ಬೆಂಗಳೂರು : ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾದರೆ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ ಐದು ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಜೆಡಿಎಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಉಚಿತ ಶಿಕ್ಷಣ, ನಿರ್ಗತಿಕರಿಗೆ ಮನೆ, ನಿರೋದ್ಯೋಗಿಗಳಿಗೆ ಉದ್ಯೋಗ ಸೇರಿದಂತೆ ಅನೇಕ ಸೌಕರ್ಯಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

ವರುಣ ರಾಜಕೀಯದ ಬಗ್ಗೆಯೂ ಮಾತನಾಡಿದ ಅವರು, ನಾನು ಯಾರನ್ನೋ ಸೋಲಿಸಬೇಕೆಂದು ಭಾರತಿ ಶಂಕರ್ರನ್ನು ಈ ಕಣದಲ್ಲಿ ಇಳಿಸಿಲ್ಲ. ವರುಣದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕೆಂದು ಅವರನ್ನು ನಿಲ್ಲಿಸಿದ್ದೇನೆ ಎಂದು ಹೇಲಿದರು.
ಪಕ್ಷದ ಕಾರ್ಯಕರ್ತರ ಬಗ್ಗೆಯೂ ಇದೇ ವೇಳೆ ಮಾತನಾಡಿದ ಅವರು, ನಿಮಗೆ ಸಿಗಬೇಕಾದ ಎಲ್ಲಾ ಗೌರವ ನಮ್ಮಲ್ಲಿ ಸಿಗುತ್ತದೆ. ಯಾರೂ ಯಾವುದೇ ಕಾರಣಕ್ಕೂ ಅಸಮಾಧಾನ ಮಾಡಿಕೊಳ್ಳಬಾರದು ಎಂದು ಹೇಳಿದರು.






