ; ತೈಲ ಬೆಲೆ, ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಮೋದಿ ಸರಕಾರದ ವಿರುದ್ಧ ಜನರ ಆಕ್ರೋಶ

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

ಮೈಸೂರು ; ತೈಲ ಬೆಲೆ, ಅಡುಗೆ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಮೋದಿ ಸರಕಾರದ ವಿರುದ್ಧ ಜನರ ಆಕ್ರೋಶ

Please login to join discussion

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada