• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ

Any Mind by Any Mind
June 2, 2023
in Top Story, ಇದೀಗ, ಕರ್ನಾಟಕ
0
HD Kumaraswamy tweet ; ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಕಿಡಿ
Share on WhatsAppShare on FacebookShare on Telegram

2.75 ಲಕ್ಷ ಸರಕಾರಿ ಖಾಲಿ ಹುದ್ದೆ ತುಂಬದ ಮುಖ್ಯಮಂತ್ರಿ ಯುವಕರ ಹಣೆಗೆ ತುಪ್ಪ ಸವರಿದ್ದಾರೆ ಎಂದು ಆಕ್ರೋಶ

ADVERTISEMENT

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

Tags: cmsiddaramiahcongressvsjdsvsbjpDCM DK ShivakumarHDK TweetHdKumaraswamyJDS KarnatakaKarnataka Governmentಎಚ್ ಡಿ ಕುಮಾರಸ್ವಾಮಿ
Previous Post

BREAKING : Odisha Train Accident : ಭೀಕರ ರೈಲು ಅಪಘಾತ, ಸಾವಿನ ಸಂಖ್ಯೆ 50ಕ್ಕೆ ಏರಿಕೆ 179 ಮಂದಿಗೆ ಗಾಯ

Next Post

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ ‘ವಿಷ್ಣುವರ್ಧನ್‌ ಕಟೌಟ್ ಜಾತ್ರೆ’..!

Vishnuvardhan cutout : ಏಷ್ಯಾ, ಇಂಟರ್​ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್ ಸೇರಿದ‌ 'ವಿಷ್ಣುವರ್ಧನ್‌ ಕಟೌಟ್ ಜಾತ್ರೆ'..!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada