• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?

ಕರ್ಣ by ಕರ್ಣ
July 5, 2022
in ಕರ್ನಾಟಕ, ರಾಜಕೀಯ
0
ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರ ಮೇಲೆ ACB ದಾಳಿ : ಅಷ್ಟಕ್ಕೂ ACB ಕೆಲಸ ಏನು.!?
Share on WhatsAppShare on FacebookShare on Telegram

ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಖಾನ್ ಮೇಲೆ ಇಂದು ಬೆಳ್ಳಂಬೆಳಗ್ಗೆ ACB (Anti Corruption Beauro) ದಾಳಿ ಮಾಡಿದೆ. ಅಕ್ರಮ ಹಣ ಗಳಿಕೆ ಆರೋಪದ ಅಡಿಯಲ್ಲಿ ACB ದಾಳಿ ಮಾಡಿದೆ. ಶಾಸಕ ಜಮೀರ್ ಖಾನ್ ಗೆ ಸೇರಿದ ಒಟ್ಟು ಐದು ಕಡೆಗಳಲ್ಲಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ. ವಸಂತ ನಗರದ ಬಾಂಬೂ ಬಜಾರ್ ನಲ್ಲಿರುವ ಬಂಗಲೆ, ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಸದಾಶಿವನಗರದಲ್ಲಿರುವ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಬ್ಯುಸಿನೆಸ್ ಆಫೀಸ್, ಸಿಲ್ವರ್ ಓಕ್ ಅಪಾರ್ಟ್ಮೆಂಟ್ ಸೇರಿದಂತೆ ಐದು ಕಡೆ ದಾಳಿ ಮಾಡಲಾಗಿದೆ. ಇದೇ ಮೊದಲ ಬಾರಿಗೆ ACB ಶಾಸಕರೊಬ್ಬರ ಮೇಲೆ ದಾಳಿ ಮಾಡುತ್ತಿದೆ.

ADVERTISEMENT

ಈ ಹಿಂದೆ ಹಲವು ಪ್ರಕರಣಗಳಲ್ಲಿ ಶಾಸಕರು ಕರೆಸಿ ಮಾಹಿತಿ ಪಡೆದುಕೊಳ್ಳಲಾಗಿದೆಯಾದರೂ, ಈ ವರೆಗೆ ನೇರವಾಗಿ ಶಾಸಕಾಂಗ ಸದಸ್ಯರ ಮೇಲೆ ACB ದಾಳಿ ಮಾಡಿರಲಿಲ್ಲ. ಇದೀಗ ACB ಅಸ್ತಿತ್ವಕ್ಕೆ ಬಂದ ಮೇಲೆ ಇದೇ ಮೊದಲ ಬಾರಿಗೆ ಶಾಸಕರ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಸದ್ಯ ರಾಜಕೀಯ ಹಾಗೂ ಸಾಮಾಜಿಕ ನೆಲೆಗಟ್ಟಿನಲ್ಲಿ ACB ದಾಳಿ‌ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. 

ACB ಕೆಲಸವೇನು..? ACB ಅಸ್ತಿತ್ವಕ್ಕೆ ಬಂದಿದ್ದು ಯಾವಾಗ..?

ಭ್ರಷ್ಟಾಚಾರ ನಿಗ್ರಹ ದಳ ಒಂದು ವಿಶೇಷ ಸಂಸ್ಥೆಯಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಗುಪ್ತ ಮಾಹಿತಿ ಸಂಗ್ರಹಿಸುವುದು, ಇತರ ಇಲಾಖೆಗಳ ವಿಜಿಲೆನ್ಸ್ ಅಧಿಕಾರಗಳೊಂದಿಗೆ ಸಮನ್ವಯತೆ ಸಾಧಿಸಿ ಸರ್ಕಾರಿ ಅಧಿಕಾರಿಗಳು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವಂತೆ ನೋಡಿಕೊಳ್ಳುವುದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳ ಬಗ್ಗೆ ತನಿಖೆಯನ್ನು ಕೈಗೊಂಡು ಅಭಿಯೋಜನೆಗೆ ಒಳಪಡಿಸುವುದು ಹಾಗೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವುದು ಇದರ ಪ್ರಮುಖ ಕೆಲಸವಾಗಿದೆ. ಎ.ಸಿ.ಬಿಯು ಭ್ರಷ್ಟಾಚಾರ ನಿಗ್ರಹ ಅಧಿನಿಯಮ 1988ರ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತದೆ. ಸಾರ್ವಜನಿಕರು, ಸರ್ಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳಿಂದ ಸಾರ್ವಜನಿಕ ಸೇವಕರ ವಿರುದ್ಧ ಬಂದ ದೂರು ಅರ್ಜಿಗಳ ನಿಖರ ಮಾಹಿತಿ ಬಗ್ಗೆ ವಿಚಾರಣೆಯನ್ನೂ ಸಹ ನಿಗ್ರಹ ದಳವು ಮಾಡುತ್ತದೆ. 14.03.2016 ರಲ್ಲಿ ಕೆಲಸ ಶುರುಮಾಡಿದ್ದು, ಹಲವು ಪ್ರಕರಣಗಳನ್ನು ತನಿಖೆ ಮಾಡಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಮೀನು ಆಕ್ರಮಣಕ್ಕೆ ವಿರೋಧ ತೋರಿದ ಆದಿವಾಸಿ ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನ

Next Post

ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!

ಎಸಿಬಿ ಟ್ರ್ಯಾಪ್ ಕಾರ್ಯಾಚರಣೆ: ಬೆಂಗಳೂರಿನ ಉಪ ತಹಶೀಲ್ದಾರ್/ ಮ್ಯಾನೇಜರ್ ಬಲೆಗೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada