• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನಾಳೆ ರೈತರಿಂದ ದೆಹಲಿ ಚಲೋ: ದೆಹಲಿ, ಹರಿಯಾಣ ಸುತ್ತ ಪೊಲೀಸ್ ಸರ್ಪಗಾವಲು

Any Mind by Any Mind
February 12, 2024
in ದೇಶ
0
ನಾಳೆ ರೈತರಿಂದ ದೆಹಲಿ ಚಲೋ: ದೆಹಲಿ, ಹರಿಯಾಣ ಸುತ್ತ ಪೊಲೀಸ್ ಸರ್ಪಗಾವಲು
Share on WhatsAppShare on FacebookShare on Telegram

ನವದೆಹಲಿ: ರೈತ ಸಂಘಟನೆಗಳು(Farmers Organisations) ಫೆಬ್ರವರಿ 13ರಂದು ಆಯೋಜಿಸಿರುವ ‘ದೆಹಲಿ ಚಲೋ’(Delhi Chalo) ಪ್ರತಿಭಟನೆಯಲ್ಲಿ ಭಾಗವಹಿಸುವ ರಾಜ್ಯದ ರೈತರನ್ನು ತಡೆಯಲು ಹರಿಯಾಣ(Haryana) ಪೊಲೀಸರು ಪಂಜಾಬ್‌ನ ಗಡಿಗಳಿಗೆ ಬೇಲಿ ಹಾಕುತ್ತಿದ್ದು, ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಿರಿಯ INLD ನಾಯಕ ಮತ್ತು ಶಾಸಕ ಅಭಯ್ ಸಿಂಗ್ ಚೌಟಾಲ(Abhay Singh Chautala) ತಿಳಿಸಿದ್ದಾರೆ.
ವಿಡಿಯೋ ಕ್ಲಿಪ್ ಒಂದನ್ನು ‘ಎಕ್ಸ್‌’ ಸಾಮಾಜಿಕ ಜಾಲತಾಣಕ್ಕೆ ಪೋಸ್ಟ್ ಮಾಡಿರುವ ಐಎನ್‌ಎಲ್‌ಡಿ ನಾಯಕ ಮತ್ತು ಶಾಸಕ ಅಭಯ್ ಸಿಂಗ್ ಚೌಟಾಲ, ತುರ್ತುಪರಿಸ್ಥಿತಿ ನಿರ್ಮಾಣವಾಗಿದೆ. ಹರಿಯಾಣದ ಸರ್ವಾಧಿಕಾರಿ ಮನೋಭಾವದ ಖಟ್ಟರ್ ಸರ್ಕಾರ ಜನರ ಪಾಸ್‌ಪೋರ್ಟ್‌ಗಳನ್ನು ಹಿಂತೆಗೆದುಕೊಳ್ಳಲಾಗುವುದು ಎಂದು ಗ್ರಾಮಗಳಲ್ಲಿ ಘೋಷಣೆ ಮಾಡುತ್ತಿದ್ದಾರೆ. ರೈತ ಹೋರಾಟಕ್ಕೆ ಬೆಂಬಲಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

अघोषित आपातकाल लागू है! हरियाणा की तानाशाह खट्टर सरकार गांव गांव ऐलान कर रही है कि जो आंदोलन में किसानों का साथ देगा उनके पासपोर्ट रद्द कर दिए जाएंगे तथा उनके खिलाफ कड़ी कार्रवाई की जाएगी। #FarmersProtest2024 pic.twitter.com/rq0eJIldZI

— Abhay Singh Chautala (@AbhaySChautala) February 11, 2024

ವಿಡಿಯೋದಲ್ಲಿ ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸುವ ರೈತರಿಗೆ ಬೆಂಬಲ ನೀಡುವವರ ಪಾಸ್‌ಪೋರ್ಟ್‌ಗಳನ್ನು ರದ್ದುಮಾಡುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ಹಾಕುತ್ತಿರುವ ದೃಶ್ಯಗಳಿವೆ. ರೈತ ಹೊರಾಟದಲ್ಲಿ ಭಾಗಿಯಾದ ಗ್ರಾಮಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೋರಾಟದಲ್ಲಿ ಭಾಗಿಯಾದವರ ಜೆಸಿಬಿ ಅಥವಾ ಟ್ರ್ಯಾಕ್ಟರ್ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಮತ್ತು ಕಾನೂನು ಕ್ರಮ ಜರುಗಿಸಿದಾಗ ಪಾಸ್‌ಪೋರ್ಟ್ ರದ್ದಾಗುತ್ತದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ ಎನ್ನಲಾಗಿದೆ.
ಒಪ್ಪಿಗೆ ಇಲ್ಲದೆ ರೈತ ಹೋರಾಟದಲ್ಲಿ ಭಾಗವಹಿಸಿದಲ್ಲಿ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದಲ್ಲಿ ಪಾಸ್‌ಪೋರ್ಟ್‌ಗಳನ್ನು ತಡೆಹಿಡಿಯಲಾಗುವುದು ಎಂದು ಹರಿಯಾಣ ಸರ್ಕಾರ ರೈತ ಸಂಘಟನೆಗಳಿಗೆ ನೊಟೀಸ್ ಕಳುಹಿಸುತ್ತಿದ್ದರೆ, ಮತ್ತೊಂದೆಡೆ, ಪಂಜಾಬ್ ಮತ್ತು ಭಾರತದ ನಡುವೆ ಗಡಿಗಳನ್ನು ಸೃಷ್ಟಿಸದೆ ರೈತರ ಜೊತೆಗೆ ಮಾತುಕತೆ ನಡೆಸುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗಳು ಮತ್ತು ಪಂಜಾಬ್ ಗಡಿಭಾಗದ ಇತರ ರಸ್ತೆಗಳಲ್ಲಿ ಭಾರೀ ಬೇಲಿಗಳನ್ನು ನಿರ್ಮಿಸಲು ಹರಿಯಾಣ ಸರ್ಕಾರ ಪ್ರಯತ್ನಿಸುತ್ತಿರುವುದಕ್ಕೆ ಪ್ರತಿಕ್ರಿಯೆಯಾಗಿ ಪಂಜಾಬ್ ಮುಖ್ಯಮಂತ್ರಿ ಸಂಧಾನ ಪ್ರಯತ್ನ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಿವಿಮಾತು ಹೇಳಿದ್ದಾರೆ.
ಪಂಜಾಬ್ ಮತ್ತು ಭಾರತದ ಗಡಿಗಳಿಗೆ ಬೇಲಿ ಹಾಕದಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಿಕೊಂಡಿರುವ ಭಗವಂತ್ ಮಾನ್‌, ಹರಿಯಾಣದಲ್ಲಿ ಏನಾಗುತ್ತಿದೆ? ಪಂಜಾಬ್ ಗಡಿಗಳಿಗೆ ಅವರು ಬೇಲಿ ಹಾಕುತ್ತಿದ್ದಾರೆ. ರೈತರೊಂದಿಗೆ ಮಾತುಕತೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ. ಭಾರತ-ಪಂಜಾಬ್ ಗಡಿ ರಚಿಸದಂತೆ ಬೇಡಿಕೊಳ್ಳುತ್ತೇನೆ. ನೀವು ಗಡಿ ಹಾಕುತ್ತಿದ್ದಿರಾ? ಪಾಕಿಸ್ತಾನದ ಗಡಿಯಲ್ಲೂ ಇಂತಹುದೇ ಬೇಲಿಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ.

ಫೆಬ್ರವರಿ 13ರಂದು ಪಂಜಾಬ್ ರೈತರು ಹರಿಯಾಣದ ಮೂಲಕ ದೆಹಲಿಗೆ ತೆರಳದಂತೆ ತಡೆಯಲು ಗಡಿಭಾಗದಲ್ಲಿ ಬೇಲಿಗಳನ್ನು ನಿರ್ಮಿಸಲಾಗಿದೆ ಎಂದು ಹರಿಯಾಣ ಸರ್ಕಾರ ಹೇಳಿದೆ. ಗೋಧಿ ಅಥವಾ ಅಕ್ಕಿಗಾಗಿ ನೀವು ಎಲ್ಲಿಗೆ ಹೋಗುತ್ತೀರಿ? ನಿಮಗೆ ಆಹಾರ ಮತ್ತು ಹೊಟ್ಟೆಗೆ ಅಗತ್ಯವಿರುವ ವಸ್ತುಗಳನ್ನು ನಾವೇ ಒದಗಿಸಬೇಕು. ನಮ್ಮನ್ನೂ ನಿಮ್ಮೊಳಗಿನ ಒಬ್ಬರಂತೆ ಕಾಣಿರಿ. ಸ್ವಾತಂತ್ರ್ಯ ಹೋರಾಟಕ್ಕೆ ನಾವೂ ಸಾಕಷ್ಟು ಕೊಡುಗೆ ನೀಡಿದ್ದೇವೆ ಎಂದು ಮಾನ್ ಹೇಳಿದ್ದಾರೆ. ನಮ್ಮ ಸೈನಿಕರು ಗಡಿಭಾಗದಲ್ಲಿ ದೇಶಕ್ಕಾಗಿ ಸಾಯಲು ಸಿದ್ಧವಾಗಿದ್ದಾರೆ. ಆದರೆ ಇದೀಗ ದ್ವೇಷ ಎಷ್ಟರ ಮಟ್ಟಿಗೆ ಬೆಳೆದಿದೆ ಎಂದರೆ ರಾಷ್ಟ್ರಗೀತೆಯಿಂದಲೂ ಪಂಜಾಬ್‌ ಹೆಸರನ್ನು ತೆಗೆಯಲು ಬಯಸಿದ್ದಾರೆ. ಅದಕ್ಕಾಗಿ ಮಸೂದೆಯ ಅಗತ್ಯವಿದೆ ಎಂದು ಅವರು ಹೇಳುವ ದೃಶ್ಯಗಳಿವೆ.

#FarmersProtest #Highalert #DelhiChalo #Protest #India

Previous Post

ಈ ವರ್ಷ ಭಾರೀ ಮಳೆಯ ಮುನ್ಸೂಚನೆ

Next Post

ಕನ್ನಡದಲ್ಲೇ CAPF ಪರೀಕ್ಷೆಗೆ ಅವಕಾಶ: ಕೇಂದ್ರದ ನಿರ್ಧಾರ ಸ್ವಾಗತಿಸಿದ ವಿಜಯೇಂದ್ರ

Related Posts

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
0

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ರೈತ ನೀತಿ (Labour & farmer policy) ವಿರೋಧಿಸಿ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಇಂದು ದೇಶಾದ್ಯಂತ ಟ್ರೇಡ್...

Read moreDetails

ಗೋಲ್ಡನ್ ಸ್ಟಾರ್ ಗಣೇಶ್ ಅವರಿಂದ ಅನಾವರಣವಾಯಿತು “ನಿದ್ರಾದೇವಿ Next Door” ಚಿತ್ರದ “ನೀ ನನ್ನ” ಎಂಬ ರೊಮ್ಯಾಂಟಿಕ್ ಸಾಂಗ್.

July 8, 2025

Narendra Modi: ಭಾರತದಲ್ಲಿ ಪ್ರೆಸ್‌ ಸೆನ್ಸಾರ್‌ಶಿಪ್‌ ಖಾತೆಗಳನ್ನು ನಿಷೇಧಿಸಲು ಆದೇಶ ಹೊರಡಿಸಿಲ್ಲ: ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ.

July 8, 2025

M.B Patil: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸೆಪ್ಟೆಂಬರಿನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ..!!

July 8, 2025

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

July 8, 2025
Next Post
ಕನ್ನಡದಲ್ಲೇ CAPF ಪರೀಕ್ಷೆಗೆ ಅವಕಾಶ: ಕೇಂದ್ರದ ನಿರ್ಧಾರ ಸ್ವಾಗತಿಸಿದ ವಿಜಯೇಂದ್ರ

ಕನ್ನಡದಲ್ಲೇ CAPF ಪರೀಕ್ಷೆಗೆ ಅವಕಾಶ: ಕೇಂದ್ರದ ನಿರ್ಧಾರ ಸ್ವಾಗತಿಸಿದ ವಿಜಯೇಂದ್ರ

Please login to join discussion

Recent News

Top Story

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

by ಪ್ರತಿಧ್ವನಿ
July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 
Top Story

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

by Chetan
July 9, 2025
ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 
Top Story

ಇಂದು ದೇಶಾದ್ಯಂತ ಭಾರತ್ ಬಂದ್ ಗೆ ಕರೆ – ರಾಜ್ಯದಲ್ಲಿ ಹೇಗಿರಲಿದೆ ಬಂದ್ ಬಿಸಿ..? 

by Chetan
July 9, 2025
ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 
Top Story

ಸಿಎಂ ಚೇಂಜ್ ಕೂಗಿನಿಂದ ತೀವ್ರ ಬೇಸರಗೊಂಡ ಸಿದ್ದು..? ರಾಹುಲ್ ಗಾಂಧಿ ಮುಂದೆ ಬೇಸರ ಹೊರಹಾಕಲಿದ್ಯ ಟಗರು..?! 

by Chetan
July 9, 2025
ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 
Top Story

ಕಾಂಗ್ರೆಸ್ ನಲ್ಲಿ ಜೋರಾಯ್ತು ಸಿಎಂ ಬದಲಾವಣೆ ಕೂಗು – ದೆಹಲಿಯತ್ತ ಹೊರಟೇಬಿಟ್ಟ ಸಿಎಂ ಸಿದ್ದರಾಮಯ್ಯ 

by Chetan
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಾಧ್ಯಮಗೋಷ್ಠಿ

July 9, 2025
ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

ಶ್ರೀರಾಮುಲುಗೆ ಜನಾರ್ದನ ರೆಡ್ಡಿ ಸಖತ್ ಕೌಂಟರ್ – ಬಳ್ಳಾರಿಯಲ್ಲಿ ಮತ್ತೆ ಶುರು ರೆಡ್ಡಿ ರಾಮುಲು ಕಾಳಗ ! 

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada