ರಾಜ್ಯ ಬಿಜೆಪಿ (Bjp) ಪಾಳಯದಲ್ಲಿ ಕಳೆದ ಕೆಲ ದಿನಗಳಿಂದ ತಣ್ಣಗಾಗಿದ್ದ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ, ಆ ಸ್ಥಾನದಲ್ಲಿ ವಿಜಯೇಂದ್ರ (Vijayendra) ಅವರೇ ಮುಂದುವರೆಯಲಿದ್ದಾರೆ ಎಂಬ ಸುಳಿವನ್ನು ನೀಡಿತ್ತು. ಈ ನಡುವೆ ವಿಜಯೇಂದ್ರ ಕೂಡ ಜನಾಕ್ರೋಶ ಯಾತ್ರೆಯ ಮೂಲಕ ಸರ್ಕಾರವನ್ನು ಕಟ್ಟಿಹಾಕುವ ಕೆಲಸಕ್ಕೆ ಮುಂದಾಗಿದ್ದರು.ಆದ್ರೆ ಈಗ ಮತ್ತೆ ರಾಜ್ಯಾಧ್ಯಕ್ಷ ಬದಲಾವಬೆ ಚರ್ಚೆ ಮುನ್ನೆಲೆಗೆ ಬಂದಂತೆ ಭಾಸವಾಗುತ್ತಿದೆ.

ಹೌದು, ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ (Basanagowda patil yatnal) ರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬಳಿಕ ತಮ್ಮ ಸ್ಥಾನ ಭದ್ರವಾಗಿದೆ ಎಂದುಕೊಂಡಿದ್ದ ಬಿ.ವೈ ವಿಜಯೇಂದ್ರಗೆ ಈಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಕೈತಪ್ಪುವ ಭೀತಿ ಶುರುವಾಗಿದೆ.

ಇದಕ್ಕೆ ಕಾರಣ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೈಕಮಾಂಡ್ ನಾಯಕರ ಮುಂದೆ ಮಾತನಾಡಿರುವ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದ್ದು ಬಿಜೆಪಿ ಯಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರಿವೆ.