2023ರ ಚುನಾವಣೆ ಸಂಬಂಧ ಈಗಾಗಲೇ ಸಿಎಂ ಸ್ಥಾನಕ್ಕೆ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ನಲ್ಲಿ ರೇಸ್ ಶುರುವಾಗಿದ್ದು ನಾನು ಸಹ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಎಂದು ಸಚಿವ ಉಮೇಶ್ ಕತ್ತಿ ಹೊಸ ಬಾಂಬ್ ಸ್ಪೋಟಿಸಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಕತ್ತಿ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಆಗ ನಾನು ವರಿಷ್ಠರ ಬಳಿ ನನ್ನಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮನವಿ ಸಲ್ಲಿಸುತ್ತೇನೆ ಎಂದಿದ್ದಾರೆ.
ನಾನು 8 ಭಾರೀ ಶಾಸಕನಾಗಿ ಆಯ್ಕೆಯಾಗಿದ್ದು ಈಗ ಸಚಿವನಾಗಿ ಸೇವೆ ಸಲ್ಲಿಸುತ್ತಿದ್ದೇನೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸಲು ಹಂಬಲ ಹೊಂದಿದ್ದೇನೆ ಎಂದು ಸಿಎಂ ಸ್ಥಾನದ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಖ್ಯಾತಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲುತ್ತದೆ ಅವರು ನಮ್ಮ ಹಿರಿಯ ನಾಯಕರಾಗಿದ್ದು ಅವರ ಮಾರ್ಗದರ್ಶನ ಪಕ್ಷಕ್ಕೆ ಅಗತ್ಯವಿದೆ. ಅವರನ್ನ ಮೂಲೆಗುಂಪು ಮಾಡಿಲ್ಲ ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ 2023ರ ಚುನಾವಣೆ ಎದುರಿಸಲಿದ್ದೇವೆ ಎಂದು ಹೇಳಿದ್ದಾರೆ.