• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ದ ಪ್ರಕರಣ ದಾಖಲು

Shivakumar A by Shivakumar A
June 8, 2021
in ರಾಜಕೀಯ
0
ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ: ಕೇರಳ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ದ ಪ್ರಕರಣ ದಾಖಲು
Share on WhatsAppShare on FacebookShare on Telegram

ಕೇರಳದಲ್ಲಿ ಬಿಜೆಪಿ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಸಂದರ್ಭದಲ್ಲಿ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತನ್ನ ಬಳಿ ಇದ್ದಂತಹ ಒಂದು ಸೀಟನ್ನು ಕೂಡಾ ಉಳಿಸಿಕೊಳ್ಳಲು ಸಾಧ್ಯವಾಗದೇ ತೀವ್ರವಾದ ಮುಖಭಂಗ ಅನುಭವಿಸಿದ ಬಿಜೆಪಿ, ಈಗ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಆರೋಪ ಎದುರಿಸುತ್ತಿದೆ. ಅದು ಕೂಡಾ, ಕೇರಳ ಬಿಜೆಪಿ ರಾಜ್ಯಾಧ್ಯಕ್ಷರೇ ಅಕ್ರಮ ಎಸಗಿರುವ ಕುರಿತು ಆರೋಪ ಕೇಳಿ ಬಂದಿರುವುದು, ಪಕ್ಷಕ್ಕೆ ನುಂಗಲಾಗದ ತುಪ್ಪವಾಗಿ ಪರಿಣಮಿಸಿದೆ.

ADVERTISEMENT

ಕರ್ನಾಟಕ-ಕೇರಳದ ಗಡಿ ಜಿಲ್ಲೆಯಾಗಿರುವ ಕಾಸರಗೋಡಿನ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಅವರು ತಮ್ಮ ಎದುರಾಳಿ ಅಭ್ಯರ್ಥಿಗೆ ಆಮೀಷವೊಡ್ಡಿ ಚುನಾವಣೆಯಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುರೇಂದ್ರನ್ ಅವರಿಗೆ ಕ್ಷೇತ್ರದಲ್ಲಿ ಉಂಟಾದ ಸೋಲಿನ ಮೇಲೆ ಈಗ ಬರೆ ಎಳೆದಂತಾಗಿದೆ.

ಸಿಪಿಐ(ಎಂ) ನಾಯಕರಾದ ವಿ ವಿ ರಮೇಶನ್ ಅವರು, ಸುರೇಂದ್ರನ್ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ಮ್ಯಾಜಿಸ್ಟ್ರೇಟ್ ಅವರ ಬಳಿ ಅನುಮತಿ ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿದ್ದ ಮ್ಯಾಜಿಸ್ಟ್ರೇಟ್, ಕಾಸರಗೋಡು ಪೊಲೀಸರಿಗೆ ಎಫ್ಐಆರ್ ದಾಖಲಿಸುವಂತೆ ಸೂಚಿಸಿತ್ತು. ಹೀಗಾಗಿ ಪೊಲೀಸರು, IPC section 171 (B) ಮತ್ತು 171 (E) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಮೇಶನ್ ಅವರು ಕೂಡಾ ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು. ಯುಡಿಎಫ್ ಅಭ್ಯರ್ಥಿ ಮುಸ್ಲಿಂ ಲೀಗ್’ನ ಎ ಕೆ ಎಂ ಅಶ್ರಫ್ ಅವರು ಈ ಕ್ಷೇತ್ರವನ್ನು ಗೆದ್ದುಕೊಂಡಿದ್ದರು.

‘ಲಂಚ’ ಪ್ರಕರಣ:

ಕಳೆದ ಶನಿವಾರದಂದು, ಬಹುಜನ ಸಮಾಜವಾದಿ ಪಕ್ಷದ ನಾಯಕರಾದ ಕೆ ಸುಂದರ ಅವರು, ಚುನಾವಣೆಯಿಂದ ಹಿಂದೆ ಸರಿಯಲು ತಮಗೆ ಬಿಜೆಪಿ ನಾಯಕರು ಆಮೀಷವೊಡ್ಡಿದ್ದ ಕುರಿತು ಬಹಿರಂಗಪಡಿಸಿದ್ದರು. ಸ್ಪರ್ಧೆಯಿಂದ ಹಿಂದೆ ಸರಿದರೆ ಬಿಜೆಪಿಯವರು 2.5 ಲಕ್ಷ ಮತ್ತು ಸ್ಮಾರ್ಟ್’ಪೋನ್ ನೀಡುವುದಾಗಿ ಆಮೀಷವೊಡ್ಡಿದ್ದರು. ಇದರೊಂದಿಗೆ, ೨೦೧೬ರಲ್ಲಿ ಒಂದು ವೈನ್ ಪಾರ್ಲರ್ ಮತ್ತು ಕರ್ನಾಟಕದಲ್ಲಿ ಒಂದು ಮನೆಯನ್ನು ಕೊಡಿಸುವ ಕುರಿತಾಗಿಯೂ ಹೇಳಿದ್ದರು, ಎಂದು ಸುಂದರ ಮಾಹಿತಿ ನೀಡಿದ್ದರು.

ಇನ್ನು ಪೊಲೀಸರಿಗೆ ನೀಡಿರುವ ಮಾಹಿತಿಯಲ್ಲಿ ನನ್ನನ್ನು ಕೆಲವು ಸ್ಥಳಿಯ ಬಿಜೆಪಿ ನಾಯಕರು ಅಪಹರಿಸಿ ಬಲವಂತವಾಗಿ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಮಾಡಿದ್ದರು ಎಂದು ದೂರಿದ್ದರು.

ನಾಮಪತ್ರ ಹಿಂಪಡೆದ ಮೇಲೆ ಸುಂದರ ಅವರು ಬಿಜೆಪಿ ಸೇರಿದ್ದರು. ನಾಮಪತ್ರ ಹಿಂಪಡೆದ ದಿನವೇ ರಾಜ್ಯ ಬಿಜೆಪಿ ಯುವ ಮೋರ್ಚಾ ಕೋಶಾಧಿಕಾರಿಯಾದ ಸುನಿಲ್ ನಾಯ್ಕ್ ಅವರು ಸುಂದರ ಅವರ ಕಾಸರಗೋಡಿನ ಮನೆಗೆ ಭೇಟಿ ನೀಡಿದ್ದರು. ಸುಮದರ ಅವರು ನಾಮಪತ್ರವನ್ನು ಹಿಂಪಡೆಯುವ ಸುದ್ದಿಯನ್ನು ತಮ್ಮ ಫೇಸ್ಬುಕ್ ಖಾತೆಯ ಮೂಲಕ ಸುನಿಲ್ ಅವರೇ ಬಹಿರಂಗಪಡಿಸಿದ್ದರು.

ಅಚ್ಚರಿಯ ವಿಚಾರವೇನೆಂದರೆ, ಈ ಸುನಿಲ್ ನಾಯ್ಕ್, ವಿಧಾನಸಭಾ ಚುನಾವಣೆಯ ಮೂರು ದಿನಗಳ ಹಿಂದೆ ನಡೆದ ಹಯವೇ ದರೋಡೆಯಲ್ಲಿ ಭಾಗವಹಿಸಿದ್ದರು ಎಂಬ ಕುರಿತಾಗಿಯೂ ಸಾಕ್ಷ್ಯಾಧಾರಗಳಿವೆ. ಮೂರುವರೆ ಕೋಟಿಯಷ್ಟು ಹಣವನ್ನು ಹೈವೇಯಲ್ಲಿ ದರೋಡೆ ನಡೆಸಿದ ಪ್ರಕರಣ ಇದಾಗಿದೆ. ಈ ಕುರಿತಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದ ಸುನಿಲ್, RSS ಕಾರ್ಯಕರ್ತರಾಗಿರುವ ಎ ಕೆ ಧರ್ಮರಾಜನ್ ಎಂಬವರಿಗೆ ರಿಯಲ್ ಎಸ್ಟೇಟ್’ನಲ್ಲಿ ಬಂಡವಾಳ ಹೂಡಲು ರೂ. 25 ಲಕ್ಷ ನೀಡಿರುವುದಾಗಿ ಹೇಳಿದ್ದರು.

ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ, ಈಗ ಚುನಾವಣೆಯಲ್ಲಿ ಅಕ್ರಮ ಎಸಗಿರುವ ಕುರಿತು ಆರೋಪ ಕೇಳಿಬರುತ್ತಿರುವುದು, ಕೇರಳದಲ್ಲಿ ತನ್ನ ಪಾದವನ್ನು ಗಟ್ಟಿಯಾಗಿ ಊರಲು ಪ್ರಯತ್ನಿಸುತ್ತಿದ್ದ ಬಿಜೆಪಿಗೆ ಹಿನ್ನಡೆ ಉಂಟುಮಾಡಿದೆ. ಇದರೊಂದಿಗೆ, ಶಬರಿಮಲೆ ಹೊರಾಟ, ಹಿಂದುತ್ವ ಪರ ಹೋರಾಟಗಳಿಂದ ಕೇರಳದಲ್ಲಿ ಅತೀ ಹೆಚ್ಚು ಜನಪ್ರಿಯತೆ ಹೊಂದಿದ್ದ ಸುರೇಂದ್ರನ್ ಅವರೇ ಚುನಾವಣೆಯಲ್ಲಿ ಗೆಲ್ಲಲು ಅಡ್ಡದಾರಿ ಹಿಡಿಯಬೇಕಾದ ಪರಿಸ್ಥಿತಿ ಎದುರಾದರೆ, ಉಳಿದ ನಾಯಕರ ಸ್ಥಿತಿ ಹೇಗಿರಬಹುದು ಎಂಬುದು ಕೂಡಾ ಸ್ಪಷ್ಟವಾಗಿ ಗೋಚರಿಸುತ್ತಿದೆ.

Previous Post

ಕಾಗದದಲ್ಲಿ ವಾಯು ಮಾಲಿನ್ಯ ನಿಯಂತ್ರಿಸುವ ಸರ್ಕಾರಗಳು ಕಾರ್ಯರೂಪಕ್ಕೆ ತರುವುದು ಯಾವಾಗ?

Next Post

ಸರ್ಕಾರದಿಂದ ಜಿಂದಾಲ್ಗೆ ಭೂಮಿ ಮಾರಾಟ- ದಾಖಲೆಸಲ್ಲಿಸುವಂತೆ ಹೈಕೋರ್ಟ್ ಆದೇಶ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಸರ್ಕಾರದಿಂದ ಜಿಂದಾಲ್ಗೆ ಭೂಮಿ ಮಾರಾಟ- ದಾಖಲೆಸಲ್ಲಿಸುವಂತೆ ಹೈಕೋರ್ಟ್ ಆದೇಶ

ಸರ್ಕಾರದಿಂದ ಜಿಂದಾಲ್ಗೆ ಭೂಮಿ ಮಾರಾಟ- ದಾಖಲೆಸಲ್ಲಿಸುವಂತೆ ಹೈಕೋರ್ಟ್ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada