• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ವರುಷ.. ರಾಜ್ಯದಲ್ಲಿ ಹರುಷ.. ದೇಶಾದ್ಯಂತ ನಡೀತಿದೆ ಪೌರುಷ..!

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in Top Story, ದೇಶ, ರಾಜಕೀಯ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಕಾಂಗ್ರೆಸ್​​ ಸರ್ಕಾರ(Congress Government) ಅಸ್ತಿತ್ವಕ್ಕೆ ಬಂದು ಬರೋಬ್ಬರಿ ಒಂದು ವರ್ಷ ಆಗಿದೆ. 2023ರ ಮೇ 14ರಂದು ಚುನಾವಣೆ(Election) ಘೋಷಣೆ ಆದರೂ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ(Siddaramaiah) ಹಾಗು ಡಿ.ಕೆ ಶಿವಕುಮಾರ್​(Shiva Kumar) ನಡುವೆ ಪೈಪೋಟಿ ಏರ್ಪಟ್ಟಿತ್ತು. ಒಂದು ವಾರ ಕಾಲ ದೆಹಲಿಯಲ್ಲಿ ಹೈಕಮಾಂಡ್(Delhi High Command) ನಾಯಕರು ಅಳೆದೂ ತೂಗಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ರಚಿಸುವಂತೆ ಸೂಚಿಸಿದರು. ಆ ಬಳಿಕ ಡಿ.ಕೆ ಶಿವಕುಮಾರ್​ಗೆ (DK Shivakumar) ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿ ಸಮಾಧಾನ ಮಾಡಲಾಗಿತ್ತು. ಇದೇ ದಿನ ಇಡೀ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಮಂತ್ರಿಗಳ ಸಹಿತ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ್ದರು.

ADVERTISEMENT

ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ರಾಜ್ಯದ ಜನರಿಗೆ ನೀಡಿದ್ದ ಭರವಸೆ ಈಡೇರಿಸುವ ಕೆಲಸ ಮಾಡಿದ್ದರು. ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳನ್ನು ಜಾರಿ ಮಾಡುವ ಭರವಸೆ ನೀಡಿದ್ದ ಎಲ್ಲಾ ಐದು ಯೋಜನೆಗಳನ್ನು(Schemes) ಜಾರಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು. ಚುನಾವಣೆ ವೇಳೆ ಘೋಷಣೆ ಮಾಡಿದ್ದ ಅಷ್ಟೂ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎನ್ನುವ ಮೂಲಕ ಕಾಂಗ್ರೆಸ್​(Congress) ಪಕ್ಷ ಕೊಟ್ಟ ಭರವಸೆಯನ್ನು ಈಡೇರಿಸುವ ವಾಗ್ದಾನ ಮಾಡಿತ್ತು. ಸರ್ಕಾರ ರಚನೆಯಲ್ಲಿ ಸಣ್ಣ ಗೊಂದಲವಿದ್ದರೂ ಕಳೆದೊಂದು ವರ್ಷದಲ್ಲಿ ಯಾವುದೇ ಗೊಂದಲ ಆಗದಂತೆ ಸರ್ಕಾರ ನಡೆಯುತ್ತಿದೆ.

ಕಾಂಗ್ರೆಸ್​ ಪಕ್ಷ(Congress Party) ಕೊಟ್ಟಿದ್ದ ಐದೂ ಗ್ಯಾರಂಟಿಗಳನ್ನು ರಾಜ್ಯದಲ್ಲಿ ಜಾರಿ ಮಾಡಲಾಗಿದೆ. ಅದರಲ್ಲೂ ಗೃಹಜ್ಯೋತಿ ಯೋಜನೆ(Gruha Jyothi Scheme) ಮೂಲಕ ಎಲ್ಲರೂ ವಿದ್ಯುತ್​​ ಫ್ರೀ(Electricity Free) ಪಡೆಯುತ್ತಿದ್ದಾರೆ. ಅದೇ ರೀತಿ ಶಕ್ತಿ ಯೋಜನೆ ಮೂಲಕ ರಾಜ್ಯದ ಮಹಿಳಾ ಮಣಿಗಳು ಉಚಿತವಾಗಿ ಬಸ್​ನಲ್ಲಿ(Free Bus) ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಅಷ್ಟು ಮಾತ್ರವಲ್ಲದೆ ಮನೆಯ ಯಜಮಾನಿ ಅಕೌಂಟ್​ಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಕೊಡಲಾಗ್ತಿದೆ. ಇನ್ನು ಬಿಪಿಎಲ್ (BPL)​ ಕಾರ್ಡ್​ದಾರರಿಗೆ ಪ್ರತಿ ತಿಂಗಳು ಐದು ಕೆಜಿ ಅಕ್ಕಿ(5KG Rice) ಜೊತೆಗೆ ಕಾಂಗ್ರೆಸ್​ ಪಕ್ಷ ಘೋಷಣೆ ಮಾಡಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣವನ್ನು ಬ್ಯಾಂಕ್​ ಖಾತೆಗೆ ಹಾಕಲಾಗ್ತಿದೆ(Bank Transfer). ಇನ್ನು ಕೊನೆಯದಾಗಿ ನಿರುದ್ಯೋಗಿಗಳ(Unemployed) ಖಾತೆಗೂ ಹಣ ಜಮೆ ಆಗ್ತಿದೆ. ಒಂದು ರೀತಿಯಲ್ಲಿ ಜನತೆ ಖುಷ್ ಆಗಿದ್ದಾರೆ.

ರಾಜ್ಯದ ಜನತೆಯ(People) ಸಂತಸ ಇಡೀ ದೇಶಕ್ಕೆ ಹಂಚುವ ಉದ್ದೇಶ ಕಾಂಗ್ರೆಸ್​ ಪಕ್ಷದ್ದು. ಮೊದಲಿಗೆ ತೆಲಂಗಾಣದಲ್ಲಿ(Telangana) ಕರ್ನಾಟಕದಂತೆಯೇ(Karnataka) ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದ ಕಾಂಗ್ರೆಸ್​ ಪಕ್ಷ, ಅಧಿಕಾರಕ್ಕೇರಿತ್ತು. ಕೊಟ್ಟ ಮಾತಿನಂತೆ ತೆಲಂಗಾಣದಲ್ಲೂ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಇದೀಗ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್​​ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದೆ. ಅದರಲ್ಲೂ ಕರ್ನಾಟಕ ಹಾಗು ತೆಲಂಗಾಣದಲ್ಲಿ ಈಗಾಗಲೇ ಯಶಸ್ವಿಯಾಗಿ ಯೋಜನೆ ಜಾರಿ ಮಾಡಿದ್ದೇವೆ ಎಂದು ಎದೆಯುಬ್ಬಿಸಿ ಮಾತನಾಡುತ್ತಿದ್ದಾರೆ. ಒಂದು ವರ್ಷದಲ್ಲಿ ಮಹಿಳೆಯರಿಗೆ ಹರುಷ ತಂದುಕೊಟ್ಟ ಸರ್ಕಾರ, ಕಾಂಗ್ರೆಸ್​​ ಪಕ್ಷ ದೇಶಾದ್ಯಂತ ಶಕ್ತಿ ಪ್ರದರ್ಶನಕ್ಕೆ ಸಾಥ್​ ಕೊಟ್ಟಿದೆ.

Tags: #Annabaghya#Gruhajyothi#karnataka#Ration#schemes#Shakthi#YuvanidhiBJPCentral GovernmentCongress PartyGovernmentGruhalakshmiTelanganaನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

Hair extensions trend: ಮದುವೆ ಸೀಸನ್(Marriage Season) ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ ಆರ್ಟಿಫಿಶಿಯಲ್(Artificial) ಹೇರ್ ಎಕ್ಸ್ಟೆಂಶನ್.!

Next Post

ಸರ್ಕಾರಕ್ಕೆ ವರ್ಷದ ಸಂಭ್ರಮ.. ಸರ್ಕಾರದ ಕಾಲೆಳೆದ ವಿಪಕ್ಷಗಳು..

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post

ಸರ್ಕಾರಕ್ಕೆ ವರ್ಷದ ಸಂಭ್ರಮ.. ಸರ್ಕಾರದ ಕಾಲೆಳೆದ ವಿಪಕ್ಷಗಳು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada