• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕರೋನಾ ಕಷ್ಟಕಾಲದಲ್ಲೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದ ಮೋದಿ‌ ಸರ್ಕಾರ: ಮೇ ತಿಂಗಳಲ್ಲಿಯೇ 10 ಬಾರಿ ದರ ಏರಿಕೆ

ಯದುನಂದನ by ಯದುನಂದನ
May 20, 2021
in ದೇಶ
0
ಕರೋನಾ ಕಷ್ಟಕಾಲದಲ್ಲೂ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿದ ಮೋದಿ‌ ಸರ್ಕಾರ: ಮೇ ತಿಂಗಳಲ್ಲಿಯೇ 10 ಬಾರಿ ದರ ಏರಿಕೆ
Share on WhatsAppShare on FacebookShare on Telegram

ಗುಜರಾತಿಗಳನ್ನು ‘ವ್ಯಾಪಾರಿ ಮನೋಭಾವದವರು’ ಎಂದು ಹೇಳುವುದುಂಟು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಗುಜರಾತ್ ಮೂಲದವರಾಗಿರುವುದರಿಂದ ಅವರ ಬಗ್ಗೆಯೂ ಹಾಗೆ ಮಾತನಾಡುವುದುಂಟು. ಮತ್ತು ಅವರ ಸರ್ಕಾರವನ್ನು ಕೂಡ ‘ಉದ್ಯಮಿಗಳ ಪರ’ ಇರುವ ಸರ್ಕಾರ ಎಂದು ಉಲ್ಲೇಖಿಸುವುದುಂಟು. ಗುಜರಾತ್-ವ್ಯಾಪಾರ-ಮೋದಿ; ಒಂದಕ್ಕೊಂದನ್ನು ಸೇರಿಸಿ ಮೂದಲಿಸಿ ಮಾತನಾಡಲು ಹಲವು ಸಕಾರಣಗಳಿವೆ. ಉದಾಹರಣೆಗೆ ಕರೋನಾ ‌ಹೊಡೆತಕ್ಕೆ, ಅದರಲ್ಲೂ ಎರಡನೇ ಅಲೆಯ ಹೊಡೆತಕ್ಕೆ ದೇಶವೇ ತತ್ತರಿಸಿ ಹೋಗಿದೆ. ಇಂಥ ಕಡುಕಷ್ಟದ ಕಾಲದಲ್ಲೂ ಔಷದೀಯ ಉತ್ಪನ್ನಗಳಿಗೆ ಅದೂ ಕರೋನಾ ಔಷಧೋತ್ಪನ್ನಗಳ ಮೇಲೆ ನರೇಂದ್ರ ಮೋದಿ ಸರ್ಕಾರ ಕವಡೆಕಾಸಿನ‌ಷ್ಟು ಕರುಣೆ ತೋರದೆ ಜಿಎಸ್ ಟಿ ವಿಧಿಸುತ್ತಿದೆ.

ADVERTISEMENT

ಇದಕ್ಕಿಂತಲೂ ಕ್ರೂರವಾದ ನಡೆ ಇನ್ನೊಂದು ಇದೆ. ಈ ದುರ್ದಿನಗಳಲ್ಲೂ ನರೇಂದ್ರ ಮೋದಿ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ಖಜಾನೆ ತುಂಬಿಕೊಳ್ಳುತ್ತಿದೆ. ಮೊದಲನೆಯ ಉದಾಹರಣೆಗಿಂತ ಇದು ಏಕೆ ಭೀಕರ ಎಂಬುದನ್ನು ಬಿಡಿಸಿ ಹೇಳಬೇಕಾಗಿಲ್ಲ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾದರೆ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಎಲ್ಲರ ಜೇಬನ್ನೂ ಲೂಟಿ ಮಾಡಲಾಗುತ್ತದೆ ಎಂಬುದು ಬಹುತೇಕ ಗೊತ್ತಿರುವ ವಿಷಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವುದರಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಎಷ್ಟು ನಿರ್ಲಜ್ಜವಾಗಿ ಮತ್ತು ನಿಷ್ಕರುಣಿಯಾಗಿ ವರ್ತಿಸಿದೆ ಎಂಬುದನ್ನು ಕರೋನಾ ಕಂಡುಬಂದ ದಿನಗಳಿಂದಲೂ ಕಾಣಬಹುದಾಗಿದೆ. ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕರೋನಾ ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು. ಅಂದಿನಿಂದಲೂ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಆಗುತ್ತಲೇ ಇದೆ.

ಜನವರಿ, ‌ಫೆಬ್ರವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಲಾಕ್ಡೌನ್ ಕಾರಣಕ್ಕೆ ಜನ‌ ಹೊರಗಡೆ ಓಡಾಡುತ್ತಿರಲಿಲ್ಲ. ಹಾಗಾಗಿ ಆ ಅವಧಿಯಲ್ಲಿ ಅಷ್ಟೇನೂ ದೊಡ್ಡ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಿರಲಿಲ್ಲ. ಮತ್ತೆ ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿವೆ ಎನ್ನುವಷ್ಟೊತ್ತಿಗೆ ಜೂನ್ ತಿಂಗಳಲ್ಲಿ ಸರಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೆರಡನ್ನೂ ಏರಿಕೆ ಮಾಡಲಾಯಿತು. ಈ ಮೂಲಕ ಇದೆಂಥಾ ಕ್ರೂರಿ ಸರ್ಕಾರ ಎಂಬುದು 2020ರ ಜೂನ್ ತಿಂಗಳಲ್ಲೇ ಸಾಬೀತಾಗಿತ್ತು. ಏಕೆಂದರೆ ಆಗ ಜನ ಕರೋನಾ ಮತ್ತು ಲಾಕ್ಡೌನ್ ಸಂಕಷ್ಟಗಳ ಸುಳಿಯಿಂದ ಸಂಪೂರ್ಣವಾಗಿ ಹೊರಬಂದಿಲ್ಲದಿದ್ದರೂ ಅವರ ಮೇಲೆ ನಿರಂತರವಾಗಿ 23 ದಿನ‌ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಬರೆ ಎಳೆಯಲಾಗಿತ್ತು. 

ಆಗ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಜುಲೈ ತಿಂಗಳಲ್ಲಿ ನರೇಂದ್ರ ಮೋದಿ ಅವರ ಸರ್ಕಾರ ಹೊಸ ವರಸೆ ಆರಂಭಿಸಿತು. ದಿನ ಬಿಟ್ಟು ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿತು. ಇದಾದ ಮೇಲೆ ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಕೆಲವು ದಿನ ಬಿಡುವು ಕೊಟ್ಟು ಕೆಲವು ದಿನ ಬೆಲೆ ಏರಿಕೆ ಮಾಡಿತು. ಇದನ್ನು 2021ರ ಜನವರಿ, ಫೆಬ್ರವರಿಯಲ್ಲೂ ಮುಂದುವರೆಸಿತು. ಆದರೆ ಯಾವಾಗ ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ‌ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳಿಗೆ ದಿನಾಂಕ ನಿಗಧಿಯಾಯಿತೋ ಆಗ‌ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಬ್ರೇಕ್ ಹಾಕಿತು.

ಆ ಸಂದರ್ಭದಲ್ಲಿ ‘ಇಂಡಿಯನ್ ಎಕ್ಸ್ ಪ್ರೆಸ್’ ವರದಿಯೊಂದನ್ನು ಪ್ರಕಟಿಸಿತ್ತು. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಮೇಲೆ ಕೇಂದ್ರ ಸರ್ಕಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಲಾಗುತ್ತದೆ ಎಂದು. ಅದು ನಿಜವಾಗಿದೆ. ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಯಿತು. ಮೇ 4ರಿಂದಲೇ ನರೇಂದ್ರ ಮೋದಿ ಅವರ ಘನ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಹಳೆಯ ಚಾಳಿಯನ್ನು ಮುಂದುವರೆಸಿತು. ಮೇ 4ರಿಂದ ಈಚೆಗೆ ಈ ತಿಂಗಳು ಈಗಾಗಲೇ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಮೂಲಕ ದರೋಡೆ ಮಾಡುತ್ತಿದೆ. ಮೇ ತಿಂಗಳೊಂದರಲ್ಲೇ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.45 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 2.78 ರೂಪಾಯಿ ಬೆಲೆ ಏರಿಸಿದೆ. ಕರೋನಾ ಕಷ್ಟಕಾಲದಲ್ಲೂ ಮೇ ತಿಂಗಳೊಂದರಲ್ಲೇ ಹತ್ತು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿರುವ ನರೇಂದ್ರ ಮೋದಿ ಅವರನ್ನು ‘ವ್ಯಾಪಾರಿ’ ಎನ್ನದೆ ಇನ್ನೇನೆಂದು ಕರೆಯಬೇಕು?

Previous Post

ಲಿವ್ ಇನ್ ಜೋಡಿಗೆ ರಕ್ಷಣೆ ನೀಡಲು ಪಂಜಾಬ್ ಹೈಕೋರ್ಟ್ ನಿರಾಕರಣೆ: ಸಾಮಾಜಿಕ ನೈತಿಕತೆ ಕಾರಣ ನೀಡಿದ ಕೋರ್ಟ್!

Next Post

ರಾಜಸ್ಥಾನದ ಬೆನ್ನಲ್ಲೇ ಬ್ಲ್ಯಾಕ್‌ ಫಂಗಸನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ತೆಲಂಗಾಣ

Related Posts

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
0

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿ (Labour & farmer policy) ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇಂದು ದೇಶಾದ್ಯಂತ ಟ್ರೇಡ್...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
Next Post
ರಾಜಸ್ಥಾನದ ಬೆನ್ನಲ್ಲೇ ಬ್ಲ್ಯಾಕ್‌ ಫಂಗಸನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ತೆಲಂಗಾಣ

ರಾಜಸ್ಥಾನದ ಬೆನ್ನಲ್ಲೇ ಬ್ಲ್ಯಾಕ್‌ ಫಂಗಸನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿದ ತೆಲಂಗಾಣ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada