• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ; ಗಡಿಗಳಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

Any Mind by Any Mind
June 10, 2021
in ದೇಶ
0
ತೀವ್ರಗೊಳ್ಳುತ್ತಿರುವ ರೈತರ ಪ್ರತಿಭಟನೆ; ಗಡಿಗಳಲ್ಲಿ ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು
Share on WhatsAppShare on FacebookShare on Telegram

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ, ಪೊಲೀಸ್ ಭದ್ರತೆಯನ್ನು ಕೂಡಾ ಹೆಚ್ಚಿಸಲಾಗಿದೆ. ಹರಿಯಾಣ ಮತ್ತು ಉತ್ತರ ಪ್ರದೇಶದಿಂದ ದೆಹಲಿಯ ಗಡಿಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ ಗುರುವಾರದಮದು ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.
50,000ಕ್ಕೂ ಹೆಚ್ಚು ರೈತರು ದೆಹಲಿಯನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ ಎಂಬ ಗುಪ್ತಚರ ದಳದ ಮಾಹಿತಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ. ಪಾನಿಪತ್ ಟೋಲ್ ಪ್ಲಾಜಾದಿಂದ ಸಿಂಘು ಗಡಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿವೆ. ಆದರೆ, ಗುಪ್ತಚರ ದಳವು ನೀಡಿದ ಮಾಹಿತಿಯ ಪ್ರಕಾರ ಈ ರೈತರು ಹಿಡಿದಿರುವ ಪೋಸ್ಟರ್’ಗಳು ದೆಹಲಿಯನ್ನು ಪ್ರವೇಶಿಸಲು ಪ್ರಯತ್ನಿಸಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿವೆ, ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT


“ದಿನದ ಇಪ್ಪತ್ತನಾಲ್ಕು ಗಂಟೆಯೂ, ಸಿಂಘು, ಗಾಝೀಪುರ್, ಟಿಕ್ರಿ ಗಡಿಗಳಲ್ಲಿ ದೆಹಲಿ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಎಚ್ಚರಿಕಾ ಕ್ರಮವಾಗಿ ಈಗ ಪೊಲೀಸ್ ಪಡೆಯ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ದೆಹಲಿಯ ಆಂತರಿಕ ಹಾಗೂ ಇತರೆಡೆಗಳಲ್ಲಿನ ಪೊಲಿಸರನ್ನು ದೆಹಲಿಯ ಗಡಿ ಭಾಗಗಳಿಗೆ ರವಾನಿಸಲಾಗಿದೆ,” ಎಂದು ಅವರು ಹೇಳಿದ್ದಾರೆ.

ಇಂದು ದೇಶಾದ್ಯಂತ ಬಿಜೆಪಿ ಸಂಸದ, ಶಾಸಕರ ಮನೆ ಎದುರು ರೈತರಿಂದ ಪ್ರತಿಭಟನೆ

ಪೊಲೀಸರ ಈ ವಾದವನ್ನು ಅಲ್ಲಗೆಳೆದಿರುವ ರೈತ ಮುಖಂಡರು, ಬಲವಂತವಾಗಿ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುವ ಇರಾದೆ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳ ವಿರುದ್ದ ರೈತರು ಕಳೆದ ಆರು ತಿಂಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯಗಳಿಗೆ ಉತ್ತೇಜನ ಮತ್ತು ಸೌಕರ್ಯ ಕಲ್ಪಿಸಿ ಕೊಡುವ ಕಾನೂನು, ರೈತರಿಗೆ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾನೂನು, ಅಗತ್ಯ ಸರಕುಗಳ (ತಿದ್ದುಪಡಿ) ಕಾನೂನುಗಳನ್ನು ವಾಪಾಸ್ ಪಡೆಯುವವರೆಗೂ ನಮ್ಮ ಹೋರಾಟ ನಿರಂತರವಾಗಿ ಸಾಗಲಿದೆ ಎಂದು ರೈತರು ಖಡಾಖಂಡಿತವಾಗಿ ಹೇಳಿದ್ದಾರೆ.

Previous Post

ಮೈಸೂರು ಮಹಾನಗರ ಪಾಲಿಕೆಗೆ ಈ ಬಾರಿ ಕಾಂಗ್ರೆಸ್‌ ಪಕ್ಷದ ಮೇಯರ್‌? ಜೆಡಿಎಸ್‌ ಬಳಿ ಲಗಾಮು?

Next Post

ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

ಇಂಧನ ಬೆಲೆಯೇಕೆಯಿಂದಾಗಿ ತರಕಾರಿಗಳ ಬೆಲೆ ಹೆಚ್ಚಳ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada