ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ (ಸೆಪ್ಟೆಂಬರ್ 11) ಕರೆ ನೀಡಿದ್ದ ಬಂದ್ನಿಂದಾಗಿ ಭಾರತದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ತೊಂದರೆ ಅನುಭವಿಸಿದ್ದಾರೆ.
ಏರ್ಪೋರ್ಟ್ಗೆ ತೆರಳುವ ಹಾಗೂ ಏರ್ಪೋರ್ಟ್ನಿಂದ ಆಗಮಿಸುವ ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಾಸಗಿ ಕ್ಯಾಬ್ಗಳು ಸಿಗದೆ ಬಿಎಂಟಿಸಿ ಬಸ್ಗಳನ್ನು ಅವಲಂಬಿಸಿದ್ದಾರೆ.
ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಕೂಡ ಏರ್ಪೋರ್ಟ್ನಿಂದ ಬಿಎಂಟಿಸಿ ವಾಯುವಜ್ರ ಬಸ್ನಲ್ಲಿ ಪ್ರಯಾಣಿಸಿದ್ದಾರೆ.
ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡುವ ಚಿತ್ರವನ್ನು ಕುಂಬ್ಳೆ ತಮ್ಮ ‘ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಏರ್ಪೋರ್ಟ್ನಿಂದ ಮನೆಗೆ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ” ಎಂದು ಬರೆದುಕೊಂಡಿದ್ದಾರೆ.
ಸಾರ್ವಜನಿಕರಿಗೆ ತಟ್ಟದ ಬಿಸಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ ನಡೆಸುತ್ತಿರುವ ಮುಷ್ಕರ ಶಾಂತಿಯುತವಾಗಿದೆ. ಸಾರ್ವಜನಿಕರಿಗೆ ಮುಷ್ಕರದ ಬಿಸಿ ಅಷ್ಟಾಗಿ ತಟ್ಟಿಲ್ಲ ಎಂದು ಹೇಳಲಾಗಿದೆ.
ವಂದೇ ಭಾರತ್ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಂದಾಗ ಅದರಿಂದ ಇಳಿದ ಪ್ರಯಾಣಿಕರಲ್ಲಿ ಕೆಲವರು ಅಟೊಗಾಗಿ ವಿಚಾರಿಸುತ್ತಿರುವುದು ಕಂಡು ಬಂತು. ಬಹುತೇಕ ಕಡೆಗಳಲ್ಲಿ ಜನರು ಸ್ವಂತ ವಾಹನ ಇಲ್ಲವೇ ಬಿಎಂಟಿಸಿ ಬಸ್ಗಳನ್ನೇ ಅವಲಂಬಿಸಿದ್ದರಿಂದ ಸಮಸ್ಯೆಗಳಾಗಿಲ್ಲ. ಎಲ್ಲೂ ಜನ ದಟ್ಟಣೆ ಉಂಟಾಗಿಲ್ಲ.
ಮುಷ್ಕರಕ್ಕೆ ಬೆಂಬಲ ನೀಡಿರುವ ವಿವಿಧ ಸಂಘಟನೆಗಳು ಅಲ್ಲಲ್ಲಿ ಪಾದಯಾತ್ರೆ ನಡೆಸಿದರು. ಬಳಿಕ ಸ್ವಾತಂತ್ರ್ಯ ಉದ್ಯಾನದ ಕಡೆಗೆ ಸಾಗಿದರು