ಮನದ ಕಡಲು (Manada kadalu) ಸಿನಿಮಾದ ಶೂಟಿಂಗ್ ವೇಳೆ ದೊಡ್ಡ ಅವಘಡ ಸಂಭವಿಸಿದೆ. ಲೈಟಿಂಗ್ ಬಿಚ್ಚುವ ಸಂದರ್ಭದಲ್ಲಿ 30 ಅಡಿ ಮೇಲಿಂದ ಬಿದ್ದ ಲೈಟ್ (Light man) ಮ್ಯಾನ್ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ FIR ದಾಖಲಾಗಿದೆ.

ನೆಲಮಂಗಲದ ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದೆ. 30 ಅಡಿ ಎತ್ತರದ ಅಲ್ಯುಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದಾಗ ಆಯತಪ್ಪಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವ ಆಗಿದೆ.
ಈ ಘಟನೆ ನಡೆದ ತಕ್ಷಣವೇ ಲಯಟ್ ಮ್ಯಾನ್ ಮೋನರ್ರನ್ನ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಮೃತನ ಸಹೋದರ ಶೀವರಾಜ್ ದೂರಿನನ್ವಯ FIR ದಾಖಲಾಗಿದೆ.