• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎತ್ತಿನಹೊಳೆ ನೀರು ಹರಿಸುವ ಏತ (Lift) ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ:ಡಿಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
August 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಹಾಸನ,:“ಬಹುನಿರೀಕ್ಷಿತ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಏತ (Lift) ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಉದ್ಘಾಟನಾ ದಿನಾಂಕವನ್ನು ಪ್ರಕಟಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರ್ಷ ವ್ಯಕ್ತಪಡಿಸಿದರು.

ADVERTISEMENT

ಹಾಸನ ಜಿಲ್ಲೆ ಸಕಲೇಶಪುರದ ಕೆಸವನಹಳ್ಳಿ ಗ್ರಾಮದ ಕುಂಬರಡಿ ಕಾಫಿ ಎಸ್ಟೇಟ್ ಬಳಿ ಎತ್ತಿನಹೊಳೆ ಯೋಜನೆಯ ಪರೀಕ್ಷಾರ್ಥ ನೀರು ಹರಿಸುವ ಕಾರ್ಯಚರಣೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಪರಿಶೀಲನೆ ಮಾಡಿದರು.

ನಂತರ ಸಕಲೇಶಪುರದ ದೊಡ್ಡನಗರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, “ಎತ್ತಿಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ.ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು. ನಾನು ಕಣ್ಣಾರೆ ನೋಡಬೇಕು ಎಂದು ಬಂದಿದ್ದೇನೆ.ಈ ಹಿಂದೆ ಭೇಟಿ ನೀಡಿದಾಗ ಶೀಘ್ರವಾಗಿ ಕೆಲಸ ಮುಗಿಸಬೇಕು ಎಂದು ತಿಳಿಸಿದ್ದೇ, ಅದರಂತೆ ಒಂದೆರಡು ತಿಂಗಳು ತಡವಾಗಿಯಾದರೂ ಕೆಲಸ ಮುಗಿದಿದೆ” ಎಂದು ತಿಳಿಸಿದರು.

“ಒಟ್ಟು 8 ವಿಯರ್‌ ಗಳಲ್ಲಿ 5 ವಿಯರ್ ಗಳಿಗೆ ಚಾಲನೆ ನೀಡಲಾಗಿದೆ. 1,500 ಕ್ಯೂಸೆಕ್ಸ್ ನೀರನ್ನು ಮೇಲಕ್ಕೆ ಎತ್ತಲಾಗಿದೆ. ನೀರು ಕಡಿಮೆ ಆಗುವ ಮೊದಲು ಶುಭದಿನ, ಶುಭ ಘಳಿಗೆ ನೋಡಿ ಮುಖ್ಯಮಂತ್ರಿಗಳಿಂದ ಚಾಲನೆ ಮಾಡಿಸಲಾಗುವುದು.ಈ ದೊಡ್ಡ ಯೋಜನೆಯನ್ನು ಕಣ್ಣಾರೆ ನೋಡಬೇಕು ಎಂದು ಭೇಟಿ ನೀಡಿದೆ.ನಮ್ಮ ಎಲ್ಲಾ ಮಂತ್ರಿಗಳಿಗೂ ತಿಳಿಸಿ ಎಲ್ಲರೂ ಸೇರಿ ಉದ್ಘಾಟನೆಯಲ್ಲಿ ಭಾಗವಹಿಸುತ್ತೇವೆ” ಎಂದು ತಿಳಿಸಿದರು.

7 ಜಿಲ್ಲೆ, 75 ಲಕ್ಷ ಜನರಿಗೆ ಅನುಕೂಲ:

ನಂತರ ಯೋಜನೆ ಕುರಿತು ವಿವರಣೆ ನೀಡಿದ ಅವರು, “ಈ ಯೋಜನೆಯಿಂದ 24.01 ಟಿಎಂಸಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ಕುಡಿಯಲು ನೀರು ಪೂರೈಸಲಾಗುವುದು. ಬರಪೀಡಿತ 29 ತಾಲೂಕಿನ 38 ಪಟ್ಟಣ ಹಾಗೂ 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರು ಮತ್ತು ಜಾನುವಾರುಗಳಿಗೆ 14.056 ಟಿಎಂಸಿ ನೀರನ್ನು ಒದಗಿಸಲಾಗುವುದು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ತುಮಕೂರು ವ್ಯಾಪ್ತಿಯ 527 ಕೆರೆಗಳಿಗೆ 9.953 ಟಿಎಂಸಿ ನೀರನ್ನು ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ” ಎಂದು ತಿಳಿಸಿದರು.

“ಈ ಯೋಜನೆಯಲ್ಲಿ ವಿಯರ್ 1,2,4,5 ಮತ್ತು 8ರಿಂದ 1571 ಕ್ಯೂಸೆಕ್ಸ್ ನೀರನ್ನು ಎತ್ತಿ ವಿತರಣಾ ತೊಟ್ಟಿ-3ಕ್ಕೆ ಪೂರೈಸಲಾಗುವುದು. ನಂತರ ಇಲ್ಲಿಂದ ವಿತರಣಾ ತೊಟ್ಟಿ-4ರ ಮೂಲಕ ಗುರುತ್ವ ಕಾಲುವೆಗಳಿಂದ ಈ ನೀರನ್ನು ಹರಿಸಲಾಗುವುದು. ಈ ನೀರು ಒಟ್ಟು 252.87 ಕಿ.ಮೀ ಉದ್ದವಿದ್ದು, ಈ ಪೈಕಿ 164 ಕಿ.ಮೀ ಕಾಮಗಾರಿ ಪೂರ್ಣಗೊಂಡಿದೆ. ಇನ್ನು 25.87 ಕಿ.ಮೀ ಗುರುತ್ವ ಕಾಲುವೆ ಕಾಮಗಾರಿ ಪ್ರಗತಿಯಲ್ಲಿದೆ. ಈ ಮಧ್ಯೆ 42 ಕಿ.ಮೀ ನಂತರ ಅರಣ್ಯ ಮತ್ತು ಭೂಸ್ವಾಧೀನ ಸಮಸ್ಯೆಯಿಂದಾಗಿ ಕಾಮಗಾರಿ ಪೂರ್ಣಗೊಂಡಿಲ್ಲ. ಹೀಗಾಗಿ 32.50 ಕಿ.ಮೀ ನಂತರ ನೀರನ್ನು ನಾಲಾ ಎಸ್ಕೇಪ್ ಮೂಲಕ 132.50 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ವೇದಾ ವ್ಯಾಲಿ ಮೂಲಕ ತಾತ್ಕಾಲಿಕವಾಗಿ ನೀರನ್ನು ಹರಿಸಲು ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಈ ಯೋಜನೆಗಾಗಿ 2024ರ ಜುಲೈ ಅಂತ್ಯದರೆಗೆ 16,152 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, 31-03-2027ರ ವೇಳೆಗೆ ಈ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ. ಇನ್ನು ಈ ಯೋಜನೆಯಲ್ಲಿ ಜಲಾನಯನ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ 8 ವಿಯರ್ ಗಳ ಬಳಿ ನೀರಿನ ಹರಿವನ್ನು ನಿಖರವಾಗಿ ಅಳೆಯುವ ಉದ್ದೇಶದಿಂದ ಜರ್ಮನಿ ಮೂಲದ ತಂತ್ರಜ್ಞಾನ (Real Time Discharge Measurement) ಅಳವಡಿಸಲಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಆಗಸ್ಟ್ 20ರವರೆಗೆ ಒಟ್ಟು 13.34 ಟಿಎಂಸಿ ನೀರಿನ ಹರಿವು ದಾಖಲಾಗಿದೆ” ಎಂದು ತಿಳಿಸಿದರು.

Tags: CM Siddaramaiah‌Congress PartyDCM DK Shivakumar
Previous Post

ಪಾನ್‌ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್

Next Post

ಬೀದರ್: ಭಾಗ್ಯಲಕ್ಷ್ಮಿ ಬಾಂಡ್‌ ನೀಡಲು ಲಂಚ ಪಡೆದ ಅಂಗನವಾಡಿ ಕಾರ್ಯಕರ್ತೆ

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post

ಬೀದರ್: ಭಾಗ್ಯಲಕ್ಷ್ಮಿ ಬಾಂಡ್‌ ನೀಡಲು ಲಂಚ ಪಡೆದ ಅಂಗನವಾಡಿ ಕಾರ್ಯಕರ್ತೆ

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada