Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

Eshwarappa Defends Statement Against Aajan : ಪ್ರತಿಭಟನೆಗೆಲ್ಲ ಹೆದರುವನಲ್ಲ: ಆಜಾನ್ ವಿರುದ್ಧ ಹೇಳಿಕೆಗೆ ಈಶ್ವರಪ್ಪ ಸಮರ್ಥನೆ

ಪ್ರತಿಧ್ವನಿ

ಪ್ರತಿಧ್ವನಿ

March 16, 2023
Share on FacebookShare on Twitter

ಶಿವಮೊಗ್ಗ: ಮಾ.16: ಅಜಾನ್ ಕೂಗ್ತಾರೆ, ಅಲ್ಲಾ ಕಿವುಡಾಗಿದ್ದಾನ..? ಇದು ನಿಲ್ಲುತ್ತೆ ಎಂದು ಹೇಳಿಕೆ ನೀಡಿ ಮುಸ್ಲಿಂ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಶಿವಮೊಗ್ಗ ಶಾಸಕ ಕೆಎಸ್ ಈಶ್ವರಪ್ಪ ತಮ್ಮ ಹೇಳಿಕೆ ಪುನಃ ಸಮರ್ಥಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿ, ಈ ತರಹ ನನ್ನ ವಿರುದ್ಧ ಪ್ರತಿಭಟನೆ ಮಾಡುವವರ ಬಗ್ಗೆ ನಾನು ತಲೆಕೆಡಿಸಿಕೊಳ್ಳಲ್ಲ ಎಂದರು.

ಹೆಚ್ಚು ಓದಿದ ಸ್ಟೋರಿಗಳು

ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ..!

ಎರಡು ತಿಂಗಳ ನಿರಂತರ ಹೋರಾಟ..! VISL ಉಳಿಸಿ ಎಂದು ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ಕಾರ್ಮಿಕರು..!

PRATAP SIMHA | ರಾಜಕೀಯ ಲಾಭಕ್ಕಾಗಿ ಮೀಸಲಾತಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಗೆ ದಲಿತರ ಮೇಲೆ ನೈಜ ಕಾಳಜಿ ಇಲ್ಲ

ಇದನ್ನ ಯಾವುದನ್ನು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ. ಜನಸಾಮಾನ್ಯರ ಮನಸ್ಸಿನಲ್ಲಿ ಏನಿದೆ..? ಅದನ್ನು ನಾನು ಬಾಯಿ ಬಿಟ್ಟು ಹೇಳುತ್ತೇನೆ. ಅನೇಕರಿಗೆ ಹೇಳುವುದಕ್ಕೆ ಆಗುವುದಿಲ್ಲ.‌ ನಾನು ಹೇಳುತ್ತೇನೆ. ಆಜಾನ್ ಕೂಗೋದ್ರಿಂದ ವಿದ್ಯಾರ್ಥಿಗಳಿಗೆ ಎಷ್ಟು ತೊಂದರೆ ಆಗುತ್ತದೆ ಎಂದು ಪೋಷಕರಿಗೆ ಗೊತ್ತಿದೆ. ವಿದ್ಯಾರ್ಥಿಗಳಿಗೂ ಗೊತ್ತಿದೆ. ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಈ ಆಜಾನ್ ತೊಂದರೆ ಏನು ಅಂತ ಗೊತ್ತು. ಯಾರೋ ಪ್ರತಿಭಟನೆ ಮಾಡ್ತಾರೆ ನನ ವಿರುದ್ಧ ಅಂತ ನಾನು ಬಹಿರಂಗವಾಗಿ ಹೇಳದೆ ಇರೋದಕ್ಕೆ ಆಗೋದಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಜಡ್ಜ್ಮೆಂಟ್ ಕೂಡ ಕೊಟ್ಟಿದೆ. ಬೇರೆಯವರಿಗೆ ತೊಂದರೆ ಆಗದಂತೆ ಇವರು ಆಜಾನ್ ಕೂಗಬೇಕು ಎಂದು ಸೂಚಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಆಜಾದ್ ಸಂಪೂರ್ಣ ನಿಷೇಧ ಇದೆ. ಇದಾಗ್ಯೂ ನಾನು ನೀಡಿರುವ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಾರೆ ಎಂದರೆ ಏನು ಮಾಡಲು ಆಗುವುದಿಲ್ಲ. ಜನಸಾಮಾನ್ಯರ ಭಾವನೆಗಳನ್ನು ನಾನು ಹೇಳುವವನೇ. ಎಷ್ಟು ಪ್ರತಿಭಟನೆ ಮಾಡಿದರು ನಾನು ಎದುರಿಸಲು ಸಿದ್ಧ ಎಂದರು.

ಮೂಡಿಗೆರೆ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಮುಖಂಡರ ಪ್ರತಿಭಟನೆ ಸಂಬಂಧ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಚುನಾಯಿತ ಪ್ರತಿನಿಧಿಗಳ ವಿರುದ್ಧ ಪ್ರತಿಭಟನೆಗೆ ಅವಕಾಶವಿದೆ. ಇಲ್ಲ ಅಂತ ನಾನು ಹೇಳೋದಿಲ್ಲ. ಅವಕಾಶ ಇಲ್ಲ ಅಂದರೆ ಅದನ್ನು ಪ್ರಜಾಪ್ರಭುತ್ವ ಎಂದು ಹೇಳಲಾಗದು. ಪ್ರತಿಭಟನೆ ಮಾಡಿರೋದು ಸರಿಯೋ ತಪ್ಪು ಎಂದು ಪ್ರತಿಭಟನೆ ಮಾಡಿದವರು ಯೋಜನೆ ಮಾಡಬೇಕು. ಸರಿ ಎನ್ನುವ ಹಾಗಿದ್ದರೆ ನಾವು ಎದುರಿಸಬೇಕು. ಸರಿಯಲ್ಲ ಎಂದರೆ ತಿದ್ದಿಕೊಳ್ಳಬೇಕು. ಇದೇ ವ್ಯವಸ್ಥೆ.! ಜನ ಪ್ರತಿನಿಧಿಗಳು ಮಾಡಿರುವ ಕೆಲಸ ಅಸಮಾಧಾನವಿದ್ದರೆ, ಸಹಜವಾಗಿ ಈ ತರಹ ಆಗುತ್ತದೆ. ಆಗ ನಾವು ಬೇಸರ ಮಾಡದೇ ಜನಗಳ ಬಳಿ ಹೋಗಿ ಕೂತುಕೊಳ್ಳಬೇಕು. ಅದನ್ನು ಸರಿ ಮಾಡುವ ಕೆಲಸವನ್ನು ಮಾಡಬೇಕು. ಇಲ್ಲವಾದರೆ ಯಾರೋ ಏನೋ ಹೇಳಿಕೊಂಡು ಹೋಗುತ್ತಾರೆ ಅದು ಹಾಗೆ ನಡೆದುಕೊಂಡು ಹೋಗುತ್ತದೆ. ಇನ್ನು ಕೆಲವರು ಬೇಕು ಎಂದೇ ಪ್ರತಿಭಟನೆ ಮಾಡುತ್ತಾರೆ. ಅದನ್ನು ಕೂಡ ನಾವು ಒಪ್ಪೋದಿಲ್ಲ. ಅವರು ಹೇಳಿದ ಹಾಗೆ ನಾವು ಕೇಳಲು ಆಗುವುದಿಲ್ಲ. ಎಂದರು.

ಸಚಿವ ವಿ ಸೋಮಣ್ಣ ವಿಚಾರದಲ್ಲಿ ಪ್ರತಿಕ್ರಿಯೆ ನೀಡಲು ಈಶ್ವರಪ್ಪ ಹಿಂದೆ ಮುಂದೆ ನೋಡಿದರು. ದೆಹಲಿಗೆ ಹೋಗಿ ಬಂದ ಮೇಲೆ ಮತ್ತೆ ಯಾಕೆ ನೀವು ಅದನ್ನು ಹಿಡ್ಕೊಳ್ತೀರ..? ಸಮಾಧಾಮ ಆಗಿದೆ ಎಂದು ಸೋಮಣ್ಣನೇ ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿಯಲ್ಲಿ ಒಂದು ವ್ಯವಸ್ಥೆ ಇದೆ. ಯಾರಿಗೆ ಅಸಮಾಧಾನ ಇರುತ್ತೋ ಅವರನ್ನ ದೆಹಲಿಗೆ ಕರೆದು ಮಾತನಾಡಿ ಕಳಿಸುವ ರೂಢಿ ಇದೆ. ಸೋಮಣ್ಣ ಅವರಿಗೆ ಈಗ ಸಮಾಧಾನ ಆಗಿದೆ. ಮತ್ತೆ ಯಾಕೆ ಹೇಳುತ್ತೀರಿ ಎಂದು ಈಶ್ವರಪ್ಪ ಹರಿಹಾಯ್ದರು. ಅವರಿಗೆ ಇವರಿಗೆ ಬೇಸರ ಆಗ್ತಾ ಇರುತ್ತೆ, ಅದು ಸಹಜ‌. ಕೇಂದ್ರ ನಾಯಕರು ಮಾತನಾಡಿದ್ದಾರೆ ಹಾಗಾಗಿ ಗೊಂದಲಗಳಿಲ್ಲ ಎಂದು ಈಶ್ವರಪ್ಪ ಹೇಳಿದರು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

PRANAYAM MOVIE ‘ಪ್ರಣಯಂ’ ಚಿತ್ರದ ರಿಲಿಕಲ್ ಸಾಂಗ್ ಲಾಂಚ್ ಮಾಡಿದ ಅಶ್ವಿನಿ ಮೇಡಂ..! #pratidhavni
ಇದೀಗ

PRANAYAM MOVIE ‘ಪ್ರಣಯಂ’ ಚಿತ್ರದ ರಿಲಿಕಲ್ ಸಾಂಗ್ ಲಾಂಚ್ ಮಾಡಿದ ಅಶ್ವಿನಿ ಮೇಡಂ..! #pratidhavni

by ಪ್ರತಿಧ್ವನಿ
March 21, 2023
ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket
Top Story

ಕೆ.ಆರ್‌ ಕ್ಷೇತ್ರ – ಗೆಲ್ಲಬಹುದಾದ ಕುದುರೆಗೆ ಟಿಕೆಟ್‌ ಕಂಟಕ..! : K.R.Kshetra – Ticket

by ನಾ ದಿವಾಕರ
March 21, 2023
ಬಾದಾಮಿ ಕ್ಷೇತ್ರದತ್ತ ಸಿದ್ದರಾಮಯ್ಯ ಪ್ರವಾಸ : ಬಾದಾಮಿ ಜನತೆಯಲ್ಲಿ ಚಿಗುರೊಡೆದ ಉತ್ಸಾಹ
ಕರ್ನಾಟಕ

ಬಾದಾಮಿ ಕ್ಷೇತ್ರದತ್ತ ಸಿದ್ದರಾಮಯ್ಯ ಪ್ರವಾಸ : ಬಾದಾಮಿ ಜನತೆಯಲ್ಲಿ ಚಿಗುರೊಡೆದ ಉತ್ಸಾಹ

by ಮಂಜುನಾಥ ಬಿ
March 24, 2023
ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 4 | #PRATIDHVANI
ಇದೀಗ

ದೊಡ್ಡಬಳ್ಳಾಪುರದ ತ್ರಿಕೋನ ಸ್ಪರ್ಧೆಯಲ್ಲಿ ಯಾರಿಗೆ ಒಲಿಯುತ್ತದೆ ವಿಜಯಲಕ್ಷ್ಮಿ | PART 4 | #PRATIDHVANI

by ಪ್ರತಿಧ್ವನಿ
March 26, 2023
ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!
Top Story

ಸಿ.ಟಿ ರವಿಗೆ ಮತ್ತೆ ಅವಮಾನ.. ಸಿದ್ದರಾಮಯ್ಯ ವಿರುದ್ಧ ಸೇಡಿಗೆ ಬಿದ್ದ ಬಿಜೆಪಿ..!

by ಕೃಷ್ಣ ಮಣಿ
March 25, 2023
Next Post
ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ “ಕಾಂತಾರ” ಸಿನಿಮಾ ಪ್ರದರ್ಶನ

ಸ್ವಿಜರ್ಲ್ಯಾಂಡ್ನ ಜಿನಿವಾ ನಗರದಲ್ಲಿ "ಕಾಂತಾರ" ಸಿನಿಮಾ ಪ್ರದರ್ಶನ

Telugu Power Star Pawan Kalyan : ‘ಕಬ್ಜ’ ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Telugu Power Star Pawan Kalyan : 'ಕಬ್ಜ' ಸಿನಿಮಾದ ಬಗ್ಗೆ ತೆಲುಗಿನ ಪವರ್ ಸ್ಟಾರ್ ಪವನ್ ಕಲ್ಯಾಣ್ ಮೆಚ್ಚುಗೆ..!

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ’ ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

Delhi Police issues A notice to Congress MP Rahul Gandhi : ʻಯುವತಿ ಮೇಲೆ ಲೈಂಗಿಕ ದೌರ್ಜನ್ಯ' ಹೇಳಿಕೆ ವಿಚಾರ : ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist