ಬೆಂಗಳೂರು : ವಿದ್ಯುತ್ ವಿಚಾರದಲ್ಲಿ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಹಚ್ಚಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
![](https://pratidhvani.com/wp-content/uploads/2023/06/basavaraj-bommai-99459364.jpg)
ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಒಂದು ಕಡೆ ಷರತ್ತು ವಿಧಿಸಿ 200 ಯುನಿಟ್ ಉಚಿತ ವಿದ್ಯುತ್ ನೀಡ್ತಾರೆ, ಮತ್ತೊಂದು ಕಡೆ ವಿದ್ಯುತ್ ದರ ಏರಿಕೆ ಮಾಡ್ತಾರೆ ಎಂಧು ಹೇಳಿದರು.
ಇದೇ ಮೊದಲೇನಲ್ಲ ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ಹೆಸ್ಕಾಂ ಮೇಲೆ ದೊಡ್ಡ ಹೊರೆ ಹಾಕಿತ್ತು. ಕಾಂಗ್ರೆಸ್ನವರು ರಾಜ್ಯದ ಜನರನ್ನು ಸಂಕಷ್ಟದಲ್ಲಿ ಸಿಲುಕಿಸುತ್ತಿದೆ ಎಂದು ಕಿಡಿಕಾರಿದ್ದಾರೆ.