• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಳು ಬೆಳಗುಂದಿ “ಬ್ರ್ಯಾಟ್”(BRAT) ಚಿತ್ರದ “ಗಂಗಿ ಗಂಗಿ” ಹಾಡಿನ ಸಾಹಿತ್ಯ ಹಾಗೂ ಗಾಯನಕ್ಕೆ ಅಭಿಮಾನಿಗಳು ಫಿದಾ‌ .

ಪ್ರತಿಧ್ವನಿ by ಪ್ರತಿಧ್ವನಿ
September 15, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ, ಜನಪ್ರಿಯ ನಟ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಹಾಗೂ ಮಂಜುನಾಥ್ ಕಂದಕೂರ್ ನಿರ್ಮಾಣದ “ಬ್ರ್ಯಾಟ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಮೂಡಿಬರುತ್ತಿರುವ ಈ ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಎಲ್ಲರ ಗಮನ ಸೆಳೆದಿದೆ.

ADVERTISEMENT

ಪ್ರಸ್ತುತ ಈ ಚಿತ್ರದ ಮತ್ತೊಂದು ಮನಮೋಹಕ ಹಾಡು “ಗಂಗಿ ಗಂಗಿ” ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳ ಸಮ್ಮುಖದಲ್ಲಿ ಹಾಗೂ ಚಿತ್ರತಂಡದ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಉತ್ತರ ಕರ್ನಾಟಕದ ಪ್ರತಿಭೆ ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಹಾಡಿರುವ ಈ ಹಾಡನ್ನು ಬಾಳು ಬೆಳಗುಂದಿ ಅವರೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಡಾರ್ಲಿಂಗ್ ಕೃಷ್ಣ ಹಾಗೂ ಅನೈರಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಾಳು ಬೆಳಗುಂದಿ ಅವರ ಗಾಯನಕ್ಕೆ ಹಾಗೂ ಸಾಹಿತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ‌‌. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಕುರಿಗಾಹಿಯಾಗಿದ್ದ ನಾನು, ಅನೇಕ ಜನಪದ ಗೀತೆಗಳನ್ನು ರಚಿಸಿ ಹಾಡುತ್ತಿದ್ದೆ. ಆನಂತರ “ಸರಿಗಮಪ” ಸ್ಪರ್ಧಿಯಾದೆ. ಆ ಕಾರ್ಯಕ್ರಮದಲ್ಲಿ ಅರ್ಜುನ್ ಜನ್ಯ ಅವರು ನಿನ್ನಿಂದ ನನ್ನ ಸಿನಿಮಾವೊಂದರಲ್ಲಿ ಹಾಡಿಸುತ್ತೇನೆ ಅಂತ ಹೇಳಿದ್ದರು. ಈ ಚಿತ್ರದಲ್ಲಿ ಅವಕಾಶ ನೀಡಿದ್ದಾರೆ. ಅವರಿಗೆ, ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ಗಾಯಕ ಹಾಗೂ ಗೀತರಚನೆಕಾರ ಬಾಳು ಬೆಳಗುಂದಿ.

“ಬ್ರ್ಯಾಟ್” ಎಂದರೆ ತರ್ಲೆ ಹುಡುಗ ಹಾಗೂ ದಾರಿ ತಪ್ಪಿದ ಮಗ ಎನ್ನಬಹುದು. ನಮ್ಮ ಚಿತ್ರ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದರು, ಅಪ್ಪ – ಮಗನ ಸ್ಟೋರಿಯೂ ಹೌದು. ಒಟ್ಟಿನಲ್ಲಿ ಇಡೀ ಚಿತ್ರದಲ್ಲಿ ನೋಡುಗರಿಗೆ ಬೇಸರವಾಗದ ಹಾಗೆ ಭರಪೂರ ಮನೋರಂಜನೆಯಿದೆ ಎಂದು ಹೇಳಬಹುದು. ಇನ್ನೂ ಸಿದ್ ಶ್ರೀರಾಮ್ ಹಾಡಿರುವ “ನಾನೇ ನೀನಂತೆ” ಹಾಡಂತೂ ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನಪ್ರಿಯವಾಗಿದೆ. ಈಗ “ಗಂಗಿ ಗಂಗಿ” ಹಾಡು ಬಿಡುಗಡೆಯಾಗಿದೆ. ಈ ಹಾಡನ್ನು ಬಾಳು ಬೆಳಗುಂದಿ ಹಾಗೂ ಇಂದು ನಾಗರಾಜ್ ಅದ್ಭುತವಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತ ಕೂಡ ಅಷ್ಟೇ ಚೆನ್ನಾಗಿದೆ. ನನ್ನ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್ ನಲ್ಲಿ ಬಂದಿದ್ದ “ಕೌಸಲ್ಯ ಸುಪ್ರಜಾ ರಾಮ” ಎಲ್ಲರ ಮನ ಗೆದ್ದಿತ್ತು. “ಬ್ರ್ಯಾಟ್” ಚಿತ್ರ ಕೂಡ ನವೆಂಬರ್ 14 ರಂದು ಬಿಡುಗಡೆಯಾಗುತ್ತಿದ್ದು, ಎಲ್ಲರಿಗೂ ಪ್ರಿಯವಾಗಲಿದೆ ಎಂದರು ನಿರ್ದೇಶಕ ಶಶಾಂಕ್.

ನಾನು ನೃತ್ಯ ಮಾಡಿ ಮೂರುನಾಲ್ಕು ವರ್ಷಗಳೇ ಆಗಿತ್ತು. ಈ ಹಾಡಿಗೆ ಈ ರೀತಿ ನೃತ್ಯ ಮಾಡಿದ್ದೇನೆ ಅಂದರೆ ಅದಕ್ಕೆ ನಿರ್ದೇಶಕ ಶಶಾಂಕ್ ಅವರೆ ಕಾರಣ. ಈ ಚಿತ್ರದಲ್ಲಿ ನನ್ನ ಲುಕ್ ಕೂಡ ಹೊಸತಾಗಿದೆ‌ . ಈ ಎಲ್ಲಾ ಕ್ರೆಡಿಟ್ ನಿರ್ದೇಶಕರಿಗೆ ಸೇರಬೇಕು. ಇನ್ನೂ “ಗಂಗಿ ಗಂಗಿ” ಹಾಡು ಇಷ್ಟು ಅದ್ದೂರಿಯಾಗಿ ಮೂಡಿ ಬರಲು ನಿರ್ಮಾಪಕ ಮಂಜುನಾಥ್ ಕಂದಕೂರ್ ಅವರಿಗಿರುವ ಸಿನಿಮಾ ಪ್ರೀತಿ. ಇಡೀ ಸಿನಿಮಾ ಇಷ್ಟೇ ಅದ್ದೂರಿಯಾಗಿ ಮೂಡಿಬಂದಿದೆ. ಬಾಳು ಬೆಳಗುಂದಿ ಅವರ ಸಾಹಿತ್ಯ, ಗಾಯನ ಹಾಗೂ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆ ಸೊಗಸಾಗಿದೆ ಎಂದು ನಾಯಕ ಡಾರ್ಲಿಂಗ್ ಕೃಷ್ಣ ತಿಳಿಸಿದರು.

“ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಂತರ ನಾವು ನಿರ್ಮಿಸಿರುವ ಚಿತ್ರ “ಬ್ರ್ಯಾಟ್”. ಶಶಾಂಕ್ ಅವರ ಕಥೆ ಕೇಳಿ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಶಶಾಂಕ್ ಅವರ ಕಾಂಬಿನೇಶನ್ ನ ಮತ್ತೊಂದು ಸೂಪರ್ ಹಿಟ್ ಚಿತ್ರ ಇದಾಗಲಿದೆ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್.

ನಾನು ಕನ್ನಡದವಳು. ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ಈ ಚಿತ್ರದಲ್ಲಿ ನನ್ನದು ಮಧ್ಯಮವರ್ಗದ ಹುಡುಗಿ ಪಾತ್ರ. ಚಿತ್ರದಲ್ಲೂ ನನ್ನ ಪಾತ್ರದ ಹೆಸರು ಮನಿಶಾ. ಇಂದು ಬಿಡುಗಡೆಯಾಗಿರುವ “ಗಂಗಿ ಗಂಗಿ” ಹಾಡು ಬಹಳ ಚೆನ್ನಾಗಿದೆ ಎಂದು ನಾಯಕಿ ಮನಿಶಾ ಕಂದಕೂರ್ ಹೇಳಿದರು.

ಚಿತ್ರದಲ್ಲಿ ನಟಿಸಿರುವ ಡ್ಯಾಗನ್ ಮಂಜು ಅವರು ಸಹ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಕಿದ್ವಾಯ್ ಸಂಸ್ಥೆಯ ವೈದ್ಯ ರಾಮಚಂದ್ರ ಹಾಗೂ ಬದರಿನಾಥ್ ಮುಂತಾದವರು ಅತಿಥಿಗಳಾಗಿ ಆಗಮಿಸಿದ್ದರು. ಆನಂದ್ ಆಡಿಯೋ ಮೂಲಕ “ಬ್ರ್ಯಾಟ್” ಚಿತ್ರದ ಹಾಡುಗಳು ಬಿಡುಗಡೆಯಾಗಿದೆ.

Tags: 1st Rank RajuArjun JanyaBalu BelagundiBratDARLING KRISHNAGangi Gangi SongKannada movieKannada SongManisha KandakurManjunath KandakursandalwoodShashank
Previous Post

ರೆಬಲ್ ಸ್ಟಾರ್ ‌ಅಂಬರೀಷ್ ಗೂ ಕರ್ನಾಟಕ ರತ್ನ ನೀಡಿ – ಡಿಕೆಶಿ ಭೇಟಿಯಾಗಿ ನಟಿ ತಾರಾ ಮನವಿ 

Next Post

Supreme Court: ವಕ್ಫ್ ಕಾಯ್ದೆ ರದ್ದು ಮಾಡಲು ಸಾಧ್ಯವಿಲ್ಲ – ಕೆಲವು ನಿಯಮಗಳ ಕಡಿವಾಣ ಮಾತ್ರ ಸಾಧ್ಯ..!!

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

May 28, 2026
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
Next Post
Supreme Court: ವಕ್ಫ್ ಕಾಯ್ದೆ ರದ್ದು ಮಾಡಲು ಸಾಧ್ಯವಿಲ್ಲ – ಕೆಲವು ನಿಯಮಗಳ ಕಡಿವಾಣ ಮಾತ್ರ ಸಾಧ್ಯ..!!

Supreme Court: ವಕ್ಫ್ ಕಾಯ್ದೆ ರದ್ದು ಮಾಡಲು ಸಾಧ್ಯವಿಲ್ಲ - ಕೆಲವು ನಿಯಮಗಳ ಕಡಿವಾಣ ಮಾತ್ರ ಸಾಧ್ಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada