• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಅಗತ್ಯ ತರಬೇತಿ ವ್ಯವಸ್ಥೆ: ಎಂ.ಬಿ. ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
September 22, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಪರಿಶಿಷ್ಟ ಜಾತಿ/ವರ್ಗಗಳ ಉದ್ಯಮಿಗಳಿಗೆ (Entrepreneurs) ಸೂಕ್ತ ತರಬೇತಿಯ ಅಗತ್ಯವಿದೆ. ಈ ಸಂಬಂಧ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರೊಂದಿಗೆ ಚರ್ಚಿಸಿ ಈ ವ್ಯವಸ್ಥೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಹೇಳಿದ್ದಾರೆ.

ADVERTISEMENT

ಕರ್ನಾಟಕ ದಲಿತ ಉದ್ಯಮಿಗಳ ಸಂಘಟನೆ (ಕೆಇಡಿಎ) ಏರ್ಪಡಿಸಿದ್ದ ಬೃಹತ್ ಪ.ಜಾತಿ/ವರ್ಗಗಳ ಎಂಎಸ್‌ಎಂಇ ಸಮಾವೇಶದಲ್ಲಿ ಅವರು ಮಾತನಾಡಿದರು.

ಸರಿಯಾದ ರೀತಿಯಲ್ಲಿ ತರಬೇತಿ ನೀಡುವುದರಿಂದ ಪರಿಶಿಷ್ಟ ಉದ್ಯಮಿಗಳನ್ನು ಇನ್ನೂ ಹೆಚ್ಚು ಮಾಡಬಹುದು ಎಂದು ತಿಳಿಸಿದ ಅವರು, ಉದ್ಯಮ ಕ್ಷೇತ್ರದಲ್ಲಿ ಪ.ಜಾತಿ/ವರ್ಗಗಳ ಉದ್ಯಮಶೀಲರ ಬೆಳವಣಿಗೆಗೆ ಸರ್ಕಾರ ಒತ್ತಾಸೆಯಾಗಿದೆ. ಆರ್ಥಿಕ, ಮೂಲಸೌಕರ್ಯ, ಸ್ಟಾರ್ಟಪ್ ಹಾಗೂ ಎಂಎಸ್‌ಎಂಇ ಗಳಿಗೆ ನಿಯಂತ್ರಕ ವ್ಯವಸ್ಥೆ ಇತ್ಯಾದಿ ಉಪಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ, ಕೆಎಸ್‌ಎಫ್‌ಸಿ, ಕೆಯುಎಂ, ಜಿಲ್ಲಾ ಕೈಗಾರಿಕಾ ಕೇಂದ್ರಗಳು ಉದ್ಯಮಿಗಳ ಅಹವಾಲುಗಳನ್ನು ನಿಯಮಿತವಾಗಿ ಆಲಿಸುತ್ತಿವೆ ಎಂದು ವಿವರಿಸಿದರು.

ಕೆಐಎಡಿಬಿ ಪ್ಲಾಟ್ ಹಾಗೂ ಕೆಎಸ್‌ಎಸ್‌ಐಡಿಸಿ ಷೆಡ್‌ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ/ವರ್ಗದ ಉದ್ಯಮಿಗಳಿಗೆ ಶೇ. 24.1 ರಷ್ಟು ಮೀಸಲು, ಭೂಮಿ ಮಂಜೂರಾತಿಯಲ್ಲಿ ಶೇ. 75 ರಷ್ಟು ಸಬ್ಸಿಡಿ, ಕೆಎಸ್ ಎಫ್‌ಸಿಯಿಂದ ರೂ. 10 ಕೋಟಿಯವರೆಗೆ ಶೇ. 4ರಷ್ಟು ಬಡ್ಡಿ ದರದಲ್ಲಿ ಸಾಲ ನೆರವು, ಮಾರ್ಜಿನ್ ಮನಿಯ ಶೇ. 50 ರಷ್ಟು (ಗರಿಷ್ಠ ರೂ. 75 ಲಕ್ಷ) ಬೀಜಧನದ ನೆರವು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಎಂದರು.

ಎಸ್ಸಿ, ಎಸ್ಟಿ ಉದ್ಯಮಿಗಳಿಗೆ ಮಾಡಿರುವ ನಿವೇಶನ ಹಂಚಿಕೆಯಡಿ ಕೆಐಎಡಿಬಿಗೆ ಸರ್ಕಾರದಿಂದ 900 ಕೋಟಿ ರೂಪಾಯಿ ಬಾಕಿ ಇದೆ. ಹಾಗೆಂದು, ನಾವು ನೆರವನ್ನು ನಿಲ್ಲಿಸಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾಗಿರುವ ವೆಂಕಟಯ್ಯನವರಂಥವರು ಇತ್ತ ಗಮನ ಹರಿಸಿ, ಒತ್ತಡ ಹೇರಿದರೆ ಕೈಗಾರಿಕಾ ಇಲಾಖೆಗೂ ಒಳ್ಳೆಯದಾಗುತ್ತದೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ.ಜಾತಿ ಉದ್ಯಮಿಗಳಿಗೆ ಶೇ. 75ರಷ್ಟು ಸಬ್ಸಿಡಿ ಬಾಬ್ತಿಗೆ ರೂ. 245.50 ಕೋಟಿ, ಹಾಗೆಯೇ ಪ.ವರ್ಗದವರಿಗೆ ರೂ. 62.24 ಕೋಟಿ ಬಿಡುಗಡೆಗೊಳಿಸಿದೆ. ಜತೆಗೆ, ಕೈಗಾರಿಕಾ ಪ್ರದೇಶಗಳ ಸಿಎ ಪ್ಲಾಟ್‌ಗಳಲ್ಲಿ ಶೇ. 24.1 ರಷ್ಟನ್ನು ಈ ಸಮುದಾಯಗಳಿಗಾಗಿ ಮೀಸಲಾತಿ ನಿಗದಿಗೊಳಿಸಿ, ಹಂಚಿಕೆ ಮಾಡಲಾಗುತ್ತಿದೆ ಎಂದು ಸಚಿವರು ಹೇಳಿದರು.

ಭೂಮಿ ಮಂಜೂರು ಕಳೆದ 15 ತಿಂಗಳ ಅವಧಿಯಲ್ಲಿ ಸರ್ಕಾರವು ಪರಿಶಿಷ್ಟ ಜಾತಿಯ 121 ಉದ್ಯಮಿಗಳಿಗೆ 130 ಎಕರೆ ಹಾಗೂ ಪರಿಶಿಷ್ಟ ವರ್ಗದ 39 ಉದ್ಯಮಿಗಳಿಗೆ 42 ಎಕರೆ ಭೂಮಿ ಮಂಜೂರು ಮಾಡಿದೆ ಎಂದು ಇದೇ ವೇಳೆ ತಿಳಿಸಿದರು.

ಈ ವೇಳೆ ಕೇಂದ್ರ ಸಚಿವೆ ಶೋಭಾ‌ ಕರಂದ್ಲಾಜೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಮಹೇಶ, ಕೋಲಾರ ಸಂಸದ ಮಲ್ಲೇಶ ಬಾಬು, ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ.ಎಲ್. ಹನುಮಂತಯ್ಯ, ಸಿ.ಜಿ. ಶ್ರೀನಿವಾಸನ್ ಹಾಗೂ ಮತ್ತಿತರರು ಇದ್ದರು.

Tags: Minister M B PatilPraiyanka kharge ministerUnion Minister Shobha Karandlaje
Previous Post

ನಕ್ಸಲ್‌ ಮುಕ್ತ ಬಸ್ತಾರ್‌ ಗಾಗಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ ಶಾಂತಿ ಸಮಿತಿ ಸದಸ್ಯರು

Next Post

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

ಈಶಾನ್ಯ ರಾಜ್ಯಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿ

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada