ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಾವಲು ಕಾರು ಅಪಘಾತಕ್ಕೊಳಗಾಗಿದ್ದು, 6 ಪೊಲೀಸರಿಗೆ ಗಾಯಗೊಂಡ ಘಟನೆ ತುಮಕೂರು ಬಳಿ ಸಂಭವಿಸಿದೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ತಿಪ್ಪೂರಿನ ಟೋಲ್ ಬಳಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಗಾವಲು ಕಾರು (ಕೆಎ02 ಜಿ 1162) ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಮಂಗಳೂರಿನಿಂದ ಬೆಂಗಳೂರಿಗೆ ಹಿಂತಿರುಗುವಾಗ ಮಂಗಳವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದ್ದು, ಗಾಯಗೊಂಡ ೬ ಪೊಲೀಸರನ್ನು ಆಸ್ಪತ್ರಗೆ ದಾಖಲಿಸಲಾಗಿದೆ.