• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
June 14, 2024
in ಕರ್ನಾಟಕ
0
ಗ್ಯಾರಂಟಿಗಳ ಮೌಲ್ಯಮಾಪನಕ್ಕೆ ಮುಂದಾದ ಸರ್ಕಾರ; ಸುಸ್ತಾಯಿತಾ ಸರ್ಕಾರಕ್ಕೆ?
Share on WhatsAppShare on FacebookShare on Telegram

ಮೈಸೂರು, ಜೂನ್ 14 : ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಗ್ಯಾರಂಟಿಗಳನ್ನು ಮರುಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯದ ಆದೇಶದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ನ್ಯಾಯಾಲಯದ ಆದೇಶದ ಮೇಲೆ ನಾನು ಪ್ರತಿಕ್ರಿಯೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತರ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ಧ್ವೇಷದ ರಾಜಕಾರಣ ಮಾಡುವುÅದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೋಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ
ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ
ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ ಎಂದರು. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು. ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ ಪೋಲೀಸಿನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ ಎಂದರು. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು. ಸಾಮಾನ್ಯ ಜನ ಹೇಗೆ ಹೇಳುವುದನ್ನು ಕೇಳುತ್ತೇವೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ: ನಿರೀಕ್ಷೆಯಂತೆ ಆಗಿಲ್ಲ
ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞನ ಬಳಿ ಚರ್ಚಿಸುತ್ತೇನೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Tags: congresssiddaramaiah
Previous Post

ದೇವೇಗೌಡರ ಕುಟುಂಬ ಆಯಿತು, ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಕಾಂಗ್ರೆಸ್ ಸಂಚು! 82 ವರ್ಷದ ಯಡಿಯೂರಪ್ಪ ಮೇಲೆ ಕಾಂಗ್ರೆಸ್‌ ಸೇಡಿನ ರಾಜಕಾರಣ

Next Post

ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

ಕೊಲೆ ಪ್ರಕರಣ; ಮಗ ಅರೆಸ್ಟ್ ಆಗಿದ್ದನ್ನು ಕಂಡು ತಂದೆಗೆ ಹೃದಯಾಘಾತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada