• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

EXCLUSIVE : ದಸರಾ ಬಳಿಕ ಶಾಲಾ ಮಕ್ಕಳಿಗೆ ಮತ್ತೆ ಮಧ್ಯಾಹ್ನದ ಬಿಸಿಯೂಟ : ಪ್ರತಿಧ್ವನಿಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ !‌

ಕರ್ಣ by ಕರ್ಣ
October 8, 2021
in ಕರ್ನಾಟಕ
0
EXCLUSIVE : ದಸರಾ ಬಳಿಕ ಶಾಲಾ ಮಕ್ಕಳಿಗೆ ಮತ್ತೆ ಮಧ್ಯಾಹ್ನದ ಬಿಸಿಯೂಟ : ಪ್ರತಿಧ್ವನಿಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ !‌
Share on WhatsAppShare on FacebookShare on Telegram

EXCLUSIVE : ದಸರಾ ಬಳಿಕ ಶಾಲಾ ಮಕ್ಕಳಿಗೆ ಮತ್ತೆ ಮಧ್ಯಾಹ್ನದ ಬಿಸಿಯೂಟ : ಪ್ರತಿಧ್ವನಿಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ !‌

ADVERTISEMENT

ಕೊರೋನಾ ಕಡಿಮೆಯಾದ ಹಿನ್ನೆಲೆ ಶಾಲೆ ಆರಂಭಗೊಂಡು ದಿನಗಳೇ ಕಳೆದಿದೆ. ಹೀಗೆ ಶಾಲೆ ಆರಂಭವಾದ ಬೆನ್ನಲ್ಲೇ ಮಕ್ಕಳಲ್ಲಿ ಅಪೌಷ್ಟಿಕತೆ ಕೊರತೆ ಇದೆ ಎಂಬ ಚರ್ಚೆಗಳು ಶುರುವಾಗಿತ್ತು. ಇದೀಗ ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಶಿಕ್ಷಣ ಇಲಾಖೆ ಮಕ್ಕಳಿಗೆ ಬಿಸಿಯೂಟ ಕಾರ್ಯಕ್ರಮಕ್ಕೆ ಮತ್ತೆ ಚಾಲನೆ ನೀಡಲು ಮುಂದಾಗಿದೆ. ಈ ಬಗ್ಗೆ ಪ್ರತಿಧ್ವನಿಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಎಕ್ಸ್‌ಕ್ಲೂಸಿವ್‌ ಆಗಿ ಮಾಹಿತಿ ನೀಡಿದ್ದಾರೆ.

ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಿದ ಹಿನ್ನೆಲೆ ತಜ್ಞರ ಸಲಹೆ ಪಡೆದ ಶಿಕ್ಷಣ ಇಲಾಖೆ !


ಕೊರೋನಾ ವೈರಸ್ ಜನರ ಜೀವ ಮತ್ತು ಜೀವನದ ಜೊತೆಗೆ ಮಕ್ಕಳ ಭವಿಷ್ಯಕ್ಕೂ ಕೊಳ್ಳಿ ಇಟ್ಟಂತೆ ಕಾಡಿತ್ತು. ಕೊರೋನಾ ಕಾರಣದಿಂದ ರಾಜ್ಯದಲ್ಲಿ ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆ ಎದುರಾಗಿತ್ತು. ವೈರಲ್ ಇನ್ಫೆಕ್ಷನ್‌ ಜೊತೆ ನಾನಾ ಸಮಸ್ಯೆಗೆ ಮಕ್ಕಳು ಈ ಅವಧಿಯಲ್ಲಿ ತುತ್ತಾಗುತ್ತಿದ್ದಾರೆ. ಹೀಗಾಗಿ ರಾಜ್ಯ ಶಿಕ್ಷಣ ಇಲಾಖೆ ಮಕ್ಕಳಿಗೆ ಮತ್ತೆ ಬಿಸಿಯೂಟ ಆರಂಭಿಸುಲು ಮುಂದಾಗಿದೆ. ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕದಲ್ಲಿ ಮಕ್ಕಳಿಗೆ ಈಗ ಅಪೌಷ್ಟಿಕತೆ ಸಮಸ್ಯೆ ಎದುರಾಗಿದ್ದು ಮಕ್ಕಳಿಗೆ ವೈರಲ್ ಇನ್ಫೆಕ್ಷನ್‌ ಸೇರಿದಂತೆ ನಾನಾ ಖಾಯಿಲೆಗಳು ಹಾವಳಿ ಹೆಚ್ಚಾಗಿದೆ. ಸದ್ಯ ಪೌಷ್ಟಿಕತೆ ಸುಳಿಯಲ್ಲಿ ರಾಜ್ಯದ 4 ಲಕ್ಷ ಮಕ್ಕಳು ಇದ್ದು, ಅಪೌಷ್ಟಿಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಆಗಿರುವ ಬಗ್ಗೆಯೂ ತಜ್ಷರು ಕಳವಳ ವ್ಯಕ್ತಪಡಿಸಿದ್ದರು.

ಹೀಗಾಗಿ ಮಕ್ಕಳಿಗೆ, ಪೌಷ್ಟಿಕಾಂಶಯುಕ್ತ ಆಹಾರ ನೀಡಲು ಪ್ರಾಮುಖ್ಯತೆ ಕೊಡಬೇಕು ಅಂತಾ ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿತ್ತು. ಇದನ್ನ ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಮಕ್ಕಳಿಗೆ ಮತ್ತೆ ಮದ್ಯಾಹ್ನದ ಬಿಸಿ ಊಟ ನೀಡಲು ಮುಂದಾಗಿದೆ.


ಕೊರೊನಾ ಕಾಟಕ್ಕೆ ಕಳೆದ ಎರಡು ವರ್ಷದಿಂದ ಬಿಸಿಯೂಟ ನಿಲ್ಲಿಸಲಾಗಿತ್ತು. ಬಿಸಿಯೂಟದಿಂದ ಮಕ್ಕಳಿಗೆ ಸಿಗುತ್ತಿದ್ದ ಪೌಷ್ಟಿಕತೆಗೆ ಹೊಡೆತ ಬೀದಿತ್ತು. ಬಿಸಿಯೂಟದ ಬದಲಿಗೆ ಮಕ್ಕಳ ಮನೆಗೆ ಆಹಾರ ಧಾನ್ಯ ತಲುಪಿಸುವ ಯೋಜನೆ ಸರ್ಕಾರ ರೂಪಿಸಿತ್ತಾದರೂ, ಅದು ಯಶಸ್ವಿಯಾಗಲಿಲ್ಲ.


ಮಕ್ಕಳ ಮನೆಗೆ ಆಹಾರ ಧಾನ್ಯ ವಿತರಣೆ ಸಮರ್ಪಕವಾಗಿ ಆಗುತ್ತಿರಲಿಲ್ಲ. ಇದರಿಂದಾಗಿ ಲಕ್ಷಾಂತರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ತಜ್ಞರ ಸಲಹೆ ಬೆನ್ನಲ್ಲೇ ಶಿಕ್ಷಣ ಇಲಾಖೆ ಮತ್ತೆ ರಾಜ್ಯದಲ್ಲಿ ಮಕ್ಕಳಿಗೆ ಬಿಸಿಯೂಟ ನೀಡಲು ಮುಂದಾಗಿದೆ. ಈಗಾಗಲೇ ಎಲ್ಲಾ ಬಿಇಒ ಹಾಗು ಜಿಲ್ಲಾ ನಿರ್ದೇಶಕರಿಗೆ ಬಿಸಿಯೂಟ ಕಾರ್ಯಕ್ರಮದ ಮರು ಆರಂಭಕ್ಕೆ ಬೇಕಾದ ಸಿದ್ಧತೆಗೆ ಸೂಚಿಸಿದ್ದು ದಸರಾ ರಜೆಯ ಬಳಿಕ ಬಿಸಿಯೂಟ ಆರಂಭಿಸಲಾಗುವುದು ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಧ್ವನಿಗೆ ಮಾಹಿತಿ ನೀಡಿದ್ದಾರೆ.

ಶಿಕ್ಷಣ ಇಲಾಖೆಗೆ ತಜ್ಞರ ಸಲಹೆ ಏನು ?

  • ಅಪೌಷ್ಟಿಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ
  • ಅಪೌಷ್ಟಿಕತೆ ಎದುರಿಸುತ್ತಿರುವ ಮಕ್ಕಳಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿ ಇರಲಿದೆ
  • ಕೊರೊನಾ ಸೋಂಕು ತಗಲುವ ಸಾಧ್ಯತೆ ಹೆಚ್ಚಿರುತ್ತದೆ
  • ಅಪೌಷ್ಟಿಕ ಮಕ್ಕಳಲ್ಲಿ ನ್ಯುಮೋನಿಯಾ ವೈರಲ್ ಇನ್ಫೆಕ್ಷನ್‌ ಸೇರಿದಂತೆ ವಿವಿಧ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ
  • ಹೀಗಾಗಿ ಮಕ್ಕಳಿಗೆ ಪೌಷ್ಠಿಕತೆಯ ಆಹಾರ ಅವಶ್ಯಕತೆ ಇದೆ
  • ಸಾಧ್ಯವಾದಷ್ಟು ಬೇಗಾ ಬಿಸಿಯೂಟ ರಾಜ್ಯದಲ್ಲಿ ಆರಂಭಿಸಲು ಸಲಹೆ

ಕೊರೋನಾ ಎರಡನೇ ಅಲೆ ತಗ್ಗಿರುವ ನಡುವೆಯೇ ಮಕ್ಕಳಲ್ಲಿ ವೈರಲ್ ಇನ್ಫೆಕ್ಷನ್‌ ಹಾವಳಿ ಹೆಚ್ಚಾಗಿತ್ತು. ಲಕ್ಷಾಂತರ ಮಕ್ಕಳಲ್ಲಿ ಅಪೌಷ್ಠಿಕತೆ ಎದುರಾಗಿತ್ತು. ಹೀಗಾಗಿ ತಜ್ಞರು ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದು, ಕಳೆದ ಎರಡು ವರ್ಷದಿಂದ ನಿಲ್ಲಿಸಲಾಗಿದ್ದ ಬಿಸಿಯೂಟ ದಾಸೋಹವನ್ನ ಇಲಾಖೆ ಮತ್ತೆ ಆರಂಭಿಸಲು ಮುಂದಾಗಿದೆ. ಹೀಗೆ ಮಕ್ಕಳ ಹಿತ ದೃಷ್ಟಿಯಿಂದ ಮತ್ತೆ ಬಿಸಿಯೂಟ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಚಾಲನೆ ನೀಡುತ್ತಿದ್ದಾರೆ. ದಸರಾ ಮುಗಿದ ಬೆನ್ನಲ್ಲೇ ಶಾಲಾ ಮಕ್ಕಳಿಗೆ ಮತ್ತೆ ಶಾಲೆಯಲ್ಲಿ ಬಿಸಿಯೂಟ ಸಿಗಲಿದೆ. ಇದರ ಜೊತೆಗೆ ಮೊಟ್ಟೆ, ಹಾಲು ಸೇರಿದಂತೆ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸುವ ಆಹಾರಗಳು ನೀಡಲಿದೆ ಶಿಕ್ಷಣ ಇಲಾಖೆ.

Previous Post

ಸದನದಲ್ಲಿ ಸಿದ್ದರಾಮಯ್ಯ ಹಾಸ್ಯ ಪ್ರಜ್ಞೆ

Next Post

ʼಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಎಲ್ಲಾ ವರ್ಗದ ಜನರೂ ಅಧಿಕಾರಕ್ಕೆ ಬಂದಂತೆʼ ಸಿಂಧಗಿ ಚುನಾವನಾ ಪ್ರಚಾರದಲ್ಲಿ ಡಿಕೆಶಿ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
Next Post
ʼಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಎಲ್ಲಾ ವರ್ಗದ ಜನರೂ ಅಧಿಕಾರಕ್ಕೆ ಬಂದಂತೆʼ ಸಿಂಧಗಿ ಚುನಾವನಾ ಪ್ರಚಾರದಲ್ಲಿ ಡಿಕೆಶಿ

ʼಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಎಲ್ಲಾ ವರ್ಗದ ಜನರೂ ಅಧಿಕಾರಕ್ಕೆ ಬಂದಂತೆʼ ಸಿಂಧಗಿ ಚುನಾವನಾ ಪ್ರಚಾರದಲ್ಲಿ ಡಿಕೆಶಿ

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada