
ಹಾವೇರಿ : ಪಂಪ್ಸೆಟ್ ದುರಸ್ತಿ ಮಾಡಲು ಹೋಗಿ ಕರೆಂಟ್ ಶಾಕ್ ತಗುಲಿ ಅಪ್ಪ – ಮಗ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಭತ್ತದ ಬೆಳೆಗೆ ನೀರು ಹಾಯಿಸುವ ಪಂಪ್ ಸೆಟ್ ಹಾಳಾಗಿದ್ದು ಅದನ್ನು ದುರಸ್ತಿ ಮಾಡಿ ಮೋಟಾರು ಸ್ಟಾರ್ಟ್ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದ್ದು, ವಿದ್ಯುತ್ ಆಘಾತದಿಂದ ತಂದೆ-ಮಗ ಪಂಪಸೇಟ್ ಮೇಲೆಯೇ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.
ಕರಬಸಪ್ಪ ಕಡೇನಾಯಕನಹಳ್ಳಿ(50) ಹಾಗೂ ಅವರ ಮಗ ದರ್ಶನ (26) ಮೃತ ದುರ್ದೈವಿಗಳಾಗಿದ್ದಾರೆ . ಹಲಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ತೆರಳಿದ್ದ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

