ಬೆಂಗಳೂರು: ನಗರದಲ್ಲಿ ಉದ್ಯಮಿಯ ಮೇಲೆ ಏರ್ ಗನ್ನಿಂದ ಫೈಯರ್ ಆಗಿರುವ ಆರೋಪ ಕೇಳಿಬಂದಿದೆ. ಬಸವನಗುಡಿಯ (Basavanagudi) ಕೃಷ್ಣರಾವ್ ಪಾರ್ಕ್ನಲ್ಲಿ ರಾತ್ರಿ 8:30 ರ ಸುಮಾರಿಗೆ ನರ್ತಕಿ ಹಾಗೂ ಕಾರ್ಗಿಲ್ ಬಾರ್ನ ಮಾಲೀಕ ರಾಜಗೋಪಾಲ್(Raja Gopal) ಮೇಲೆ ಫೈರಿಂಗ್ ನಡೆದಿದ್ದು , ಫೈರಿಂಗ್ನಿಂದ ರಾಜಗೋಪಾಲ್ ಅವರ ಕತ್ತಿನ ಭಾಗಕ್ಕೆ ಗಾಯವಾಗಿದೆ.

ಸದ್ಯ ಗಾಯಗೊಂಡ ಉದ್ಯಮಿ ರಾಜಗೋಪಾಲ್ ಅವರನ್ನು ಜಯನಗರದ ಬೆಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರ ವಿಚಾರಣೆ ವೇಳೆ ತನಗೆ ಯಾವುದೇ ವ್ಯಕ್ತಿಗಳ ಮೇಲೆ ಅನುಮಾನವಿಲ್ಲ, ಯಾವ ಬೆದರಿಕೆ ಕರೆಯೂ ಬಂದಿಲ್ಲ. ಯಾಕಾಗಿ ಫೈರಿಂಗ್ ಆಯ್ತು, ಯಾವ ಕಾರಣಕ್ಕೆ ಫೈರಿಂಗ್ ಮಾಡಿದರು ಗೊತ್ತಿಲ್ಲಾ ಎಂದು ರಾಜಗೋಪಾಲ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸದ್ಯ ಬಸವನಗುಡಿ ಪೊಲೀಸರು ಏರ್ ಗನ್ನಿಂದ ಶೂಟ್ ಮಾಡಲಾಗಿದ್ಯಾ ಎಂದು ಪರಿಶೀಲನೆ ನಡೆಸುತ್ತಿದ್ದು, ಏರ್ ಗನ್ ಶೂಟರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.













