ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಪಾರದರ್ಶಕತೆ ಬಗ್ಗೆ ಕಳವಳ ವ್ಯಕತಪಡಿಸಿ ಐವರು ಸಂಸದರು ಪಕ್ಷದ ಚುನಾವಣಾ ಪ್ರಾಧಕಾರದ ಮುಖ್ಯಸ್ಥ ಮಧುಸುಧನ್ ಮಿಸ್ತ್ರಿಗೆ ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಶಶಿ ತರೂರ್, ಮನೀಶ್ ತಿವಾರಿ, ಕಾರ್ತಿ ಚಿದಂಬರಂ, ಪ್ರದ್ಯುತ್ ಬೊರ್ಡೊಲೊಯ್ ಮತ್ತು ಅಬ್ದುಲ್ ಖಲೀಕ್ ಬರೆದಿರುವ ಪತ್ರದಲ್ಲಿ ಪಾರದರ್ಶಕತೆ ಹಾಗೂ ನ್ಯಾಯಸಮ್ಮತತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಮತದಾರರ ಪಟ್ಟಿಯನ್ನು ರೂಪಿಸುವ ಎಲ್ಲಾ ಪ್ರದೇಶ್ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳ ಪಟ್ಟಿಯನ್ನು ಸಂಭಾವ್ಯ ಅಭ್ಯರ್ಥಿಗಳಿಗೆ ಒದಗಿಸುವಂತೆ ಪತ್ರದಲ್ಲಿ ಕೋರಿದ್ದಾರೆ.
ಅಭ್ಯರ್ಥಿಯನ್ನು ನಾಮ ನಿರ್ದೇಶನ ಮಾಡಲು ಹಾಗೂ ಮತ ಚಲಾಯಿಸಲು ಯಾರು ಸೂಕ್ತ ಎಂಬುದನ್ನು ಪರಿಶೀಲಿಸುವುದಕ್ಕಾಗಿ ಮತದಾರರ ಪಟ್ಟಿಯನ್ನು ಎಲ್ಲರಿಗೂ ದೊರೆಯುವಂತೆ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮತದಾರರ ಪಟ್ಟಿ ಪರಿಶೀಲನೆಗಾಗಿ ಮತದಾರರು ಮತ್ತು ಅಭ್ಯರ್ಥಿಗಳು ಎಲ್ಲಾ 28 ಪಿಸಿಸಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಭೇಟಿ ನೀಡಲು ಸಾಧ್ಯವಾಗದು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಹಾಗೆಯೇ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಬೇಕು ಎಂಬ ನಮ್ಮ ಬೇಡಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದು ದುರಾದೃಷ್ಟಕರ. ಆಂತರಿಕ ದಾಖಲೆಯನ್ನು ಬಿಡುಗಡೆ ಮಾಡಬೇಕೆಂದು ನಾವು ಹೇಳಿಲ್ಲ ಪಕ್ಷದ ಚುನಾವಣೆ ದುರುಪಯೋಗಕ್ಕೆ ಅವಕಾಶವಾಗಬಹುದು ಎಂಬ ಅಂಶ ನಮ್ಮಗೂ ತಿಳಿದಿದೆ ಎಂದು ಕಾಂಗ್ರೆಸ್ನ ಐವರು ಸಂಸದರು ಪತ್ರದಲ್ಲಿ ಬರೆದಿದ್ದಾರೆ.