• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆಗೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
June 5, 2025
in Top Story, ಕರ್ನಾಟಕ, ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ಕರ್ನಾಟಕದಲ್ಲಿ ಮೊಟ್ಟಮೊದಲ ಜಿಲ್ಲಾ ಅಧಿಕಾರಿ ಅಪ್‌ಸ್ಕಿಲ್ಲಿಂಗ್ ಯೋಜನೆಗೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ
Share on WhatsAppShare on FacebookShare on Telegram

ಇನ್ಫೋಸಿಸ್ ಪಾಲುದಾರಿಕೆಯೊಂದಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಸಚಿವ ಡಾ. ಶರಣ್‌ ಪ್ರಕಾಶ್‌ ಚಾಲನೆ

ADVERTISEMENT

ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಇಲಾಖೆಯು ಎಲ್ಲಾ ಪ್ರಮುಖ ಅಧಿಕಾರಿಗಳಿಗೆ, ಮುಖ್ಯಸ್ಥರಿಗೆ, ಜಿಲ್ಲಾ ಅಧಿಕಾರಿಗಳಿಗೆ ಸಮಗ್ರ ಸಾಮರ್ಥ್ಯ ವೃದ್ಧಿ (ಅಪ್‌ ಸ್ಕಿಲ್ಲಿಂಗ್‌) ಕಾರ್ಯಕ್ರಮವನ್ನು ಪ್ರಾರಂಭಿಸಿದೆ, ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ತಳಮಟ್ಟದಿಂದ ಅನುಷ್ಠಾನಕ್ಕೆ ತರಲು ಈ ತರಬೇತಿ ಕಾರ್ಯಕ್ರಮವು ಪರಿಣಾಮಕಾರಿಯಾಗಲಿದೆ.

RCB Parade Stampede: ನಾನು ಕರ್ನಾಟಕದ ಜನರಿಗಷ್ಟೇ ಉತ್ತರ ಕೊಡೋದು..ಡಿಕೆ ಗರಂ #pratidhvani

ಇನ್ಫೋಸಿಸ್ ಸಂಸ್ಥೆಯೊಂದಿಗೆ ಈ ಸಂಬಂಧ ಪಾಲುದಾರಿಕೆ ಮಾಡಿಕೊಳ್ಳಲಾಗಿದೆ. ಇನ್ಫೋಸಿಸ್‌ನ ಮೈಸೂರು ಕ್ಯಾಂಪಸ್‌ನಲ್ಲಿ ಪ್ರಾರಂಭವಾದ ಎರಡು ದಿನಗಳ ಕಾರ್ಯಾಗಾರವು ರಾಜ್ಯದಲ್ಲೇ ಮೊದಲನೆಯದ್ದಾಗಿದೆ.

ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಗುರುವಾರ ವಿಕಾಸಸೌಧದಲ್ಲಿ ವೀಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಾಗಾರವು ಜಿಲ್ಲಾಮಟ್ಟದ ಅಧಿಕಾರಿಗಳ ನಾಯಕತ್ವ, ಕೌಶಲ್ಯ ವ್ಯವಸ್ಥೆ, ಸಮರ್ಥ ಆಡಳಿತ ಮತ್ತು ಯೋಜನೆ ಅನುಷ್ಠಾನಕ್ಕೆ ಬೇಕಾಗಿರುವ ಎಲ್ಲ ಸಾಂಸ್ಥಿಕ ಸಾಮರ್ಥ್ಯಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ನಾವು ಕಲಿಕೆ ಮತ್ತು ಸಮಸ್ಯೆ ಪರಿಹಾರಕ್ಕಾಗಿ ಸಹಯೋಗದ ವಾತಾವರಣವನ್ನು ಸೃಷ್ಟಿಸುತ್ತಿದ್ದೇವೆ. ಅದು ತಳಮಟ್ಟದಿಂದ ಸುಧಾರಣೆಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದು ಸಚಿವ ಡಾ. ಪಾಟೀಲ್‌ ತಿಳಿಸಿದರು.

ಈ ಕಾರ್ಯಕ್ರಮವು ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ: ಜಿಲ್ಲಾ ಕೌಶಲ್ಯ ಅಭಿವೃದ್ಧಿ ಯೋಜನೆಗಳ ಸೂತ್ರ (DSDPs), ಕೇಂದ್ರ ಯೋಜನೆಗಳೊಂದಿಗೆ ಪರಿಣಾಮಕಾರಿ ಸಮ್ಮಿಲನ ಮತ್ತು ಮುಖ್ಯಮಂತ್ರಿ ಕಲಿಕಾ ಕೌಶಲ್ಯ ಯೋಜನೆ (CMKKY) ಅನುಷ್ಠಾನದ ವಿಮರ್ಶೆ. ಅಧಿಕಾರಿಗಳು CMKKY 2.0 ಅನ್ನು ವಿನ್ಯಾಸಗೊಳಿಸುವ ಮತ್ತು ಜಾರಿಗೊಳಿಸುವ ಕುರಿತು ರಚನಾತ್ಮಕ ಚರ್ಚೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ಫೋಸಿಸ್ ತಜ್ಞರಾದ ಸಂತೋಷ್ ಅನಂತಪುರ, ಡಾ. ಮೀನಾಕ್ಷಿ, ಗಿರಿಜಾ ಮತ್ತು ವಿನಯ್ ವಸಂತ್ ಅವರು ನಾಯಕತ್ವ ಅಭಿವೃದ್ಧಿ, ಕೌಶಲ್ಯ ತರಬೇತಿ ಮತ್ತು ಜಿಲ್ಲಾ ಅಧಿಕಾರಿಗಳ ಪಾತ್ರಗಳು ಮತ್ತು ಜವಾಬ್ದಾರಿಗಳನ್ನು ನಿಭಾಯಿಸುವ ಕುರಿತು ತರಬೇತಿ ನೀಡಲಿದ್ದಾರೆ.

ಪರಿಹಾರಗಳನ್ನು ಗುರುತಿಸುವುದರ ಜೊತೆಗೆ ಜಿಲ್ಲಾಮಟ್ಟದಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಅನುಷ್ಠಾನದ ಸವಾಲುಗಳ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ಹೆಚ್ಚಿನ ವಿಷಯ ತಿಳಿದುಕೊಳ್ಳುವ ನಿರೀಕ್ಷೆ ಇದೆ ಎಂದು ಕೆಎಸ್‌ಡಿಸಿ ಅಧ್ಯಕ್ಷರಾದ ಕಾಂತ ನಾಯಕ್ ಹೇಳಿದರು.

ಮಾಜಿ ಅಧಿಕಾರಿ ಮತ್ತು ಕೆಎಸ್‌ಡಿಎ ಅಧ್ಯಕ್ಷರಾದ ವಿ. ರಮಣ ರೆಡ್ಡಿ ಮಾತನಾಡಿ, “ಕರ್ನಾಟಕ ಕೌಶಲ್ಯ ಒಲಿಂಪಿಕ್ಸ್ ಮತ್ತು ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವ ತರಬೇತಿಯನ್ನು ಅಧಿಕಾರಿಗಳು ಪಡೆಯಲಿದ್ದಾರೆ. ಜೊತೆಗೆ ಯುರೋಪ್, ಜಪಾನ್ ಮತ್ತು ಯುಎಇಯಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ವಿವರ/ಮಾಹಿತಿ/ಒಳನೋಟ ಪಡೆಯಲಿದ್ದಾರೆ” ಎಂದರು.

ಕೈಗಾರಿಕಾ ಪಾಲುದಾರಿಕೆ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳ ಬಗ್ಗೆಯೂ ರಮಣರೆಡ್ಡಿ ಗಮನ ಸೆಳೆದರು. ಆಡಳಿತ ಮಟ್ಟದಲ್ಲಿ ಉದ್ದೇಶಿತ ಸಾಮರ್ಥ್ಯ ವೃದ್ಧಿಯ ಮೂಲಕ ರಾಜ್ಯದ ಕೌಶಲ್ಯ ಅಭಿವೃದ್ಧಿ ಮೂಲ ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಉಪಕ್ರಮವು ಮಹತ್ವದ ಹೆಜ್ಜೆಯಾಗಿದೆ.

Tags: current affairs in englishdaily current affairs in englishdaily news analysis in englishin englishpib analysis in englishpib analysis in hindiseptember 2017 current affairs in englishseptember current affairs in englishseptember first weekthe hindu analysis in englishthe hindu analysis in hindithe hindu daily news analysis in hindiupsc study material in kannadawater in marswhat study for ias officer in kannada
Previous Post

ಹೆಣದ ಮೇಲೆ ರಾಜಕೀಯ ಮಾಡುವುದೇ ಕುಮಾರಸ್ವಾಮಿ, ಬಿಜೆಪಿ ನಾಯಕರ ವೃತ್ತಿ

Next Post

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ – ಆರ್.ಸಿ.ಬಿ ಫ್ರಾಂಚೈಸಿ ಅಧಿಕೃತ ಘೋಷಣೆ ! 

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ – ಆರ್.ಸಿ.ಬಿ ಫ್ರಾಂಚೈಸಿ ಅಧಿಕೃತ ಘೋಷಣೆ ! 

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಪರಿಹಾರ - ಆರ್.ಸಿ.ಬಿ ಫ್ರಾಂಚೈಸಿ ಅಧಿಕೃತ ಘೋಷಣೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada