
ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್, ಕೆಲಸದ ಒತ್ತಡದ ನಡುವೆಯೂ ತಮ್ಮ ಸ್ವಕ್ಷೇತ್ರದ ಜನರ ಸಮಸ್ಯೆಯನ್ನು ಆಲಿಸಿದ್ದಾರೆ. ಮಳೆಯಿಂದ ಮರ ಉರುಳಿ ಬಿದ್ದ ಸ್ಥಳ ವೀಕ್ಷಣೆ ಮಾಡಿರುವ ಸಚಿವ ಕೆ.ಜೆ ಜಾರ್ಜ್, ಗಾಯಗೊಂಡು ಆಸ್ಪತ್ರೆ ಸೇರಿರುವ ಸ್ಥಳೀಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಜೊತೆಗೆ ಚಿಕಿತ್ಸೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ತಿಳಿಸಿದ್ದಾರೆ. ಸಚಿವರ ಕಾರ್ಯಕ್ಕೆ ಜನರು ಜಾಲತಾಣದಲ್ಲಿ ಮೆಚ್ಚುಗೆ ಸೂಚಿಸಿದ್ದಾರೆ.

ಸರ್ವಜ್ಞ ನಗರದಲ್ಲಿ ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಭಾರೀ ಆದ್ಯತೆ ನೀಡಿದ್ದು, ಎಲ್ಲರಿಗೂ ಸೂಕ್ತ ಆರೋಗ್ಯ ವ್ಯವಸ್ಥೆ ಸಿಗುವಂತೆ ವ್ಯವಸ್ಥೆ ನಾಡಿದ್ದಾರೆ. ಇನ್ನು ಮಕ್ಕಳಿಗೆ ಸೂಕ್ತ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಸಿಗುವಂತೆ ಪಬ್ಲಿಕ್ ಶಾಲೆಯನ್ನು ಉನ್ನತೀಕರಿಸಿದ್ದು, ಯುವ ಶಾಸಕರಿಗೆ ಮಾದರಿ ಎನ್ನುವಂತಹ ಕೆಲಸ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಉದ್ಯಮಿಗಳಿಂದ ಸಿಎಸ್ಆರ್ ಫಂಡ್ಗಳನ್ನು ಬಳಸಿಕೊಂಡು ಕ್ಷೇತ್ರದ ಜನತೆಯ ಅನುಕೂಲಕ್ಕಾಗಿ ಶಿಕ್ಷಣ ಸಂಸ್ಥೆಗಳು ಹಾಗು ಆಸ್ಪತ್ರೆಗಳನ್ನು ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುವಂತೆ ಮಾಡಿರುವುದು ಶಾಸಕರ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.

ಅಂಗನವಾಡಿ, ಶಾಲೆ, ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿರುವುದು ಮಾತ್ರವಲ್ಲದೆ, ತಮ್ಮ ಕ್ಷೇತ್ರದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೇ ಡಯಾಲಿಸಿಸ್ ಸೆಂಟರ್, ಮೈನರ್ ಸರ್ಜರಿ ಸೆಂಟರ್, ಲ್ಯಾಬೋರೇಟರಿ ಕೂಡ ಜನತೆಗೆ ಸಹಕಾರಿ ಆಗಿದೆ. ಇನ್ನು ನಿರುದ್ಯೋಗ ಯುವತಿ, ಯುವತಿಯರ ಅನುಕೂಲಕ್ಕಾಗಿ ಕೌಶಲ್ಯಾಭಿವೃದ್ಧಿ ಸಂಸ್ಥೆಯನ್ನು ಸ್ಥಾಪನೆ ಮಾಡುವ ಮೂಲಕ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಜೊತೆಗೆ ಸ್ಮಾರ್ಟ್ ಕ್ಲಾಸ್ ಆರಂಭಿಸಿದ್ದು, ಸಾಕಷ್ಟು ಮಂದಿ ಸ್ವ ಉದ್ಯೋಗ ಆರಂಭಕ್ಕೂ ಅನುಕೂಲ ಮಾಡಿಕೊಡುವ ಮೂಲಕ ಜನನಾಯಕ ಎನ್ನುವುದನ್ನು ಸಾಬೀತು ಮಾಡಿದ್ದಾರೆ.

ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಂಪ್ಯೂಟರ್ ರಿಪೇರಿ ತರಬೇತಿ, ಮಹಿಳೆಯರಿಗೆ ಟೈಲರಿಂಗ್, ಎಂಬ್ರೈಡರಿಂಗ್, ಕ್ಯಾಂಡಲ್ ತಯಾರಿಕೆ, ಚಾಕೊಲೇಟ್ ತಯಾರಿಕೆ, ಸೋಪ್ ತಯಾರಿಕೆ, ಮೊಬೈಲ್ ರಿಪೇರಿ, ಎಲೆಕ್ಟ್ರಿಕಲ್ ವರ್ಕ್, ಡಾಟಾ ಎಂಟ್ರಿ ಹೀಗೆ ಹತ್ತಾರು ಕೆಲಸಗಳನ್ನು ಕಲಿಸುತ್ತಿರುವುದು ಯುವಕರ ಪಾಲಿಗೂ ಸಚಿವ ಕೆ,ಜೆ ಜಾರ್ಜ್ ಅಚ್ಚುಮೆಚ್ಚು ಆಗಿದ್ದಾರೆ. ಚುನಾವಣೆ ವೇಳೆ ಮಾತ್ರ ಪಕ್ಷ.. ಆ ಬಳಿಕ ಎಲ್ಲರೂ ನಮ್ಮ ಕ್ಷೇತ್ರದ ಜನರು ಎಂದು ಭಾವಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಡುವುದರಿಂದ ವಿರೋಧ ಪಕ್ಷದ ಕಾರ್ಯಕರ್ತರು ಕೂಡ ಜಾರ್ಜ್ ಬಗ್ಗೆ ಉತ್ತಮ ಮಾತನ್ನಾಡುವುದು ಈ ಕ್ಷೇತ್ರದ ವಿಶೇಷ.
