ಮಂಗಳೂರಿನಲ್ಲಿ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಸಾಕಷ್ಟು ಪ್ರಚೋದನಕಾರಿ ಘಟನೆಗಳು ನಡೆಯುತ್ತಿದ್ದು, ಕೊಂದವರು, ಕೊಂದವರ ಮನೆಯವರು, ಅಲ್ಲಿ ಯಾರು ಸಿಗುತ್ತಾರೋ ಅವರನ್ನ ಕೊಚ್ಚಿ ಕೊಲ್ಲುತ್ತೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕರಾವಳಿಯಲ್ಲಿ ಪ್ರತಿಕಾರದ ಸಂದೇಶಗಳು ಮುಂದುವರಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಸೆಲ್ಫಿ ವಿಡಿಯೋ ಮಾಡಿ ಪೋಸ್ಟ್ ಮಾಅಡಲಾಗಿದೆ. ಧನುಷ್ ಸಿ ಪಕ್ಕಳ ಎಂಬಾತ ಪೋಸ್ಟ್ ಮಾಡಿದ್ದು, ಲೈವ್ನಲ್ಲಿ ಬಂದು ಮುಸ್ಲಿಮರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ತನ್ನದೇ ಫೇಸ್ ಬುಕ್ ಐಡಿಯಿಂದ ಲೈವ್ ಬಂದು ಎಚ್ಚರಿಕೆ ಕೊಡಲಾಗಿದೆ. ಜಾಸ್ತಿ ದಿನ ತಗೊಳಲ್ಲ, ತಕ್ಷಣವೇ ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ಎಂದಿದ್ದಾರೆ ಧನುಷ್ ಸಿ ಪಕ್ಕಳ.
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂಥ ನಿವಾಸಿ ಧನುಷ್ ಸಿ ಪಕ್ಕಳ ಮೇಲೆ FIR ದಾಖಲು ಮಾಡಲಾಗಿದೆ. ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಕಾರದ ಹೇಳಿಕೆ ನೀಡಿದ್ದು, ಸಮುದಾಯಗಳ ನಡುವೆ ಕೋಮುದ್ವೇಷ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂತಹ ಪ್ರಚೋದನಾತ್ಮಕ ವೀಡಿಯೋವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಯುವಕನ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. BNS ಆ್ಯಕ್ಟ್ 196(1)(A), 353(1)(C) ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆದುತ್ತಿದ್ದಾರೆ.

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೂ FIR ದಾಖಲು ಆಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ನಿನ್ನೆ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಳಶೋತ್ಸವ ವೇಳೆ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಾಗಿದೆ. ತೆಕ್ಕಾರು ನಿವಾಸಿ ಇಬ್ರಾಹಿಂ ಎಸ್.ಬಿ ಎಂಬಾತ ದೂರು ನೀಡಿದ್ದು, ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಅಂತಾ ಆರೋಪಿಸಲಾಗಿದೆ. ಧರ್ಮ – ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಅಂತ BNSS ಆಕ್ಟ್ 196, 352(2) ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
