• Home
  • About Us
  • ಕರ್ನಾಟಕ
Tuesday, July 8, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ (Hitech Deffence & Aerospace Park) ಅಭಿವೃದ್ಧಿಗೆ ಜಮೀನು
ಸಚಿವ ಮುನಿಯಪ್ಪ ಜತೆ ಸಭೆ, ರೈತರ ಹೋರಾಟಕ್ಕೆ ಸಕಾರಾತ್ಮಕ ಸ್ಪಂದನ, ಪ್ರತಿಭಟನೆ ಕೈಬಿಡಲು ಮನವಿ
ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಮಾಡಲ್ಲ

ADVERTISEMENT

ಉದ್ದೇಶಿತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ (Hitech Deffence & Aerospace Park)ಅಭಿವೃದ್ಧಿಗಾಗಿ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಗೆ ಸೇರಿದ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿನ 495 ಎಕರೆ ಜಮೀನನ್ನು ಸ್ವಾಧೀನ ಮಾಡದಿರಲು ತೀರ್ಮಾನಿಸಲಾಗಿದೆ. ಜತೆಗೆ ಈ ಹೋಬಳಿಯಲ್ಲಿ ಇನ್ನು ಮುಂದೆ ಕೈಗಾರಿಕಾ ಉದ್ದೇಶಗಳಿಗೆ ಸರಕಾರ ಯಾವುದೇ ಜಮೀನನ್ನು ವಶಪಡಿಸಿಕೊಳ್ಳದೆ ಇರಲು ನಿರ್ಧರಿಸಿದೆ. ಆದ್ದರಿಂದ ಭೂಸ್ವಾಧೀನ ವಿರುದ್ಧ ಹೋರಾಟ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಮಂಗಳವಾರ ಈ ಸಂಬಂಧ ಅವರು ವಿಧಾನಸೌದದ ತಮ್ಮ ಕಚೇರಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ದೇವನಹಳ್ಳಿ ಶಾಸಕರೂ ಆಗಿರುವ ಕೆ ಎಚ್ ಮುನಿಯಪ್ಪ (K.H Muniyappa) ಅವರ ಜತೆ ಸುದೀರ್ಘ ಸಭೆ ನಡೆಸಿ ಈ ತೀರ್ಮಾನಕ್ಕೆ ಬಂದರು.

ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಸಚಿವರು, `ಉದ್ದೇಶಿತ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗೆ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ 2 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು 2021ರ ಆ.27ರಂದು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಇದಾದ ಮೇಲೆ 2022ರ ಫೆ.15ರಂದು ಈ ಸಂಬಂಧ ಆದೇಶ ಹೊರಡಿಸಲಾಗಿತ್ತು. ಆದರೆ ಹೋಬಳಿಯ ರೈತರು ಈಗಾಗಲೇ ಎರಡು ಬಾರಿ ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ಕಳೆದುಕೊಂಡಿದ್ದಾರೆ. ಜತೆಗೆ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿಗಳಲ್ಲಿನ ನೀರಾವರಿ, ಕೃಷಿ ಮತ್ತು ಜನವಸತಿಗಳನ್ನು ಪರಿಗಣಿಸಿ ಭೂಸ್ವಾಧೀನದಿಂದ ಈ ಹಳ್ಳಿಗಳ 231.23 ಎಕರೆ, 185.18 ಎಕರೆ ಮತ್ತು 78.21 ಎಕರೆಗೆ ಸ್ವಾಧೀನ ಪ್ರಕ್ರಿಯೆಯಿಂದ ವಿನಾಯಿತಿ ಕೊಡಲಾಗಿದೆ’ ಎಂದಿದ್ದಾರೆ.

ಈಗ ಮಿಕ್ಕಂತೆ ಉಳಿದ ಹತ್ತು ಗ್ರಾಮಗಳಾದ ಪಾಳ್ಯ, ಹರಳೂರು, ಪೋಲನಹಳ್ಳಿ, ಗೋಕರೆ ಬಚ್ಚೇನಹಳ್ಳಿ, ನಲ್ಲೂರು, ಮಲ್ಲೇಪುರ, ನಲ್ಲಪ್ಪನಹಳ್ಳಿ, ಚೀಮಾಚನಹಳ್ಳಿ, ಮುದ್ದೇನಹಳ್ಳಿ ಮತ್ತು ಹಾಡ್ಯಾಳ ವ್ಯಾಪ್ತಿಯಲ್ಲಿನ 1,232 ಎಕರೆ ಭೂಸ್ವಾಧೀನ ನಡೆಯಲಿದೆ. ಅದರಲ್ಲೇನೂ ಬದಲಾವಣೆ ಇಲ್ಲ. ಭೂಮಿ ಕಳೆದುಕೊಳ್ಳಲಿರುವ ರೈತರಿಗೆ ಜಿಲ್ಲಾಧಿಕಾರಿ ಸೂಕ್ತ ಪರಿಹಾರ ಮೊತ್ತ ನಿಗದಿ ಪಡಿಸಲಿದ್ದಾರೆ. ಅಥವಾ ಸಂತ್ರಸ್ತ ರೈತರು ಆಸಕ್ತಿ ವ್ಯಕ್ತಪಡಿಸಿದರೆ 1 ಎಕರೆ ಅಭಿವೃದ್ಧಿ ಪಡಿಸಿದ ಭೂಮಿಯಲ್ಲಿ 10,771 ಚದರ ಅಡಿ ಜಮೀನನ್ನು ಬೇಕಾದರೂ ಕೊಡಲು ಅವಕಾಶವಿದೆ. ಈ ಜಾಗವನ್ನು ರೈತರು ವಾಣಿಜ್ಯೋದ್ದೇಶಗಳಿಗಾಗಿ ಬಳಸಿಕೊಳ್ಳಬಹುದು ಎಂದು ಅವರು ವಿವರಿಸಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದವರು ನಿರ್ದಿಷ್ಟವಾಗಿ ಚನ್ನರಾಯಪಟ್ಟಣ, ಮಟ್ಟಿಬಾರ್ಲು ಮತ್ತು ಶ್ರೋತ್ರೀಯ ತೆಲ್ಲೋಹಳ್ಳಿ ಗ್ರಾಮಗಳ ಜಮೀನಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಸಂಬಂಧ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ವಿಸ್ತೃತ ಸಭೆ ನಡೆಸಲಾಗಿತ್ತು. ರೈತರ ಕೋರಿಕೆಗೆ ಸರಕಾರ ಈಗ ಸ್ಪಂದಿಸಿದಂತಾಗಿದೆ. ಆದ್ದರಿಂದ ಇನ್ನು ಹೋರಾಟ ಬೇಡ. ನಮ್ಮಲ್ಲಿ ಕೃಷಿ ಮತ್ತು ಕೈಗಾರಿಕೆ ಎರಡನ್ನೂ ಜೊತೆಜೊತೆಯಲ್ಲೇ ತೆಗೆದುಕೊಂಡು ಹೋಗಬೇಕಾಗಿದೆ. ನಾನು ಮತ್ತು ಮುನಿಯಪ್ಪ ಕೂಡ ರೈತ ಕುಟುಂಬಗಳಿಂದಲೇ ಬಂದವರು. ರೈತರ ನೋವು ನಮಗೆ ಅರ್ಥವಾಗುತ್ತದೆ. ಹಿಂದೆ ನಾವು ವಿರೋಧ ಪಕ್ಷದಲ್ಲಿದ್ದಾಗ ರೈತರನ್ನು ಭೇಟಿ ಮಾಡಿದ್ದ ಸಿದ್ದರಾಮಯ್ಯನವರು ನಮ್ಮ ಸರಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಕುರಿತ ತೀರ್ಮಾನವನ್ನು ಪರಿಶೀಲಿಸುತ್ತೇವೆ ಎಂದಿದ್ದರು. ಈಗ ಆ ಮಾತಿಗೆ ತಕ್ಕಂತೆ ನಡೆದುಕೊಂಡಿದ್ದೇವೆ ಎಂದು ಪಾಟೀಲ ನುಡಿದಿದ್ದಾರೆ.

ಸಚಿವ ಮುನಿಯಪ್ಪ ಮಾತನಾಡಿ, ರೈತರು ಸರ್ಕಾರದ ತೀರ್ಮಾನವನ್ನು ಗೌರವಿಸಿ, ಪ್ರತಿಭಟನೆ ಕೈಬಿಡಬೇಕು ಎಂದು ಮನವಿ ಮಾಡಿದರು.

ಈ ರೀತಿ ರಾಜ್ಯದಲ್ಲಿ ಎಲ್ಲಿಯೂ ಜಮೀನನ್ನು ಸ್ವಾಧೀನದಿಂದ ಕೈಬಿಟ್ಟ ನಿರ್ದಶನ ಇಲ್ಲ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಂ.ಬಿ.ಪಾಟೀಲ ಅವರು ರೈತರ ಪರವಾದ ತೀರ್ಮಾನ ತೆಗೆದುಕೊಂಡಿದ್ದು ಅದನ್ನು ಮನ್ನಿಸಿ ಪ್ರತಿಭಟನೆ ಕೈಬಿಡಬೇಕು‌ ಎಂದು ಮುನಿಯಪ್ಪ ಹೇಳಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಬೆಂ.ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಕೆಐಎಡಿಬಿ ಸಿಇಒ ಡಾ.ಮಹೇಶ್, ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಅನುರಾಧ, ಸೇರಿದಂತೆ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.

Tags: A B BasavarajAerospace ParkBangalore RuralCEO ANuradhaCEO Dr MaheshCHannarayanapattanacongressDeffenceDK ShivakumarK H MuniyappaKIADBM B PatilMinisterMLASelvaKumarsiddaramaiah
Previous Post

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

Next Post

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

Related Posts

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ
ದೇಶ

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

by ನಾ ದಿವಾಕರ
July 8, 2025
0

----ನಾ ದಿವಾಕರ---- ಪ್ರಜಾತಂತ್ರದ ಚೌಕಟ್ಟಿನ ಒಳಗೇ ಆಳ್ವಿಕೆಯನ್ನು ಬಿಗಿಗೊಳಿಸುವ ಒಂದು ಆಡಳಿತದ Template (ತುರ್ತುಪರಿಸ್ಥಿತಿ – ಕಲಿತಿರುವುದೇನು ಕಲಿಯಬೇಕಾದ್ದು ಏನು ? ಮಂದುವರೆದ ಭಾಗ) ವಿಶ್ವದ ಯಾವುದೇ...

Read moreDetails

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

July 7, 2025

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

July 7, 2025
ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

July 7, 2025
Next Post

HD Kumarswamy: ಮಾವು ಬೆಳೆಗಾರರ ನೆರವಿಗೆ ಬರುವಂತೆ ಮನವಿ ಪತ್ರ ಬರೆದ ಹೆಚ್.ಡಿ ಕುಮಾರಸ್ವಾಮಿ.

Recent News

Top Story

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

by ಪ್ರತಿಧ್ವನಿ
July 7, 2025
Top Story

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
July 7, 2025
ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 
Top Story

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

by Chetan
July 7, 2025
ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ
Top Story

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

by ಪ್ರತಿಧ್ವನಿ
July 7, 2025
Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್
Top Story

Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್

by Chetan
July 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

ತುರ್ತುಪರಿಸ್ಥಿತಿ- ಆಳ್ವಿಕೆಯ ಮಾದರಿ ಕಲ್ಪಿಸಿದ ವಿದ್ಯಮಾನ

July 8, 2025

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

July 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada