ಕಲಬುರಗಿ : ಮಾಡಾಳು ವಿರೂಪಾಕ್ಷಪ್ಪ ಹಾಗೂ ಅವರ ಪುತ್ರನ ಮೇಲೆ ಎದುರಾಗಿರುವ ಭ್ರಷ್ಟಾಚಾರ ಆರೋಪದ ಸಂಬಂಧ ಬಂದ್ಗೆ ಕರೆ ನೀಡಿರುವ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಕಲಬುರಗಿ ನಗರದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಟೀಕೆ ಮಾಡುವುದರಲ್ಲೇ ಸಮಯ ಹರಣ ಮಾಡುತ್ತಾರೆ. ರಮೇಶ್ ಕುಮಾರ್ ಜವಾಬ್ದಾರಿಯುತ ನಾಯಕನಾಗಿ ಈ ಹಿಂದೆ ಕಾಂಗ್ರೆಸ್ನವರೂ ಸಾಕಷ್ಟು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದರು. ಈ ಬಗ್ಗೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಮುಗಿಸಿದ್ದೇ ಕಾಂಗ್ರೆಸ್. ಈಗ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಇವರು ನಡೆಸುತ್ತಿರುವ ಪ್ರಜಾಧ್ವನಿ ಯಾತ್ರೆಗೆ ಎಲ್ಲೂ ಜನ ಸೇರ್ತಿಲ್ಲ. ರಾಹುಲ್ ಗಾಂಧಿಯನ್ನು ಇವರ್ಯಾಕೆ ರಾಜ್ಯಕ್ಕೆ ಪ್ರಚಾರಕ್ಕೆ ಬಳಕೆ ಮಾಡಿಕೊಳ್ತಿಲ್ಲ/..? ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪುತ್ರ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿಯೂ ಇದೇ ವೇಳೆ ಮಾತನಾಡಿದ ಅವರು ಕೇಂದ್ರದ ನಾಯಕರು ಎಲ್ಲಿ ಸ್ಪರ್ಧೆ ಮಾಡಿ ಎಂದು ಹೇಳ್ತಾರೋ ವಿಜಯೇಂದ್ರ ಅಲ್ಲಿಂದಲೇ ಸ್ಪರ್ಧೆ ಮಾಡುತ್ತಾರೆ. ಬಹುಶಃ ಶಿಕಾರಿಪುರದ ಟಿಕೆಟ್ ವಿಜಯೇಂದ್ರರಿಗೆ ಸಿಗಬಹುದು.ನಾಲ್ವರು ಶಾಸಕರನ್ನು ಹೊರತುಪಡಿಸಿ ಮಿಕ್ಕೆಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ಸದ್ಯಕ್ಕೆ ನಿರ್ಧರಿಸಿದೆ. ಕಾದು ನೋಡೋಣ ಎಂದು ಹೇಳಿದ್ದಾರೆ.