• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಲಮಿತಿಯೊಳಗೆ ಲಸಿಕೆ‌ ಕೊಡಿ, ಕೋವಿಡ್ನಿಂದ ರಕ್ಷಣೆ ನೀಡಿ- ಕರ್ನಾಟಕ ರಕ್ಷಣಾ ವೇದಿಕೆ

Any Mind by Any Mind
June 7, 2021
in ಕರ್ನಾಟಕ
0
ಕಾಲಮಿತಿಯೊಳಗೆ ಲಸಿಕೆ‌ ಕೊಡಿ, ಕೋವಿಡ್ನಿಂದ ರಕ್ಷಣೆ ನೀಡಿ- ಕರ್ನಾಟಕ ರಕ್ಷಣಾ ವೇದಿಕೆ
Share on WhatsAppShare on FacebookShare on Telegram

ADVERTISEMENT

ಜೂ. 10 ರಂದು‌  ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಚಳವಳಿ ನಿಗದಿಯಾದಂತೆ ನಡೆಯುತ್ತದೆ. ಜೂನ್ ಅಂತ್ಯದೊಳಗೆ ಲಸಿಕೆಯ ಮೊದಲ ಡೋಸ್, ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ಕರ್ನಾಟಕದ ಪ್ರತಿಯೊಬ್ಬ ನಾಗರಿಕನಿಗೂ ಸಿಗಬೇಕು ಎಂಬ ಬೇಡಿಕೆಯೊಂದಿಗೆ ಈ ಚಳವಳಿ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಿಳಿಸಿದೆ.

ಈಗಾಗಲೇ ನಮ್ಮೆಲ್ಲ ಕಾರ್ಯಕರ್ತರಿಗೆ ಕರೆ ನೀಡಿದಂತೆ, ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತ, ಎಲ್ಲರೂ ಶಾಂತಿಯುತವಾಗಿ ಪ್ರತಿಭಟನೆಗಳನ್ನು ನಡೆಸಬೇಕು. ಈ ಮೂಲಕ ಸಮಸ್ತ ಕನ್ನಡದ ಜನತೆಗೆ ಕಾಲಮಿತಿಯೊಳಗೆ ಲಸಿಕೆ‌ ನೀಡಿ, ಅವರಿಗೆ ಕೋವಿಡ್ ನಿಂದ ರಕ್ಷಣೆ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ  ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ಮನವಿ ಮಾಡಿದ್ದಾರೆ.

“ಉಚಿತ ಲಸಿಕೆ ಕೊಡಿ, ಇಲ್ಲವೇ ಅಧಿಕಾರ ಬಿಡಿ” – ಜೂನ್ 10 ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕರವೇ

ಪ್ರಧಾನಮಂತ್ರಿ ನರೇಂದ್ರಮೋದಿಯವರು ಜೂ.21 ರಿಂದ ದೇಶದ ಎಲ್ಲ ನಾಗರಿಕರಿಗೂ ಉಚಿತ ಲಸಿಕೆ‌ ಕೊಡುವುದಾಗಿ ಇಂದು ಘೋಷಿಸಿದ್ದಾರೆ. ಇದು ಸ್ವಾಗತಾರ್ಹ ಬೆಳವಣಿಗೆ. ಕರ್ನಾಟಕ ರಕ್ಷಣಾ‌ ವೇದಿಕೆ ಹಮ್ಮಿಕೊಂಡಿರುವ ಹೋರಾಟಕ್ಕೆ ಭಾಗಶಃ ಯಶಸ್ಸು ದೊರೆತಂತಾಗಿದೆ. ಆದರೆ ಬೇಗನೇ ಲಸಿಕೆ ನೀಡಬೇಕೆಂಬ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.25 ರಷ್ಟು ಲಸಿಕೆ ಕೊಡುವ ಕಾರ್ಯಕ್ರಮ ಮುಂದುವರೆದರೆ ಮತ್ತೆ ಕಾಳಸಂತೆ ವ್ಯವಹಾರಗಳು, ದುಬಾರಿ ಬೆಲೆಯ ಹೊರೆ, ಅನಾರೋಗ್ಯಕರ ಸ್ಪರ್ಧೆ ಏರ್ಪಡುವುದರಿಂದ, ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರವೇ ಲಸಿಕೆ ಹಣ ಪಾವತಿಸಿ ಅಲ್ಲೂ ಸಹ ಉಚಿತವಾಗಿಯೇ ಸಾರ್ವಜನಿಕರಿಗೆ ಲಸಿಕೆ ನೀಡಬೇಕೆಂದು ಆಗ್ರಹಿಸಲಾಗಿದೆ.

ಲಸಿಕೆಯೆಂಬುದು ಭಾರತದ ಪ್ರತಿಯೊಬ್ಬ ನಾಗರಿಕನ ಹಕ್ಕು. ಅದರ ಹಂಚಿಕೆಯೂ ಸಮಾನತೆಯ ಆಶಯಕ್ಕೆ ಧಕ್ಕೆಯಾಗದಂತೆ ಇರಬೇಕು. ಹೀಗಾಗಿ ಎಲ್ಲ ರಾಜ್ಯಗಳಿಗೂ ಜನಸಂಖ್ಯೆ ಆಧಾರದಲ್ಲಿ‌ ಲಸಿಕೆ ವಿತರಣೆಯಾಗಬೇಕು. ಉತ್ತರದ ರಾಜ್ಯಗಳಿಗೆ ಹೆಚ್ಚು, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಲಸಿಕೆ ನೀಡಿದ್ದನ್ನು ನಾವು ನೋಡಿದ್ದೇವೆ. ಈ ಅನ್ಯಾಯ ಕೊನೆಗೊಳ್ಳಬೇಕು. ಪ್ರಧಾನ ಮಂತ್ರಿಗಳು ಉಚಿತವಾಗಿ ಲಸಿಕೆ ಕೊಡುವುದಾಗಿ ಘೋಷಿಸಿದ್ದರೂ, ಎಷ್ಟು ದಿನಗಳೊಳಗೆ ಲಸಿಕೆ ಕೊಡುತ್ತೇವೆ ಎಂಬುದನ್ನು ಹೇಳಿಲ್ಲ. ಮತ್ತೊಂದು ಅಲೆ ಬಂದು ಇನ್ನಷ್ಟು ಜೀವಗಳು ಹೋಗುವಂತಾದರೆ ಉಚಿತ ಲಸಿಕೆಗೆ ಅರ್ಥವಿರುವುದಿಲ್ಲ. ಕೋವಿಡ್ ಮೂರನೇ ಅಲೆ ಅಕ್ಟೋಬರ್ ನಲ್ಲಿ ಬರುವ ಸಾಧ್ಯತೆ ಇರುವುದರಿಂದ ಅಷ್ಟರೊಳಗೆ ಎರಡೂ ಡೋಸ್ ಲಸಿಕೆ ಎಲ್ಲ ನಾಗರಿಕರಿಗೂ‌ ಸಿಗಬೇಕೆಂದು ಆಗ್ರಹಿಸಲಾಗಿದೆ.

ಪ್ರತಿ ಚುನಾವಣೆಗಳ ಸಂದರ್ಭದಲ್ಲಿ ಸ್ಥಾಪಿಸಲಾಗುವ ಮತದಾನದ ಬೂತ್ ಗಳ‌ ಮಾದರಿಯಲ್ಲೇ ಜನರಿಗೆ ಅತಿಹೆಚ್ಚು ಹತ್ತಿರದಲ್ಲೇ ಲಸಿಕೆ ಬೂತ್ ಗಳನ್ನು ಸ್ಥಾಪಿಸಬೇಕು. ಲಸಿಕೆಗಾಗಿ ನೋಂದಾವಣಿ ಪ್ರಕ್ರಿಯೆಯನ್ನು ಕನಿಷ್ಠಗೊಳಿಸಿ, ಪ್ರತಿಯೊಬ್ಬನಿಗೂ ಲಸಿಕೆ‌ ಸಿಗುವಂತೆ ನೋಡಿಕೊಳ್ಳಬೇಕು. ಲಸಿಕೆ ಜನಸಾಮಾನ್ಯರ ಬಳಿಗೇ ಹೋಗುವಂತಾಗಬೇಕು ಎಂದು  ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

Previous Post

ವಿರೋಧ ಪಕ್ಷಗಳು ‘ಲಸಿಕೆ ರಾಜಕೀಯ’ ಮಾಡುತ್ತಿದೆ ಎಂಬ ಪ್ರಧಾನಿ ಮೋದಿ ಮಾತು ಎಷ್ಟು ಸತ್ಯ?

Next Post

ಸುಪ್ರೀಂಕೋರ್ಟ್ ತರಾಟೆಯ ನಂತರ ಉಚಿತ ಲಸಿಕೆ ಘೋಷಿಸಿದ ಪ್ರಧಾನಿ ಮೋದಿ: ಇಲ್ಲಿದೆ ಕಂಪ್ಲೀಟ್ ಸುದ್ದಿ

Related Posts

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!
Top Story

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

by ಪ್ರತಿಧ್ವನಿ
May 29, 2026
0

ಬೆಂಗಳೂರು : ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

May 29, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

May 28, 2026
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
Next Post
ಸುಪ್ರೀಂಕೋರ್ಟ್ ತರಾಟೆಯ ನಂತರ ಉಚಿತ ಲಸಿಕೆ ಘೋಷಿಸಿದ ಪ್ರಧಾನಿ ಮೋದಿ: ಇಲ್ಲಿದೆ ಕಂಪ್ಲೀಟ್ ಸುದ್ದಿ

ಸುಪ್ರೀಂಕೋರ್ಟ್ ತರಾಟೆಯ ನಂತರ ಉಚಿತ ಲಸಿಕೆ ಘೋಷಿಸಿದ ಪ್ರಧಾನಿ ಮೋದಿ: ಇಲ್ಲಿದೆ ಕಂಪ್ಲೀಟ್ ಸುದ್ದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada