ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಸ್ಪೋಟದ ರಭಸಕ್ಕೆ ಮೂವರು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ನಗರತ್ ಪೇಟೆಯಲ್ಲಿ ನಡೆದಿದೆ. ಸ್ಥಳಕ್ಕೆ ವಿವಿಪುರಂ ಪೊಲೀಸರು ಹಾಗೂ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಕಾರ್ಯಚರಣೆ ನಡೆಸುತ್ತಿದ್ದಾರೆ.
ಮೃತರನ್ನು ತಮಿಳುನಾಡು ಮೂಲದ ಮನೋಹರ್ 29, ಅಸ್ಲಂ 45, ಫಯಾಜ್ 50 ಎಂದು ಗುರುತಿಸಲಾಗಿದೆ. ಶ್ರೀ ಮಹಾಕಾಳಿ ಅಮ್ಮ ಎನ್ನುವ ಗೋಡಾನ್ನಲ್ಲಿ ಈ ಘಟನೆ ಸಂಭವಿಸಿದ್ದು ಗೋದಾಮಿನಲ್ಲಿ ಪಟಾಕಿಗಳನ್ನು ಶೇಖರಿಸಿ ಇಟ್ಟಿರುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಸ್ಪೋಟದಲ್ಲಿ ಮೂವರು ಮೃತರಾಗಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸ್ಪೋಟದ ರಭಸಕ್ಕೆ ಮೃತದೇಹಗಳು ಚಿದ್ರವಾಗಿ 100 ಮೀಟರ್ ನಷ್ಟು ದೂರಕ್ಕೆ ಹೋಗಿ ಬಿದ್ದಿವೆ. ಸದ್ಯಕ್ಕೆ ಮೂವರು ಸಾವಿ ಮತ್ತು ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸ್ಫೋಟದ ರಭಸಕ್ಕೆ ಘಟನೆ ನಡೆದ ಸ್ಥಳದಲ್ಲಿ ಬೈಕ್ಗಳು ಜಖಂಗೊಂಡಿವೆ ಮತ್ತು ಬೈಕ್ ಸಮೀಪ ನಿಂತಿದ್ದ ಕೆಲವರಿಗೆ ಗಂಭೀರ ಗಾಯಗಳಾಗಿವೆ . ಸ್ಪೋಟದ ತೀವ್ರತೆಗೆ ಬಿಲ್ಡಿಂಗ್ ಗೋಡೆಗಳು ಛಿದ್ರವಾಗಿರುವ ಕಾರಣ ಇನ್ನು ಹಲವಾರು ಮಂದಿ ಗಾಯಗೊಂಡಿರೋ ಶಂಕೆ ವ್ಯಕ್ತವಾಗುತ್ತಿದೆ.
ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿ ಈ ಘಟನೆ ನಡೆದಿದೆ. ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, ದೇಹಗಳು ಸಂಪೂರ್ಣ ಛಿದ್ರ-ಛಿದ್ರವಾಗಿವೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಒಟ್ಟು ಏಳು ಜನರಿದ್ದ ವೇಳೆ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಫ್ಎಸ್ಎಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಚರಣೆ ನಡೆಸುತ್ತಿದ್ದು. ಸುಮಾರು 3 ಮೀಟರ್ ದೂರದವರೆಗೆ ಚದುರಿದ ಮೃತ ದೇಹಗಳು . ಸಮಯ ಮಧ್ಯಾಹ್ನ 12ರಿಂದ 12:15 ವೇಳೆ ಘಟನೆ ನಡೆದಿದೆ ಎಂದು ಸ್ಥಳಿಯರು ಹೇಳಿದ್ದಾರೆ.






