![](https://pratidhvani.com/wp-content/uploads/2024/06/WhatsApp-Image-2024-06-29-at-15.21.54-1-1024x683.jpeg)
ಕೃಷಿಕ ಸಮಾಜ ಸರ್ಕಾರ ಮತ್ತು ರೈತರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುತ್ತಿರುವುದು ಅಭಿನಂದನೀಯ ಏಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಬೀದರ್ ನಲ್ಲಿಂದು ಜಿಲ್ಲಾ ಕೃಷಿಕ ಸಮಾಜದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು ರೈತರ ಬೌದ್ದಿಕ ಸಾಮರ್ಥ್ಯ ಅಭಿವೃದ್ಧಿಗೆ ವಿವಿಧ ಚಟುವಟಿಕೆ ನಡೆಸುತ್ತಿದ್ದು ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ಮಾಡಲಿ ಎಂದು ಹಾರೈಸಿದರು. ಕೃಷಿಕ ಸಮಾಜ ರಾಜ್ಯದಲ್ಲಿ ಎಲ್ಲಾ ಜಿಲ್ಲೆ, ತಾಲ್ಲೂಕುಗಳಲ್ಲಿ ಉತ್ತಮ ಕೆಲಸ ಮಾಡುತ್ತಿದೆ .ರಾಜ್ಯ ಸರ್ಕಾರವೂ ಇದಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದರು.
ರಾಜ್ಯದಲ್ಲಿ ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ನಿರ್ಮಾಣಕ್ಕೆ 5.54 ಕೋಟಿ ರೂ,ತಾಲ್ಲೂಕು ಕಟ್ಟಡಗಳಿಗೆ 8.14 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.
![](https://pratidhvani.com/wp-content/uploads/2024/06/WhatsApp-Image-2024-06-29-at-15.21.54-2-1024x683.jpeg)
ಜಗತ್ತಿನ ಆಹಾರ ಕೊರತೆ ನೀಗಿಸಲು ರೈತರು ದುಡಿಯುತ್ತಿದ್ದು ಅವರು ಬೆಳದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗಬೇಕು ,ವೈಜ್ಞಾನಿಕ ಬಲೆ ನಿಗಧಿಯಾಗಬೇಕು ಎಂದರು.
ರೈತರ ಹಿತಕ್ಕಾಗಿ 5 ಲಕ್ಷದ ವರಗೆ ಬಡ್ಡಿ ರಹಿತ ಸಾಲ,ಹಾಲಿಗೆ ಪ್ರತಿ ಲೀ 5 ರೂ ಸಬ್ಸಿಡಿ ನೀಡಲಾಗುತ್ತಿದೆ.ನಾವು ನೀಡಿದ್ದ ಗ್ಯಾರಂಟಿ ಯೋಜನೆಗಳೆಲ್ಲವನ್ನು 1 ವರ್ಷದೊಳಗೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ ಎಂದು ಚಲುವರಾಯಸ್ವಾಮಿ ಹೇಳಿದರು.
![](https://pratidhvani.com/wp-content/uploads/2024/06/WhatsApp-Image-2024-06-29-at-15.21.55-1024x825.jpeg)
ಈ ವರ್ಷವೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೃಷಿ ಭಾಗ್ಯ ಬೀದರ್ ಸೇರಿದಂತೆ ರಾಜ್ಯಾದ್ಯಂತ ವಿಸ್ತಾರಣೆಯಾಗಲಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಬಿತ್ತನೆ ಬೀಜ ರಸಗೊಬ್ಬರ ಕ್ಕೆ ಯಾವುದೇ ಕೊರತೆ ಇಲ್ಲದಂತೆ ನಿಭಾಯಿಸಲಾಗುತ್ತಿದೆ ಎಂದರು
ಬೀದರ್ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ,ಜೈವಿಕ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ್ ಖಂಡ್ರೆ,ಪೌರಾಡಳಿತ ಮತ್ತು ಹಜ್ ಖಾತೆ ಸಚಿವರಾದ ರಹೀಮ್ ಖಾನ್ ಶಾಸಕರಾದ ಡಾ.ಶೈಲೇಂದ್ರ ಕೆ ಬೆಲ್ದಾಳೆ ಅವರು ಸಮಾರಂಭದಲ್ಲಿ ಮಾತನಾಡಿದರು
ಕೃಷಿಕ ಸಮಾಜದ ರಾಜ್ಯಾಧ್ಯಕ್ಷರಾದ .ಸಿ ಪಾಪಣ್ಣ ಅಧಿಕಾರಿ ಕಾರ್ಯದರ್ಶಿ ಜಿ.ಎಸ್ ಜಯಸ್ವಾಮಿ ಮತ್ತಿತರರು ಹಾಜರಿದ್ದರು..
![](https://pratidhvani.com/wp-content/uploads/2024/06/WhatsApp-Image-2024-06-29-at-15.21.54-957x1024.jpeg)