• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ; ಮತ್ತೊಂದು ವಾರ ಶಾಲೆಗಳು ಬಂದ್

ನಚಿಕೇತು by ನಚಿಕೇತು
November 21, 2021
in ದೇಶ
0
ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ; ಮತ್ತೊಂದು ವಾರ ಶಾಲೆಗಳು ಬಂದ್
Share on WhatsAppShare on FacebookShare on Telegram

ದೆಹಲಿ ಉಸಿರಾಡೋದಕ್ಕೂ ಕಷ್ಟಪಡ್ತಿದೆ. ಮನೆಯೊಳಗಿದ್ದರೂ ಮಾಸ್ಕ್ ಧರಿಸಿಕೊಂಡೇ ಇರ್ಬೇಕಾದ ಪರಿಸ್ಥಿತಿ ಉಂಟಾಗಿದೆ. ದಟ್ಟ ಹೊಗೆ, ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಅಕ್ಷರಶಃ ಗ್ಯಾಸ್ ಚೇಂಬರ್‌ನಂತಾಗಿದೆ. ದೆಹಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೀತಿದ್ದಂತೆ ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿದೆ.

ADVERTISEMENT

ದಟ್ಟವಾದ ಹೊಗೆ… ಪರಸ್ಪರರ ಮುಖ ಕಾಣಿಸದಿರುವಷ್ಟು ಆವರಿಸಿರೋ ವಿಷಯುಕ್ತ ಗಾಳಿ.. ಹೊರಗೆ ಓಡಾಡೋದೂ ಕಷ್ಟ, ಉಸಿರಾಡಿದ್ರೆ ಮಾರಕ ಕಾಯಿಲೆ ಫಿಕ್ಸ್ ಅನ್ನುವಂಥಾ ಸ್ಥಿತಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಮಾಣಗೊಂಡಿದೆ. ಪರಿಸ್ಥಿತಿ ಗ್ಯಾಸ್ ಚೇಂಬರ್‌ನಂತಾಗಿದ್ದು, ವಾಯುಮಾಲಿನ್ಯದ ಕಾರಣಕ್ಕೆ ರಾಜಧಾನಿ ಲಾಕ್‌ಡೌನ್‌ ಮಾಡೋ ಸ್ಥಿತಿ ನಿರ್ಮಾಣವಾಗಿದೆ.

ದೆಹಲಿಯ ಆಕಾಶದ ತುಂಬಾ ದಟ್ಟ ಹೊಗೆಯ ಹೊದಿಕೆಯೇ ಕಾಣಿಸ್ತಿದೆ. ಜೀವಕ್ಕೇ ಸಂಚಕಾರ ತಂದೊಡ್ಡೋ ಈ ಹೊಗೆ ದೆಹಲಿ ಜನರನ್ನು ಆತಂಕಕ್ಕೆ ದೂಡಿದೆ. ಹೀಗಾಗಿ ಈಗಾಗಲೇ ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟ್, ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರಕ್ಕೆ ಚಾಟಿ ಬೀಸಿದೆ. ಕಳೆದೊಂದು ವಾರದಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ವಿಷಗಾಳಿಯಿಂದ ಜನ್ರನ್ನು ಕಾಪಾಡಲು ಏನ್ ಕ್ರಮ ಕೈಗೊಂಡಿದ್ದೀರಿ ಅಂತಾ ಪ್ರಶ್ನಿಸಿರೋ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ರಮಣ, ತುರ್ತಾಗಿ ಏನ್ ಕ್ರಮ ಕೈಗೊಳ್ತೀರಾ, ಎರಡು ದಿನಗಳ ಕಾಲ ಲಾಕ್ಡೌನ್ ಮಾಡ್ತೀರಾ ಅಂತಾ ಪ್ರಶ್ನಿಸಿದ್ರು. ಒಂದೇ ತಿಂಗಳ ಅವಧಿಯಲ್ಲಿ ದೆಹಲಿ ಗಾಳಿ ಕಲುಷಿತಗೊಂಡಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾತ್ರ ನಿಧಾನಗತಿ ಅನುಸರಿಸ್ತಿದೆ. ಹೀಗಾಗಿ ಸುಪ್ರೀಂಕೋರ್ಟ್ ದೆಹಲಿ ಸರ್ಕಾರಕ್ಕೆ ಪಂಚ ಪ್ರಶ್ನೆಗಳನ್ನು ಕೇಳೋ ಮೂಲಕ ತರಾಟೆಗೆ ತೆಗೆದುಕೊಂಡಿದೆ.

ದೆಹಲಿ ವಾಯು ಮಾಲಿನ್ಯ ಸುಧಾರಿಸಲು ತುರ್ತಾಗಿ ಏನ್ ಕ್ರಮ ಕೈಗೊಂಡಿದ್ದೀರಿ ಅಂತಾ ಕೇಳಿರೋ ಸುಪ್ರೀಂಕೋರ್ಟ್ ಎರಡು ದಿನಗಳ ಲಾಕ್ಡೌನ್ ಮಾಡ್ತೀರಾ ಅಂತಾ ಪ್ರಶ್ನಿಸಿದೆ. ಇನ್ನು ದೆಹಲಿಯ ವಾಯುಮಾಲಿನ್ಯಕ್ಕೆ ರೈತರನ್ನೇ ಯಾಕೆ ಹೊಣೆ ಮಾಡ್ತೀರಾ, ಇತರ ಕಾರಣಗಳ ಬಗ್ಗೆ ಯಾಕೆ ನಿರ್ಲಕ್ಷ್ಯ ವಹಿಸ್ತಿದ್ದೀರಾ ಅಂತಾ ಪ್ರಶ್ನಿಸಲಾಯ್ತು. ಇನ್ನು ಎಲ್ಲದಲ್ಲೂ ರೈತರನ್ನು ದೂಷಿಸೋದು ಫ್ಯಾಷನ್ ಆಗಿಬಿಟ್ಟಿದೆ. ಕೊನೆಗೆ ರೈತರಿಗೆ ಪರ್ಯಾಯ ಪರಿಹಾರ ಸೂಚಿಸದೆ ಪರಿಸ್ಥಿತಿ ಸುಧಾರಿಸಲು ಸಾಧ್ಯವಿಲ್ಲ ಅಂತಾ ಕೋರ್ಟ್ ಅಭಿಪ್ರಾಯಪಟ್ಟಿದೆ.

ಅತ್ತ ಸುಪ್ರೀಂಕೋರ್ಟ್ ಚಾಟಿ ಬೀಸ್ತಿದ್ದಂತೆ ಎಚ್ಚೆತ್ತುಕೊಂಡ ಕೇಜ್ರಿವಾಲ್ ಸರ್ಕಾರ, ತುರ್ತು ಮೀಟಿಂಗ್ ಮಾಡಿ ಪರಿಸ್ಥೀತಿ ಅವಲೋಕನ ಮಾಡಿದೆ. ಸಂಜೆ 5 ಗಂಟೆಗೆ ತುರ್ತು ಸಭೆ ಕರೆದ ಅರವಿಂದ್ ಕೇಜ್ರಿವಾಲ್, ಕೆಲ ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ಸುಪ್ರೀಂಕೋರ್ಟ್ ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ತಿದ್ದಂತೆ ದೆಹಲಿಯಲ್ಲಿ ಮತ್ತೆ ಒಂದು ವಾರ ಎಲ್ಲಾ ಶಾಲೆಗಳನ್ನು ಬಂದ್ ಮಾಡೋ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಜನದಟ್ಟಣೆ, ವಾಹನ ಬಳಕೆ ಕಡಿಮೆ ಮಾಡೋ ನಿಟ್ಟಿನಲ್ಲಿ ಸರ್ಕಾರಿ ಕಚೇರಿಗಳ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ವ್ಯವಸ್ಥೆ  ಮಾಡಲಾಗಿದೆ.

ಇನ್ನು ಮುಂದಿನ 48 ಗಂಟೆಗಳಲ್ಲಿ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಹದಗೆಡಲಿದ್ದು, ವಾಯುಮಾಲಿನ್ಯ ನಿಯಂತ್ರಿಸದಿದ್ರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಅಂತಾ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

Tags: BJPCongress PartyCovid 19DelhiDelhi Air Pollutionsupreme courtಕರೋನಾಕೋವಿಡ್-19ಬಿಜೆಪಿ
Previous Post

ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ಮುಸ್ಲಾಪುರ ಗ್ರಾಮಸ್ಥರ ಬೆಂಬಲಕ್ಕೆ ನಿಂತ : KRS ಪಕ್ಷ – PART 3

Next Post

ಮುನ್ನೆಲೆಗೆ ಬಂತು 1993ರ ಮುಂಬೈ ಸ್ಪೋಟ ಪ್ರಕರಣ; ಭೂಗತ ಲೋಕದೊಂದಿಗೆ ಸಂಪರ್ಕ ಹೊಂದಿದ್ರಾ ಸಚಿವ ಮಲ್ಲಿಕ್?

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಮುನ್ನೆಲೆಗೆ ಬಂತು 1993ರ ಮುಂಬೈ ಸ್ಪೋಟ ಪ್ರಕರಣ; ಭೂಗತ ಲೋಕದೊಂದಿಗೆ ಸಂಪರ್ಕ ಹೊಂದಿದ್ರಾ ಸಚಿವ ಮಲ್ಲಿಕ್?

ಮುನ್ನೆಲೆಗೆ ಬಂತು 1993ರ ಮುಂಬೈ ಸ್ಪೋಟ ಪ್ರಕರಣ; ಭೂಗತ ಲೋಕದೊಂದಿಗೆ ಸಂಪರ್ಕ ಹೊಂದಿದ್ರಾ ಸಚಿವ ಮಲ್ಲಿಕ್?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada