
ಸರ್ಕಾರ ಭ್ರೂಣ ಹತ್ಯೆ ತಡೆಗೆ ಎಷ್ಟೇ ಬಿಗಿಯಾದ ಕಾನೂನು ಕ್ರಮ ಕೈಗೊಂಡರೂ ಅಲ್ಲಲ್ಲಿ ಪ್ರಕರಣ ನಡೆಯುತ್ತಿದೆ. ಆದರೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಇದು ಕೇವಲ ಕಾನೂನು ರೂಪಿಸುವದರಿಂದ ತಡೆಗಟ್ಟಲು ಸಾಧ್ಯವಿಲ್ಲ. ಸಾಮಾಜಿಕ ಜಾಗೃತಿಯೂ ಬಹಳ ಮುಖ್ಯ. ಯಾಕೆಂದರೆ ಯಾರೂ ಒತ್ತಾಯ ಪೂರ್ವಕವಾಗಿ ಮಾಡಿಕೊಳ್ಳುತ್ತಿಲ್ಲ.

ತಂತ್ರಜ್ಞಾನದ ಸಹಾಯವನ್ನೂ ಪಡೆದುಕೊಳ್ಳುತ್ತಿದ್ದಾರೆ. ಓರಲ್ ಔಷಧದ ಸೇವನೆಯಿಂದಲೂ ನಡೆಯುತ್ತಿದೆ. ಈಗಂತೂ ಅಲ್ಟ್ರಾಸೌಂಡ್ ಪೋರ್ಟೆಬಲ್ ಸ್ಕಾನಿಂಗ್ ಯಂತ್ರದಿಂದ ಅತ್ಯಂತ ಸಣ್ಣ ಸ್ಥಳದಲ್ಲಿಯೂ ಪರೀಕ್ಷೆ ನಡೆಸಬಹುದಾಗಿದೆ. ಪ್ರತಿ ಜಿಲ್ಲೆಯ ಡೇಟಾ ಪರಿಶೀಲನೆ ನಡೆಸಿ, ಹೆಚ್ಚು ಗಂಡುಮಕ್ಕಳು ಜನಿಸುವ ಆಸ್ಪತ್ರೆಗಳ ಮೇಲೆ ನಿಗಾ ಇಟ್ಟಿದ್ದೇವೆ. ಸಾಮಾಜಿಕ ಜಾಗೃತಿ ಮೂಡಿಸುತ್ತಿದ್ದೇವೆ. ಮಾಹಿತಿ ನೀಡಿದವರ ವಿವರ ಗೌಪ್ಯವಾಗಿಟ್ಟು ಬಹುಮಾನವನ್ನು ನೀಡುತ್ತಿದ್ದೇವೆ. ಪ್ರತಿ ಜಿಲ್ಲೆಗೂ ಒಬ್ಬ ನೋಡಲ್ ಅಧಿಕಾರಿ ನೇಮಕ ಮಾಡುತ್ತಿದ್ದೇವೆ. ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಗುಪ್ತ ಕಾರ್ಯಾಚರಣೆ ಸಹ ನಡೆಸುತ್ತಿದ್ದೇವೆ. ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ರಾಮನಗರ ಜಿಲ್ಲಾಸ್ಪತ್ರೆಯ ವೈದ್ಯ ಡಾ ಶಶಿ ಎಸ್ ಎಲ್ ಸೇವೆಯಿಂದ ಅಮಾನತ್ತು ಮಾಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದೇವೆ.

‘ಬಾಲಿಕಾ’ ಆನ್ಲೈನ್ ಸಾಪ್ಟವೇರ್ ಮೂಲಕ ಸ್ಕ್ಯಾನಿಂಗ್ ಸೆಂಟರ್ ಗಳ ಕಡ್ಡಾಯ ನೋದಣಿ ಮತ್ತು ನವೀಕರಣ. ಅಲ್ಟ್ರಾಸೌಂಡ್ ತಯಾರಕರು, ಮಾರಾಟಗಾರರನ್ನು ರಾಜ್ಯಮಟ್ಟದಲ್ಲಿ ನೋಂದಣಿ ಮಾಡಿ,ತ್ರೈಮಾಸಿಕ ವರದಿ ಪಡೆಯುತ್ತಿದ್ದೇವೆ. ಮಾಹಿತಿದಾರರಿಗೆ ರಾಜ್ಯ ಸರ್ಕಾರದಿಂದ 1ಲಕ್ಷ ರೂ ಬಹುಮಾನ ನೀಡುತ್ತಿದ್ದೇವೆ. ಹೀಗೆ ಆರೋಗ್ಯ ಇಲಾಖೆ ಎಲ್ಲ ರೀತಿಯಿಂದ ಭ್ರೂಣ ಹತ್ಯೆ ತಡೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.

ವಿಧಾನಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಪ್ರಶ್ನೆಗೆ ಉತ್ತರಿಸಿದ ಸಚಿವರು
ಅನಾವಶ್ಯಕವಾಗಿ ಬಂದಂತಹ ಇಂತಹ ವಿಚಾರಗಳ ಬಗ್ಗೆ ಹೆಚ್ಚು ಕಿವಿಗೊಡಬಾರದು. ರಾಜ್ಯ ಸರ್ಕಾರ ಈಗಾಗಲೇ ಮೊಟ್ಟೆಗಳ ಸ್ಯಾಂಪಲ್ ಪಡೆದು ಅದನ್ನು ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಿದೆ. ಸದ್ಯಕ್ಕೆ ಯಾವುದೇ ದೋಷ ಕಂಡುಬಂದಿಲ್ಲ. ಆದರೂ ಇಂತಹ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರುವುದು ಸೂಕ್ತ. ಆದ್ದರಿಂದ ಸರಿಯಾದ ರೀತಿಯಲ್ಲಿ ಇದನ್ನು ಆರೋಗ್ಯ ಇಲಾಖೆ ಪರಿಶೀಲನೆ ನಡೆಸುತ್ತದೆ ಎಂದರು.




