• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಅಂಕಣ

ಬಿಜೆಪಿಯಲ್ಲಿ B.S ಯಡಿಯೂರಪ್ಪ ಭಾಷಣಕ್ಕೂ ಸ್ವಾತಂತ್ರವಿಲ್ಲ..! ಮೊದಲೇ ಫಿಕ್ಸ್​.. ಏನಿದು ವರಸೆ.. ?

ಕೃಷ್ಣ ಮಣಿ by ಕೃಷ್ಣ ಮಣಿ
March 5, 2023
in ಅಂಕಣ
0
ನನ್ನ ಹುಟ್ಟುಹಬ್ಬದಂದೇ ಮೋದಿ ಅವರು ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಉದ್ಘಾಟನೆ ಮಾಡುತ್ತಿರುವುದು ಬಹಳ ಹೆಮ್ಮೆಯ ವಿಚಾರ: ಬಿಎಸ್‌ ವೈ ..!
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯ ಪತಾಕೆ ಹಾರಿಸುತ್ತೇವೆ ಎನ್ನುತ್ತಲೇ ಸೋಲಿನಿಂದ ಪಾರಾಗಲು ಬೇಕಿರುವ ಎಲ್ಲಾ ರೀತಿಯ ಕಸರತ್ತುಗಳನ್ನು ಮಾಡಲಾಗ್ತಿದೆ. ಆ ತಂತ್ರಗಾರಿಕೆಯ ಮೊದಲ ಹಂತ, ಮೂಲೆ ಸೇರಿಕೊಂಡಿದ್ದ ಯಡಿಯೂರಪ್ಪ ಅವರನ್ನು ಮುನ್ನಲೆಗೆ ಕರೆದುಕೊಂಡು ಬಂದಿದ್ದು. ಅಮಿತ್​ ಷಾ ಕಾರ್ಯಕ್ರಮದಿಂದಲೇ ದೂರ ಇರಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ವೇದಿಕೆ ಮೇಲೆ ಪೇಟ ತೊಡಿಸಿ, ಹಾರ ಹಾಕಿ ನಿರ್ಲಕ್ಷ್ಯ ಮಾಡಿಲ್ಲ ಎನ್ನುವುದನ್ನು ಜನತೆಗೆ ತೋರಿಸುವ ಪ್ರಯತ್ನ ಮಾಡಿದ್ದು. ಆದರೆ ಬಿಎಸ್​ ಯಡಿಯೂರಪ್ಪ ಅವರನ್ನು ನಿರ್ಲಕ್ಷ್ಯ ಮಾಡಿಲ್ಲ ಎಂದು ಬಿಜೆಪಿ ಎಷ್ಟೇ ಪರಿಪರಿಯಾಗಿ ಹೇಳಿದರೂ ಜನ ನಂಬುವ ಸ್ಥಿತಿಯಲ್ಲಿ ಇಲ್ಲ. ಕ್ಯಾಮೆರಾ ಎದುರು ಮಾತ್ರ ನಿರ್ಲಕ್ಷ್ಯ ಮಾಡಿಲ್ಲ ಎನ್ನುವಂತೆ ನಟಿಸುತ್ತಿದ್ದಾರೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಚರ್ಚೆ ಆಗಿದೆ. ಇದರ ನಡುವೆ ಬಿ.ಎಸ್​ ಯಡಿಯೂರಪ್ಪ ಭಾಷಣದ ಬಗ್ಗೆ ಸಾಕಷ್ಟು ಅನುಮಾನ ಸೃಷ್ಟಿಸಿದೆ.

ಲಿಂಗಾಯತ ಮತಗಳ ಮೇಲೆ ಹೈಕಮಾಂಡ್​ ಬೆರಗುಗಣ್ಣು..!

ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್​ ನಾಯಕರು ಉದ್ದೇಶಪೂರ್ವಕವಾಗಿಯೇ ರಾಜಕೀಯ ತೆರೆಮರೆಗೆ ಸರಿಸುತ್ತಿದ್ದಾರೆ ಎನ್ನುವ ವಿಚಾರ ಸಾಕಷ್ಟು ಅನಾಹುತಕ್ಕೆ ಎಡೆ ಮಾಡಿಕೊಡುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋಲುವ ಬಗ್ಗೆ ಸರ್ವೇಗಳಲ್ಲಿ ಖಚಿತ ಆಗುತ್ತಿದ್ದಂತೆ ಲಿಂಗಾಯತ ಮತಗಳನ್ನು ಭದ್ರ ಪಡಿಸಿಕೊಳ್ಳಲು ಬಿಜೆಪಿ ತಂತ್ರಗಾರಿಕೆ ಮಾಡಿದೆ. ಲಿಂಗಾಯತ ಮತಗಳ ಭೇಟಿಗೆ ಮೂವರು ನಾಯಕರನ್ನು ಸಿದ್ಧ ಮಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ ಹಾಗು ಬಿ ವೈ ವಿಜಯೇಂದ್ರ ಅವರನ್ನು ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿದೆ. ರಾಜ್ಯದ ಉದ್ದಗಲಕ್ಕೂ ಲಿಂಗಾಯತ ಕ್ಷೇತ್ರಗಳಲ್ಲಿ ಸಂಚಾರ ಮಾಡಲಿರುವ ಮೂವರು ನಾಯಕರು ಮತಯಾಚನೆ ಮಾಡಲಿದ್ದಾರೆ. ಲಿಂಗಾಯತ ಶಾಸಕರು ಇರುವ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ತಯಾರಿ ಮಾಡಲಾಗಿದೆ. ಆ ಕ್ಷೇತ್ರಗಳಲ್ಲಿ ಲಿಂಗಾಯತ ಮಠಗಳಿಗೆ ಭೇಟಿ ಕೊಡುವುದು, ಲಿಂಗಾಯತ ನಾಯಕರ ಮನೆಗೆ ಭೇಟಿ ಕೊಡುವುದು. ಲಿಂಗಾಯತ ಮತದಾರರ ಸೆಳೆಯುವ ತಂತ್ರ ಮಾಡುವುದು. ಈ ಮೂಲಕ ಬಿಜೆಪಿ ಮೇಲೆ ಇರುವ ಆತಂಕವನ್ನು ದೂರ ಮಾಡುವುದು. ಲಿಂಗಾಯತ ಮತಗಳು ಛಿದ್ರವಾಗದಂತೆ ನೋಡಿಕೊಳ್ಳಲು ಬಿಜೆಪಿ ಈ ಯೋಜನೆ ರೂಪಿಸಿದೆ.

ಯಡಿಯೂರಪ್ಪ ಭಾಷಣ ಹೇಗೆ ಇರಬೇಕು..? ಏನು ಹೇಳಬೇಕು..?

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಮಯದಲ್ಲಿ ಬಿ.ಎಸ್​ ಯಡಿಯೂರಪ್ಪ ಕಣ್ಣೀರು ಹಾಕಿದ್ದರು. ಅಧಿಕಾರ ವಹಿಸಿಕೊಂಡ ಬಳಿಕ 2 ತಿಂಗಳ ಸಂಪುಟ ವಿಸ್ತರಣೆ ಮಾಡಲು ಕೇಂದ್ರದ ನಾಯಕರು ಅವಕಾಶ ಕೊಡಲಿಲ್ಲ. ಒಬ್ಬನೆ ಹುಚ್ಚನಂತೆ ರಾಜ್ಯ ಸುತ್ತಬೇಕಾಯ್ತು ಎಂದಿದ್ದರು. ಬಿ.ಎಸ್​ ಯಡಿಯೂರಪ್ಪ ಮಾತಿನದ ಲಿಂಗಾಯತ ಮತಗಳು ದೂರ ಆಗುವ ಭೀತಿಯಲ್ಲಿರುವ ಬಿಜೆಪಿ ನಾಯಕರು ಯಡಿಯೂರಪ್ಪ ಅವರು ಪ್ರತಿ ಕ್ಷೇತ್ರದಲ್ಲೂ ಹೀಗೆ ಮಾತನಾಡಬೇಕು ಎನ್ನುವ ಕಟ್ಟಪ್ಪಣೆ ವಿಧಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್​ ನನಗೆ ಯಾವುದೇ ದ್ರೋಹ ಮಾಡಿಲ್ಲ. ನಾನು ಸಂತೋಷದಿಂದಲೇ ರಾಜೀನಾಮೆ ನೀಡಿದೆ. ನನಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿದೆ. ವೀರಶೈವ ಬಂಧುಗಳಲ್ಲಿ ಕೈಮುಗಿದು ಪ್ರಾರ್ಥನೆ ಮಾಡ್ತೇನೆ, ಯಾವುದೇ ಕಾರಣಕ್ಕೂ ನಾನು ಚುನಾವಣೆಗೆ ನಿಲ್ಲಲ್ಲ. ಪಕ್ಷ ನನಗೆ ಅನ್ಯಾಯ ಮಾಡಿಲ್ಲ. ಪಕ್ಷ ನನಗೆ ಎಲ್ಲವನ್ನು ಕೊಟ್ಟಿದೆ. ಕೇಂದ್ರ ಕೋರ್ ಕಮಿಟಿ ಸದಸ್ಯನನ್ನಾಗಿ ಮಾಡಿದೆ. ಬಸವರಾಜ ಬೊಮ್ಮಾಯಿಯನ್ನು ಮುಖ್ಯಮಂತ್ರಿ ಮಾಡಿದ್ದು ನಾನೇ. ವೀರಶೈವ ಬಂಧುಗಳು ತಪ್ಪು ತಿಳಿಯಬಾರದು. ಪಕ್ಷ ನನಗೆ ಅನ್ಯಾಯ ಮಾಡಿದೆ ಎಂಬ ಭಾವನೆ ಬೇಡ ಎಂದು ಮನವಿ ಮಾಡಬೇಕಿದೆ.

ಕಾಂಗ್ರೆಸ್​ ಕಡೆಗೆ ಲಿಂಗಾಯತ ಮತಗಳು ವಾಲುವ ಭೀತಿ..!

ವೀರಶೈವ ಲಿಂಗಾಯತ ಸಮುದಾಯಕ್ಕೆ ಗಟ್ಟಿಯಾದ ದನಿ ಎಂದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ. ಆದರೆ ಬಿಜೆಪಿಯಲ್ಲಿ ಯಡಿಯೂರಪ್ಪ ತೆರೆಮರೆಗೆ ಸರಿಯುತ್ತಿರುವ ಈ ಕಾಲಘಟ್ಟದಲ್ಲಿ ಲಿಂಗಾಯತ ಸಮುದಾಯಕ್ಕೆ ಪ್ರಬಲ ನಾಯಕನ ಅವಶ್ಯಕತೆ ಕೊರತೆ ಎದುರಾಗಿದೆ. ಹೀಗಾಗಿ ಯಡಿಯೂರಪ್ಪ ಅವರ ಸ್ಥಾನವನ್ನು ತುಂಬಬಲ್ಲ ನಾಯಕರು ಕಾಂಗ್ರೆಸ್’​ನಲ್ಲಿ ಸಾಕಷ್ಟು ಮಂದಿಯಿದ್ದಾರೆ. ಈಗಾಗಲೇ ಕಾಂಗ್ರೆಸ್​ನಲ್ಲಿ ಪ್ರಭಾವಿ ಲಿಂಗಾಯತ ನಾಯಕರಾಗಿ ಗುರುತಿಸಿಕೊಂಡಿರುವ ಎಂಬಿ ಪಾಟೀಲ್’​ಗೆ ಕಾಂಗ್ರೆಸ್​ನಲ್ಲೂ ಸಾಕಷ್ಟು ಅವಕಾಶ ಕೊಡಲಾಗ್ತಿದೆ. ಪ್ರಚಾರ ಸಮಿತಿ ಅಧ್ಯಕ್ಷರಾನ್ನಾಗಿ ಎಂಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್’​ನಲ್ಲಿ ಸಿಎಂ ಅಭ್ಯರ್ಥಿ ರೇಸ್​’ನಲ್ಲೂ ಎಂಬಿ ಪಾಟೀಲ್ ಇದ್ದಾರೆ. ಇನ್ನು ಎಂಬಿ ಪಾಟೀಲ್ ಜೊತೆ ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಕೂಡ ಕಾಂಗ್ರೆಸ್​’ನಲ್ಲಿ ಪ್ರಭಾವ ಹೊಂದಿದ್ದಾರೆ. ಕಾಂಗ್ರೆಸ್​ ಕಾರ್ಯಾಧ್ಯಕ್ಷ ಸ್ಥಾನದಲ್ಲಿ ಈಶ್ವರ ಖಂಡ್ರೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಬಂದರೆ ಲಿಂಗಾಯತರಿಗೆ ಪ್ರಬಲ ಸ್ಥಾನಮಾನಗಳು ಫಿಕ್ಸ್​ ಅನ್ನೋದು ಲಿಂಗಾಯತ ಸಮುದಾಯದಲ್ಲಿ ನಿರ್ಧಾರವಾಗಿದೆ. ಇದು ಬಿಜೆಪಿ ನಾಯಕರ ಭೀತಿಗೆ ಕಾರಣವಾಗಿದೆ. ಇದೇ ಕಾರಣಕ್ಕೆ ಎಲ್ಲಾ ಕಡೆ ಯಡಿಯೂರಪ್ಪ ವೀರಶೈವರ ಮನವೊಲಿಸುವ ಕೆಲಸ ಮಾಡಬೇಕು ಅನ್ನೋ ಕಟ್ಟಪ್ಪಣೆ ಹೈಕಮಾಂಡ್​ ಅಂಗಳದಿಂದ ರವಾನೆ ಆಗಿದೆ. ಈ ಮಾತುಗಳನ್ನು ಯಡಿಯೂರಪ್ಪ ಈಗಾಗಲೇ ಒಂದೆರಡು ಬಾರಿ ಹೇಳಿಯೂ ಆಗಿದೆ.

Tags: Congress Partyಎಂ ಬಿ ಪಾಟೀಲ್ಬಸವರಾಜ ಬೊಮ್ಮಾಯಿಬಿ ಎಸ್ ಯಡಿಯೂರಪ್ಪಬಿ.ವೈ.ವಿಜಯೇಂದ್ರಬಿಜೆಪಿಲಿಂಗಾಯತ ಸಮುದಾಯಸಿದ್ದರಾಮಯ್ಯ
Previous Post

ಮಾಡಾಳ್​ ಭ್ರಷ್ಟಾಚಾರದಲ್ಲಿ ಸಚಿವ ಬೈರತಿ ಭಾಗಿ ಶಂಕೆ..! ಶಿವಮೊಗ್ಗಕ್ಕೂ ಪಾಲು..!

Next Post

HDK ವೇದಿಕೆ ಮೇಲೆ ಎಚ್’ಡಿಕೆ- ಅನಿತಾ ಕುಮಾರಸ್ವಾಮಿ ಜಗಳದ ವಿಡಿಯೋ.Viral | Anitha Kumaraswamy #pratidhvani

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

Anil Shetty: ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

June 26, 2025
Next Post
HDK ವೇದಿಕೆ ಮೇಲೆ ಎಚ್’ಡಿಕೆ- ಅನಿತಾ ಕುಮಾರಸ್ವಾಮಿ ಜಗಳದ ವಿಡಿಯೋ.Viral | Anitha Kumaraswamy #pratidhvani

HDK ವೇದಿಕೆ ಮೇಲೆ ಎಚ್’ಡಿಕೆ- ಅನಿತಾ ಕುಮಾರಸ್ವಾಮಿ ಜಗಳದ ವಿಡಿಯೋ.Viral | Anitha Kumaraswamy #pratidhvani

Please login to join discussion

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada