• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ

Any Mind by Any Mind
March 9, 2024
in Top Story, ಕರ್ನಾಟಕ
0
ಸೌರಶಕ್ತಿ ಬಳಸಿ ರೈತರು ಸ್ವಾವಲಂಬಿಗಳಾಗಬೇಕು: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು (Bengaluru): ರಾಜ್ಯ ಸರ್ಕಾರ ಸಮಗ್ರ ಕೃಷಿಗೆ ಒತ್ತು ನೀಡುತ್ತದೆ. ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ ಸೇರಿದಂತೆ ಬಹು ಕೃಷಿ ಪದ್ಧತಿ ರೂಢಿಸಿಕೊಂಡಾಗ ಮಾತ್ರ ರೈತರ ಆದಾಯ ಹೆಚ್ಚಲು ಸಾಧ್ಯ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ADVERTISEMENT

ಜಿಕೆವಿಕೆ ಆವರಣದಲ್ಲಿ ಇಂಧನ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ವನ್ನು  ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅತ್ಯಂತ ಸಂತೋಷದಿಂದ ಮೇಳ ಉದ್ಘಾಟಿಸಿದ್ದೇನೆ. ಇಂಧನ ಸಚಿವ ಕೆ.ಜೆ ಜಾರ್ಜ್ (K. J. George) ನೇತೃತ್ವದಲ್ಲಿ ರೈತ ಸೌರ ಶಕ್ತಿ ಮೇಳ ಏರ್ಪಾಡಾಗಿದೆ. ಸೌರ ಶಕ್ತಿ ಕ್ಷೇತ್ರದಲ್ಲಿ ಆಗಿರುವಂಥ ಬೆಳವಣಿಗೆ ರೈತರನ್ನು ತಲುಪಿ, ಕೃಷಿಯಲ್ಲಿ ಬಳಸಿಕೊಂಡಾಗ ಮಾತ್ರ ಅದು ಸಾರ್ಥಕವಾಗುತ್ತದೆ ಎಂದರು.

“ಕೃಷಿ ಕ್ಷೇತ್ರದಲ್ಲಿ ಹೆಚ್ಚೆಚ್ಚು ಸಂಶೋಧನೆಗಳಾಗಿ, ಅದು ರೈತರಿಗೆ ತಲುಪಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಎಲ್ಲ ಪ್ರದೇಶಗಳಿಗೆ ನೀರಾವರಿ ಒದಗಿಸಲು ಸಾಧ್ಯವಾಗದು. ರಾಜಸ್ಥಾನ ಹೊರತುಪಡಿಸಿದರೆ ಹೆಚ್ಚು ಒಣ ಭೂಮಿ ಇರುವುದು ಕರ್ನಾಟಕದಲ್ಲಿ. ರೈತರು ಇಂಥ ಭೂಮಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಿಕೊಂಡು ಕೃಷಿ ಮಾಡುವಂತಾಗಬೇಕು. ಹೈನುಗಾರಿಕೆ, ಮೀನುಗಾರಿಕೆ ತೋಟಗಾರಿಕೆ ಸೇರಿದಂತೆ ಬಹು ಕೃಷಿ ಪದ್ಧತಿ ರೂಢಿಸಿಕೊಂಡಾಗ ಮಾತ್ರ ರೈತರ ಆದಾಯ ಹೆಚ್ಚಲು ಸಾಧ್ಯ. ಅದೇ ರೀತಿ ಕೃಷಿ ಕ್ಷೇತ್ರದಲ್ಲಿ ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಬೇಕು,”ಎಂದು ಹೇಳಿದು.

“ಯುವಜನರು ಗ್ರಾಮಗಳನ್ನು ತೊರೆದು ನಗರಗಳನ್ನು ಸೇರುತ್ತಿದ್ದಾರೆ. ಕೃಷಿಯಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ಅದನ್ನು ರೈತರು ಅಳವಡಿಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ. ನೀರಾವರಿಗೆ ನವೀಕರೀಸಬಹುದಾದ ಇಂಧನವನ್ನೂ ರೈತರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಕುಸುಮ್ ಬಿ

ಸಾಂಪ್ರದಾಯಿಕ ಗ್ರಿಡ್-ಆಧಾರಿತ ವಿದ್ಯುತ್‌ ಅವಲಂಬನೆಯನ್ನು ತಗ್ಗಿಸಲು, ರೈತರಿಗೆ  ಸೌರ ಚಾಲಿತ ಪಂಪ್‌ಸೆಟ್‌ಗಳ ಬಳಕೆಗೆ ಒತ್ತು ನೀಡಲು ಸರ್ಕಾರ ರೈತರಿಗೆ ಸಬ್ಸಿಡಿ ನೀಡುತ್ತದೆ. ಕುಸುಮ್‌ ಬಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 7.5 ಎಚ್.ಪಿ. ಸಾಮರ್ಥ್ಯದ ಸೌರ ಪಂಪ್ ಸೆಟ್‍ಗೆ ಶೇಕಡ 30 ಕೇಂದ್ರ ಸರ್ಕಾರದಿಂದ ಸಹಾಯಧನ ಒದಗಿಸುತ್ತದೆ. ರಾಜ್ಯದಿಂದ  ನೀಡುತ್ತಿದ್ದ ಸಬ್ಸಿಡಿಯನ್ನು ರಾಜ್ಯ ಸರ್ಕಾರ  ಶೇ.50ಕ್ಕೆ ಏರಿಸಿದೆ. ಅಷ್ಟೇ ಅಲ್ಲ, ಯೋಜನೆಯಡಿ ಪಂಪ್, ಮೀಟರ್, ಪೈಪ್‌ಗಳನ್ನು ಒದಗಿಸುತ್ತಿದೆ.

ಸೌರ ಪಂಪ್‌ಸೆಟ್‌ಗಳ ಸ್ಥಾಪನೆ ಸುಲಭವಾಗಿದ್ದು, ದೀರ್ಘಕಾಲ ಬಾಳಿಕೆ ಬರುವ ಕಾರಣದಿಂದ ಗ್ರಾಮೀಣ ಪ್ರದೇಶಗಳಲ್ಲೂ  ಸೌರ ತಂತ್ರಜ್ಞಾನ ಹೆಚ್ಚು ಜನಪ್ರಿವಾಗುತ್ತಿದೆ. ಕುಸುಮ್‌ ಕಾಂಪೋನೆಂಟ್‌ – ಬಿ ಯೋಜನೆಯಡಿ ಸೌರ ಪಂಪ್‌ ಸೆಟ್‌ಗಳನ್ನು ಅಳವಡಿಸುವ ಕಾರ್ಯಕ್ರಮವನ್ನು ಮುಂದುವರಿಸಲಾಗಿದ್ದು, ರಾಜ್ಯದಲ್ಲಿ ಈವರೆಗೆ  ಸುಮಾರು 7000 ಸೌರ ಪಂಪ್‌ ಸೆಟ್‌ಗಳನ್ನು ಅಳವಡಿಸಲಾಗಿದೆ.

ಕುಸುಮ್‌ ಸಿ

ಫೀಡರ್ ಮಟ್ಟದ ಸೋಲಾರೈಸೇಶನ್ ಯೋಜನೆಯಾದ ‘ಕುಸುಮ್-ಸಿ’ ಮೂಲಕ, ನೀರಾವರಿ ಪಂಪ್ ಸೆಟ್‌ಗಳಿಗೆ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯಡಿ ರೆಸ್ಕೋ ಡೆವಲಪರ್‌ಗಳ ಮೂಲಕ 1302 ಮೆ.ವ್ಯಾ. ವಿಕೇಂದ್ರೀಕೃತ ಸೌರ ವಿದ್ಯುತ್ ಸ್ಥಾವರಗಳನ್ನು 248 ಉಪಕೇಂದ್ರಗಳಿಗೆ ಸಂಪರ್ಕಿಸುವ ಮೂಲಕ 806 ಕೃಷಿ ಫೀಡರ್ ಗಳನ್ನೊಳಗೊಂಡ 3,37,331 ಕೃಷಿ ಪಂಪ್ ಸೆಟ್‌ಗಳಿಗೆ ಹಗಲಿನಲ್ಲಿ ವಿದ್ಯುತ್ ಪೂರೈಸುತ್ತದೆ. ಎಂಎನ್ಆರ್‌ಇಯು ಪ್ರತಿ ಮೆ.ವ್ಯಾ.ಗೆ 1.05 ಕೋಟಿ ರೂ. ಅನುದಾನ ನೀಡುತ್ತಿದೆ.

ಬೆಸ್ಕಾಂ ಮತ್ತು ಹೆಸ್ಕಾಂ ಗಳಲ್ಲಿ 753.18 ಮೆ.ವ್ಯಾ.ಗೆ ಬಿಡ್‌ಗಳನ್ನು ಸ್ವೀಕರಿಸಲಾಗಿದ್ದು, 107 ಉಪಕೇಂದ್ರಗಳ 1,80,430 ಕೃಷಿ ಪಂಪ್ ಸೆಟ್‌ಗಳು ಮತ್ತು 463 ಕೃಷಿ ಫೀಡರ್‌ಗಳನ್ನು ಒಳಗೊಂಡಿವೆ. 12 ಸೋಲಾರ್ ಪವರ್ ಜನರೇಟರ್‌ಗಳಿಗೆ ಕಾರ್ಯಾದೇಶವನ್ನು ನೀಡಲಾಗಿದ್ದು, ಈ ಸೌರ ವಿದ್ಯುತ್ ಸ್ಥಾವರಗಳನ್ನು ಮಾರ್ಚ್-2025 ರೊಳಗೆ ಗ್ರಿಡ್‌ಗೆ ಸಂಪರ್ಕಿಸಲಾಗುತ್ತದೆ.

ಮೇಳದ ಆಕರ್ಷಣೆ:

• ರಾಜ್ಯದ ನಾನಾ ಭಾಗಗಳಿಂದ ಬರುವ ರೈತರಿಗೆ ಸೌರ ಪಂಪ್‌ಸೆಟ್‌ಗಳ ಬಗ್ಗೆ ಮಾಹಿತಿ ನೀಡಲು ಮೇಳದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸೌರ ವಿದ್ಯುತ್‌ ಉತ್ಪನ್ನಗಳ ಮಳಿಗೆಗಳಿದ್ದವು.

• ಸೌರ ಪಂಪ್‌ಸೆಟ್‌ಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ನೇರವಾಗಿ ನೋಡಲು ಪ್ರಾತ್ಯಕ್ಷಿಕೆ ನೀಡಲಾಯಿತು.

• ಸೋಲಾರ್‌ ಪಂಪ್‌ಸೆಟ್‌ ಅಳವಡಿಕೊಳ್ಳುವ ರೈತರಿಗಾಗಿಯೇ ಆನ್‌ಲೈನ್‌ ಪೋರ್ಟಲ್‌  ವಿನ್ಯಾಸಗೊಳಿಸಲಾಗಿದೆ.ಈ  ಮೂಲಕ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

• ರೈತರಿಗಾಗಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸೌರ ಪಂಪ್‌ ಸೆಟ್‌ಗಳ ಉತ್ಪಾದಕರು, ಮಾರಾಟಗಾರರು,  ಬ್ಯಾಂಕ್‌ ಅಧಿಕಾರಿಗಳು,  ಕೃಷಿ ಹಾಗೂ ಇಂಧನ ಇಲಾಖೆಯ ಅಧಿಕಾರಿಗಳು  ರೈತರಿಗೆ ಮಾಹಿತಿ ನೀಡಿದರು.

#karnataka #Bengaluru #siddaramaiah #gkvk #FarmerSolarFair

Previous Post

ಸೌರಶಕ್ತಿ ಕ್ಷೇತ್ರದ ಆವಿಷ್ಕಾರಗಳು, ತಂತ್ರಜ್ಞಾನಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಸಿದ್ದರಾಮಯ್ಯ

Next Post

ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ – ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !

Related Posts

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ
Top Story

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

by ಪ್ರತಿಧ್ವನಿ
May 2, 2026
0

ರಾಜ್ಯ ರಾಜಧಾನಿ ಬೆಂಗಳೂರು ನಗರದ ಸಂಚಾರ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಎದುರಾಗಿದೆ. ನಗರದ ಪ್ರಮುಖ ಮಾರ್ಗಗಳಲ್ಲಿ ಒಂದಾದ ಪೀಣ್ಯ ಫ್ಲೈಓವರ್ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು,...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
Next Post
ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ – ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !

ಚುನಾವಣಾ ಆಯುಕ್ತರ ಸ್ಥಾನಕ್ಕೆ ರಾಜೀನಾಮೆ ನೀಡಿದ ಅರುಣ್ ಗೋಯೆಲ್ - ರಾಷ್ಟ್ರ ರಾಜಕಾರಣದಲ್ಲಿ ಸಂಚಲನ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada