ಇತ್ತೀಚಿಗೆ ಧಾರ್ಮಿಕ ಮತಾಂತರದ ಬಗ್ಗೆ ಬಲಿಷ್ಠ ಕಾನೂನು-ಮಸೂದೆಯ ಅಗತ್ಯತೆ ಬಗ್ಗೆ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದ್ದ ಹಿನ್ನಲೆಯಲ್ಲಿ ಈಗ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿದೆ.
ಬಲವಂತದ ಮತಾಂತರ ಸಂವಿಧಾನಕ್ಕೆ ವಿರುದ್ದವಾದದ್ದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಅಬೀಪ್ರಾಯಪಟ್ಟಿದೆ ಮತ್ತು ಕಾನೂನಿನ ಅಗತ್ಯತೆಯನ್ನು ಪುನರುಚ್ಚರಿಸಿದೆ.
ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಎಂ.ಆರ್.ಶಾ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ದ್ವಿಸದಸ್ಯ ಪೀಟವು ನ್ಯಾಯಾಲಲಯ ಬೆದರಿಕೆ, ಆಮಿಷಗಳಿಗೆ ಯಾರು ಬಲಿಯಾಗಬಾರದೆಂದು ಹೇಳಿದೆ. ಇದೇ ವೇಳೆ ಕೇಂದ್ರ ಸರ್ಕಾರದ ಪರ ವಕೀಲರು ರಾಜ್ಯಗಳಿಂದ ಮತಾಂತಯರ ಕುರಿತು ಮಾಹಿತಿ ಪಡೆಯುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತಾಂತರದ ಕುರಿತು ಮಾಹಿತಿಯನ್ನ ರಾಜ್ಯ ಸರ್ಕಾರಗಳಿಂದ ಈಗಾಗಲೇ ಕೇಳಲಾಗಿದೆ ಮತ್ತು ಆದಷ್ಟು ಬೇಗ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಧರ್ಮದ ನಂಬಿಕೆಯಲ್ಲಿನ ಬದಲಾವಣೆಯಿಂದಾಗಿ ಕೆಲವರು ಮತಾಂತರವಾಗುತ್ತಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ ಇದು ಗಂಭಿರವಾದ ವಿಷಯ ಸೂಕ್ತ ಕ್ರಮ ತೆಗೆದುಕೊಳ್ಳುವುದು ಉತ್ತಮ ಎಂದು ಸರ್ಕಾರಕ್ಕೆ ಚಾಟಿ ಬೀಸಿದೆ.
ಮತಾಂತರ ವಿಚಾರವನ್ನ ಯಾರು ಲಘುವಾಗಿ ಪರಿಗಣಿಸಬೇಡಿ ಇದು ಬಹಳ ಗಂಭೀರವಾದ ವಿಚಾರವಾಗಿದ್ದು ಅಂತಿಮವಾಗಿ ಇದು ನಮ್ಮ ಸಂವಿಧಾನಕ್ಕೆ ವಿರುದ್ದವಾಗಿದೆ ಎಲ್ಲರೂ ಭಾರತದಲ್ಲಿರುವಾಗ ದೇಶದ ಸಂಸ್ಕೃತಿಗೆ ಅನುಗುಣವಾಗಿ ವರ್ತಿಸಬೇಕು ಎಂದಿದೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿದೆ.