• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 17, 2023
in Top Story, ಇದೀಗ, ದೇಶ
0
Fact Check : ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್ ಶಾಂತಿ​ ಪ್ರಶಸ್ತಿ.. ಸುಳ್ಳಿನ ಹಿಂದಿನ ಸತ್ಯ..
Share on WhatsAppShare on FacebookShare on Telegram

ನವದೆಹಲಿ:ಮಾ.17: ಪ್ರಧಾನಿ ನರೇಂದ್ರ ಮೋದಿಗೆ ನೋಬೆಲ್​ ಶಾಂತಿ ಪ್ರಶಸ್ತಿ ಸಿಗುವ ಎಲ್ಲಾ ಅರ್ಹತೆಗಳು ಇವೆ ಎಂದು ನೋಬೆಲ್​ ಶಾಂತಿ ಪ್ರಶಸ್ತಿ ಡೆಪ್ಯುಟಿ ಲೀಡರ್​​ ಅಸ್ಲೆ ತೋಜೆ ಅಭಿಪ್ರಾಯಪಟ್ಟಿದ್ದಾರೆ ಎಂದು ಭಾರತೀಯ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಪ್ರಧಾನಿ ಮೋದಿ ವಿಶ್ವ ಮನ್ನಣೆ ಪಡೆದಿರುವ ನಾಯಕ. ಭಾರತದಲ್ಲಿ ಸಾಕಷ್ಟು ವರ್ಷಗಳಿಂದ ಮೋದಿ ನಾಯಕತ್ವ ಆಳ್ವಿಕೆ ನಡೆಯುತ್ತಿದೆ. ರಷ್ಯಾ ಹಾಗು ಉಕ್ರೇನ್​ ನಡುವಿನ ಯುದ್ಧದ ಸಮಯದಲ್ಲಿ ಪ್ರಧಾನಿ ಮೋದಿ ರಷ್ಯಾ ಸರ್ಕಾರಕ್ಕೆ ಎಚ್ಚರಿಸುವ ಕೆಲಸ ಮಾಡಿದ್ದರು. ಇದಕ್ಕಾಗಿ ಪ್ರಧಾನಿ ಮೋದಿ ಅವರನ್ನು ನೊಬೆಲ್ ಪ್ರಶಸ್ತಿಗೆ ಪರಿಗಣಿಸಬಹುದು ಎಂದು ನೊಬೆಲ್ ಸಮಿತಿಯ ಸದಸ್ಯ ಅಸ್ಲೆ ತೋಜೆ ಹೇಳಿದ್ದಾರೆ ಎಂದು ಟ್ವೀಟ್​ ಮಾಡಲಾಗಿತ್ತು. ಈ ವಿಚಾರ ಅಬ್ಬರದ ಪ್ರಚಾರ ವೇಗವನ್ನೂ ಪಡೆದಿತ್ತು. ಆದರೆ ಇದೀಗ ನಕಲಿ ಟ್ವೀಟ್ ಪೋಸ್ಟ್ ಮಾಡಲಾಗಿದೆ ಎಂದು ಸ್ವತಃ ನೊಬೆಲ್ ಸಮಿತಿಯ ಸದಸ್ಯ ಅಸ್ಲೆ ತೋಜೆ (Nobel Prize Committee Asle Toje) ಉಲ್ಲೇಖಿಸಿದ್ದಾರೆ.

ADVERTISEMENT

ಒಂದೇ ದಿನದಲ್ಲಿ ಸುಳ್ಳಿನ ಹೇಳಿಕೆಗೆ ಬಿತ್ತು ಬ್ರೇಕ್​..!

(Nobel Prize Committee Asle Toje) ನೊಬೆಲ್ ಸಮಿತಿಯ ಸದಸ್ಯ ಅಸ್ಲೆ ತೋಜೆ ಅವರ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದ್ದನ್ನು ಗಮನಿಸಿದ್ದ ಅಸ್ಲೆ ತೋಜೆ, ನಾನು ಅದನ್ನು ಹೇಳಿದ್ದೇನೆ ಎನ್ನುವ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ನೊಬೆಲ್ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದಾರೆ ಎಂಬ ವರದಿಗಳು ಸುಳ್ಳು ಎಂದಿದ್ದಾರೆ. ನಾರ್ವೇಜಿಯನ್ ನೊಬೆಲ್ ಸಮಿತಿಯ ಉಪ ನಾಯಕ ಅಸ್ಲೆ ಟೋಜೆ, ನಾವು ನೋಬೆಲ್​ ಬಗ್ಗೆ ಚರ್ಚಿಸಬಾರದು. ನಾನು ಆ ರೀತಿಯ ಅಭಿಪ್ರಾಯ ಬರುವಂತಹ ಹೇಳಿಕೆಯನ್ನೂ ನೀಡಿಲ್ಲ. ಭಾರತಕ್ಕೆ ನಾನು ನಾರ್ವೇಜಿಯನ್ ನೊಬೆಲ್ ಸಮಿತಿಯ ಉಪ ನಾಯಕನಾಗಿ ಬಂದಿಲ್ಲ. ನಾನು ಅಂತಾರಾಷ್ಟ್ರೀಯ ಶಾಂತಿ ಮತ್ತು ಜಾಗೃತಿ ನಿರ್ದೇಶಕನಾಗಿ ಹಾಗು ಭಾರತದ ಸ್ನೇಹಿತನಾಗಿ ಇಲ್ಲಿದ್ದೇನೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ. ರಷ್ಯಾ ಹಾಗು ಉಕ್ರೇನ್ ಸಂಘರ್ಷದ ಸಮಯದಲ್ಲಿ “ಇದು ಯುದ್ಧದ ಯುಗವಲ್ಲ” ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್​ಗೆ ಮೋದಿ ನೆನಪಿಸಿದ ವಿಚಾರವಾಗಿ ಮಾತನಾಡಿದ್ದರು. ಇದೇ ಕಾರಣಕ್ಕೆ ನೋಬೆಲ್​ ಶಾಂತಿ ಪ್ರಶಸ್ತಿ ಎನ್ನುವ ವರದಿಗಳು ಆಗಿದ್ದವು.

‘ಭಾರತ ಸ್ನೇಹಿತನಾಗಿ ರಷ್ಯಾ ಎಚ್ಚರಿಸಿತ್ತು’

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಗ್ಗೆ ಮಾತನಾಡಿ ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವು ಒಂದು ದುರಂತ. ಯುದ್ಧ ಅಂತ್ಯ ಮಾಡಬೇಕಿದೆ. ವಿಶ್ವದ ಇತರೆ ರಾಷ್ಟ್ರಗಳು ಯುದ್ಧ ನಿಲ್ಲಿಸಲು ಪ್ರಯತ್ನಿಸಬೇಕು. ಈ ನಿಟ್ಟಿನಲ್ಲಿ ಭಾರತದ ಮಧ್ಯಸ್ಥಿಕೆಯನ್ನು ನಾವು ನೆನಪಿಸಿಕೊಳ್ಳಬೇಕು. ಪರಮಾಣು ಶಸ್ತ್ರಾಸ್ತ್ರ ಬಳಕೆ ಸರಿಯಲ್ಲ. ವಿವಾದಗಳನ್ನು ಯುದ್ಧದ ಮೂಲಕ ಪರಿಹರಿಸಿಕೊಳ್ಳಲು ಮುಂದಾಗಬಾರದು. ಇದೇ ಸಂದೇಶವನ್ನು ಭಾರತ ರಷ್ಯಾಗೆ ನೀಡಿದೆ ಎಂದಿದ್ದರು. ಭಾರತ ಯಾವುದೇ ಏರು ದನಿಯಲ್ಲಿ ಇದನ್ನು ಮನದಟ್ಟು ಮಾಡಲಿಲ್ಲ. ಆದರೆ ಇದೇ ವಿಷಯವನ್ನು ಭಾರತ ಸ್ನೇಹಪರವಾಗಿ ತಿಳಿಸಿತು. ಭಾರತವು ವಿಶ್ವದ ಪ್ರಮುಖ ಶಕ್ತಿಗಳಲ್ಲಿ ಒಂದಾಗಿದೆ, ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಇದರ ಅಗತ್ಯವಿದೆ ಎಂದಿದ್ದರು.

ಭಾರತದಲ್ಲಿ ಸುಳ್ಳನ್ನೇ ಸತ್ಯ ಎನ್ನುವ ಜಮಾನ..!!

ಭಾರತದಲ್ಲಿ ಸುಳ್ಳನ್ನು ಹೇಳಿ ಜನರನ್ನು ನಂಬಿಸುವ ವಿಶ್ವವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಯಾವುದಾದರೂ ಚುನಾವಣೆಗಳು ಬಂದ ವೇಳೆ ಹಸಿ ಸುಳ್ಳುಗಳನ್ನೇ ಪ್ರಚಾರ ಮಾಡಲಾಗುತ್ತದೆ. ವಾಟ್ಸ್​ ಆ್ಯಪ್​, ಫೇಸ್​ಬುಕ್​ ಸೇರಿದಂತೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರ ಮುಗ್ದತೆಯನ್ನು ಸೆಳೆಯುವ ಕೆಲಸ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಉತ್ಪೇಕ್ಷೆ ಮಾಡಿ ರಿಪೋರ್ಟ್​ ಹಾಕುವುದು. ಇಡೀ 70 ವರ್ಷದಲ್ಲಿ ಮಾಡಿದ್ದ ಸಾಲವನ್ನು ತೀರಿಸಿದ್ದಾರೆ ಅಂತಾ ಸುಳ್ಳು ಹೇಳುವುದು. ಪ್ರಧಾನಿ ನರೇಂದ್ರ ಮೋದಿ ಆರ್ಥಿಕ ಚೇತರಿಕೆಗೆ ಸಾಥ್​ ನೀಡಿದ್ದಾರೆ ಎನ್ನುವುದು. ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ನಡೆದ ಏರ್​ ಸ್ಟ್ರೈಕ್​ನಲ್ಲಿ 400 ಜನ ಪಾಕಿಸ್ತಾನಿ ಭಯೋತ್ಪಾಧಕರನ್ನು ಹೊಡೆದು ಹಾಕಿದ್ದೇವೆ ಎನ್ನುವುದು. ಹೀಗೆ ಚುನಾವಣೆ ಬರುತ್ತಿದ್ದ ಹಾಗೆ ಸುಳ್ಳುಗಳ ವಿಶ್ವವಿದ್ಯಾಲಯಗಳು ಆರಂಭವಾಗುತ್ತವೆ. ಅಭಿವೃದ್ಧಿ ಹೆಸರಿನಲ್ಲಿ ಗೆಲ್ಲಲಾಗದ ಬಿಜೆಪಿ ರಾಮಮಂದಿರ, ದೇವರು, ಮಂದಿರ, ಮಸೀದಿ , ಚರ್ಚ್​ ವಿಚಾರದಲ್ಲಿ ಸಂಘರ್ಷ ಸೃಷ್ಟಿಸಿ ಗೆಲುವು ಸಾಧಿಸುತ್ತದೆ ಎನ್ನುವುದು ವಿಪಕ್ಷಗಳ ಆರೋಪ. ಇದೇ ಆರೋಪಕ್ಕೆ ನೋಬೆಲ್​ ಶಾಂತಿ ಪುರಸ್ಕಾರ ಕೂಡ ಸೇರಿಕೊಳ್ಳಲಿದೆ ಎನ್ನಬಹುದು.

—–ಕೃಷ್ಣಮಣಿ—-

Tags: (Nobel Prize Committee Asle TojeAsle TojeBJPBJP GovernmentlatestnewsModiNobel Peace PrizePMModiprathdvaninewsPratidhvanipratidhvanidigitalTrending
Previous Post

JDS Party was growing strong in Bangarpet : ಬಂಗಾರಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿ ಬೆಳೆಯುತ್ತಿದ್ದೆ :

Next Post

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

ಸೋಮಣ್ಣ ಮುಚ್ಚಿಟ್ಟಿದ್ದನ್ನು ಯಡಿಯೂರಪ್ಪ ಬಿಚ್ಚಿಟ್ಟಿದ್ಯಾಕೆ..? ಬಿಜೆಪಿಯಲ್ಲಿ ಏನಾಗ್ತಿದೆ..? : Why did Yediyurappa Reveal What Somanna Had hidden?

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada