• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ವಿಧಾನಸಭಾ ಅಧಿವೇಶನಕ್ಕೂ ಮುನ್ನವೇ ಸರ್ಕಾರದ ವಿರುದ್ದ ಕುಮಾರಸ್ವಾಮಿ ಕೆಂಡ..

ಕೃಷ್ಣ ಮಣಿ by ಕೃಷ್ಣ ಮಣಿ
June 29, 2023
in ಇದೀಗ, ಕರ್ನಾಟಕ, ರಾಜಕೀಯ
0
Congress government has taken off : ಕೇವಲ 15 ದಿನದಲ್ಲಿ ಕಾಂಗ್ರೆಸ್ ಸರ್ಕಾರ ಟೇಕ್ ಆಫ್ ಆಗಿದೆ :  ದೇಶದಲ್ಲಿ ಇದೇ ಮೊದಲು..!

Chief Minister H D Kumaraswamy interview in Bengaluru on Monday 27th August 2018. Photo by Janardhan BK

Share on WhatsAppShare on FacebookShare on Telegram

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ ಮಾಡಲು ದಿನಗಣನೆ ಆರಂಭ ಆಗಿದೆ. ಸರ್ಕಾರದಲ್ಲಿ ನಡೆಯುತ್ತಿರುವ ಪ್ರತಿಯೊಂದು ಹೆಜ್ಜೆ ಮೇಲೂ ಕಣ್ಣಿಟ್ಟಿರುವ ವಿರೋಧ ಪಕ್ಷಗಳು, ಸರ್ಕಾರವನ್ನು ಹೇಗೆಲ್ಲಾ ಇಕ್ಕಟ್ಟಿಗೆ ಸಿಲುಕಿಸಬಹುದು ಅನ್ನೋ ಬಗ್ಗೆ ಭಾರೀ ಲೆಕ್ಕಾಚಾರ ನಡೆಯುತ್ತಿವೆ. ಇದೀದ ಅಧಿಕೃತ ವಿರೋಧ ಪಕ್ಷದಲ್ಲಿ ವಿಪಕ್ಷ ನಾಯಕನ ಸ್ಥಾನವೇ ಭರ್ತಿಯಾಗದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ನಿರ್ವಹಿಸುವ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳಾಗುತ್ತಿದ್ದು ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಈ ವರ್ಗಾವಣೆ ಹಿಂದೆ ಹಣಕಾಸಿನ ದಂಧೆ ನಡೆಯುತ್ತಿದೆ ಅನ್ನೋದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ. ಈ ಆರೋಪಕ್ಕೆ ಬಿಜೆಪಿ‌ ನಾಯಕರು ಉಘೇ ಎಂದಿದ್ದಾರೆ.

ADVERTISEMENT

ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದ್ದು, ಒಂದೇ ಹುದ್ದೆಗೆ ಮುಖ್ಯಮಂತ್ರಿ ಅವರೇ ನಾಲ್ಕರಿಂದ ಐದು ಜನರಿಗೆ ಶಿಫಾರಸು ಪತ್ರ ಮಾಡಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ..? ಒಂದು ಹುದ್ದೆಗೆ ಐದು ವ್ಯಕ್ತಿಗಳು ನಿಯುಕ್ತಿಗೊಳಿಸಿದ್ದಾರೆ. ಇದನ್ನ ಯಾರು ಆದೇಶ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ವರ್ಗಾವಣೆ ದಂಧೆ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಚನ್ನಪಟ್ಟಣದ ಮೈಲನಾಯಕನಹೊಸಳ್ಳಿ ಗ್ರಾಮದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಅಧಿಕೃತ ಬಿಜೆಪಿ ಮಾಡಬೇಕಿರುವ ಕೆಲಸಕ್ಕೆ ಕುಮಾರಸ್ವಾಮಿ ಅಧಿಕೃತವಾಗಿ ಎಂಟ್ರಿಕೊಟ್ಟಂತಾಗಿದೆ.

ಕುಮಾರಸ್ವಾಮಿ ಹೇಳಿಕೆಗೆ ಉಘೇ ಎಂದ ಬಿಜೆಪಿ ಲೀಡರ್ಸ್..!

ರಾಜ್ಯ ಸರ್ಕಾರ ವರ್ಗಾವಣೆ ದಂಧೆ ನಡೆಸುತ್ತಿದೆ ಎಂದಿರುವ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಆರೋಪದ ಬಗ್ಗೆ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಆಯಕಟ್ಟಿನ ಹುದ್ದೆಗಳಿಗೆ ನೇಮಕವಾಗುತ್ತಿರುವ ಅಧಿಕಾರಿಗಳ ಹಿನ್ನೆಲೆ ಪರಿಶೀಲಿಸಬೇಕು. ಆಗ ಸರ್ಕಾರದ ಆಶಯ ಏನು ಅಂತಾ ಗೊತ್ತಾಗುತ್ತದೆ. ಕುಮಾರಸ್ವಾಮಿ ಅವರಿಗೆ ಆಡಳಿತ ನಡೆಸಿದ ಅನುಭವ ಇದೆ. ಹಾಗಾಗಿ ಕುಮಾರಸ್ವಾಮಿ ಅವರು ಆಧಾರ ಇಲ್ಲದೆ ಆರೋಪ ಮಾಡಲ್ಲ. ಹರಾಜು ಕೂಗಿದಂತೆ ರೇಟ್ ಹೆಚ್ಚಾಗಿರಬಹುದು. ಅದಕ್ಕಾಗಿ ಒಂದೇ ಹುದ್ದೆಗೆ ನಾಲ್ಕಾರು ಸಲ ವರ್ಗಾವಣೆ ಆಗಿರಬಹುದು. ವರ್ಗಾವಣೆ ಮಾಡಿ ಆದೇಶ ಮಾಡಿದ ಬಳಿಕ ವಾಪಸ್ ತೆಗೆದುಕೊಳ್ಳುವುದು ದೊಡ್ಡ ಹಗರಣ. ಇದನ್ನು ನೋಡಿದಾಗ ಐದು ವರ್ಷದ ಆಡಳಿತ ಹೇಗಿರುತ್ತೆ ಎನ್ನುವುದು ಸ್ಪಷ್ಟವಾಗಿದೆ. ಹಗರಣಗಳಿಂದಲೇ ಮುನ್ನುಡಿ ಬರೆದಿದ್ದಾರೆ ಎಂದಿದ್ದಾರೆ.

ಪರ್ಸಂಟೇಜ್‌ ಬಗ್ಗೆಯೂ ಕುಮಾರಸ್ವಾಮಿ ಸಿಡಿಕಿಡಿ..!

ಜೆಡಿಎಸ್‌ ನಾಯಕ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದು, ಕಾಂಗ್ರೆಸ್‌ನಲ್ಲೂ ಈಗ ಪರ್ಸಂಟೇಜ್ ಶುರುವಾಗುತ್ತೆ, ರೇಟ್ ಫಿಕ್ಸ್ ಮಾಡುವ ಸಲುವಾಗಿ ಎಲ್ಲಾ ಕೆಲಸಗಳನ್ನು ನಿಲ್ಲಿಸಿದ್ದಾರೆ. 4 ವರ್ಷದ ಅಭಿವೃದ್ಧಿ ಕಾರ್ಯಗಳ ತನಿಖೆ ಎಲ್ಲಿಂದ ಮಾಡಲು ಸಾಧ್ಯ..? ಇದು ಐದು ಗ್ಯಾರಂಟಿಗಳ ಜೊತೆಗೆ ತನಿಖಾ ಜ್ಯೋತಿ ಕೊಡಲು ಹೊರಟಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ಈಗಿನ ರಾಷ್ಟ್ರೀಯ ಪಕ್ಷಗಳು ಕೂಡಾ ಈಸ್ಟ್ ಇಂಡಿಯಾ ಕಂಪನಿ ಇದ್ದಂತೆ. ನಮ್ಮದು ಸಂಪದ್ಭರಿತವಾದ ದೇಶ, ಎಷ್ಟು ಲೂಟಿ ಮಾಡಿದ್ರು ಸಂಪತ್ತು ಕರಗಲ್ಲ ಎಂದು ಕಿಡಿಕಾರಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಬೆಲೆ ಏರಿಕೆ ಅಬ್ಬರಿಸುತ್ತಿದೆ. ಬೆಲೆ ಏರಿಕೆ ಇಳಿಸ್ತೀವಿ ಅಂತ ತಾನೆ ವೋಟ್ ಕೇಳಿದ್ದು, ಈಗ ಕೇಂದ್ರದ ಕಡೆ ಕೈ ತೋರಿಸಿದ್ರೆ ನೀವೇನು ಮಾಡ್ತೀರಿ..? ರಾಜ್ಯ ಸರ್ಕಾರದ ಪಾತ್ರ ಏನೂ ಇಲ್ವಾ..? ಎಂದು ಕುಟುಕಿದ್ದಾರೆ.

ಕೃಷ್ಣಮಣಿ

Previous Post

ಸುಸ್ತಿದಾರರ ಸಾಲಮನ್ನಾ- ಬ್ಯಾಂಕಿಂಗ್‌ ವ್ಯವಸ್ಥೆಯ ಅಪಹಾಸ್ಯ

Next Post

ಕೇಂದ್ರ ಅಕ್ಕಿ ಕೊಡಲಿಲ್ಲ, ರಾಜ್ಯ ಸರ್ಕಾರ ಅನ್ಯ ಮಾರ್ಗ.. ಲಾಭ ನಷ್ಟದ ಲೆಕ್ಕಾಚಾರ..

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಅಭಿವೃದ್ಧಿ ಮೇಲೆ ರಾಜಕೀಯ ಮಾಡೋದೆ ಇಲ್ವಲ್ಲ ಯಾಕೆ..? ಏನಿದು ಸ್ಟ್ರಾಟಜಿ..?

ಕೇಂದ್ರ ಅಕ್ಕಿ ಕೊಡಲಿಲ್ಲ, ರಾಜ್ಯ ಸರ್ಕಾರ ಅನ್ಯ ಮಾರ್ಗ.. ಲಾಭ ನಷ್ಟದ ಲೆಕ್ಕಾಚಾರ..

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada