• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಯುವಕರ ಆಕ್ರೋಶ ಮೋದಿ ಸುಳ್ಳಿನ ಕೋಟೆಯನ್ನು ಸುಟ್ಟು ಬೂದಿ ಮಾಡಲಿದೆ: ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
July 22, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ಭಾರತದ ಯುವಕರ ಆಕ್ರೋಶ ಮೋದಿ ಸುಳ್ಳಿನ ಕೋಟೆಯನ್ನು ಸುಟ್ಟು ಬೂದಿ ಮಾಡಲಿದೆ: ಸಿದ್ದರಾಮಯ್ಯ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ನೀಟ್ ಪರೀಕ್ಷೆ ವಿವಾದ, ದೆಹಲಿಯಲ್ಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಮಂಗಳವಾರ ತೀವ್ರ ಉದ್ವಿಗ್ನತೆಗೆ ತಿರುಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ನಡೆದ ತಳ್ಳಾಟ ನೂಕಾಟದಿಂದ ರಾಹುಲ್ ಗಾಂಧಿ ಅವರಿಗೆ ಗಾಯಗಳಾಗಿವೆ ಎಂಬ ಆರೋಪ ಕೇಳಿಬಂದಿದೆ.

DKishor on Delhi Protest:ವಿದ್ಯಾರ್ಥಿಗಳ ಪರ ನಿಂತ ನಟ ಕಿಶೋರ್.! #pratidhvani

ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ಹಾಗೂ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಯನ್ನು ವಿರೋಧಿಸಿ ಪ್ರಧಾನಮಂತ್ರಿಯವರ ನಿವಾಸದ ಸಮೀಪ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಬಂಧಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳ ಮೇಲಿನ ದಾಳಿಯಾಗಿದೆ ಎಂದು ಗುಡುಗಿದ್ದಾರೆ.

ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ಪ್ರತಿಭಟನಾಕಾರರನ್ನು, ವಿಶೇಷವಾಗಿ ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರನ್ನು ತಳ್ಳಾಡಿ, ಅವರೊಂದಿಗೆ ದುರ್ವರ್ತನೆ ನಡೆಸಿರುವ ದೃಶ್ಯಗಳು ಅತ್ಯಂತ ಆತಂಕಕಾರಿ ಹಾಗೂ ಖಂಡನೀಯ.

Delhi Congress Protest:  ಕಾಂಗ್ರೆಸ್‌ ನಾಯಕರನ್ನು ವಶಕ್ಕೆ ಪಡೆದ ಪೊಲೀಸ್ರು #pratidhvani

ಮೊದಲು ಮೋದಿ ಸರ್ಕಾರ ಯುವಕರ ಪ್ರಶ್ನೆಗಳಿಗೆ ಲಾಠಿ ಮತ್ತು ಅಶ್ರುವಾಯು ಮೂಲಕ ಉತ್ತರ ನೀಡಿತು. ಈಗ, ಇದರ ವಿರುದ್ಧ ದನಿಯೆತ್ತಿದ ಜನಪ್ರತಿನಿಧಿಗಳ ವಿರುದ್ಧವೇ ಪೊಲೀಸರನ್ನು ಬಳಸುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಸರ್ಕಾರದ ನಡೆ ಅಲ್ಲ. ಬದಲಿಗೆ ವಿದ್ಯಾರ್ಥಿಗಳಿಂದ, ಪ್ರಶ್ನೆಗಳಿಂದ ಮತ್ತು ಶಾಂತಿಯುತ ಪ್ರಜಾಸತ್ತಾತ್ಮಕ ಪ್ರತಿಭಟನೆಗಳಿಗೆ ಬೆದರಿಕೂತ ಹೇಡಿ ಸರ್ಕಾರದ ಪ್ರತಿಕ್ರಿಯೆಯಾಗಿದೆ.

Santosh Lad : ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ ಮಾತೃ ಹೃದಯಿ ಕಾಂಗ್ರೆಸ್‌ ನಾಯಕ.. #pratidhvani

ರಾಹುಲ್ ಗಾಂಧಿ ಅವರು ಪರೀಕ್ಷಾ ಅಕ್ರಮಗಳು, ನಿರುದ್ಯೋಗ ಹೀಗೆ ಯುವ ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸುವುದರಿಂದ ಅಥವಾ ಅವರೊಂದಿಗೆ ದುರ್ವರ್ತನೆ ತೋರುವುದರಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಮರೆಮಾಚಲು ಸಾದ್ಯವಿಲ್ಲ. ಹಾಗೆಯೇ, ಕೇಂದ್ರ ಸರ್ಕಾರ ತನ್ನ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲೂ ಸಾಧ್ಯವಿಲ್ಲ.

Rahul Gandhi :  ನೀಟ್‌ ಹೋರಾಟದ ಅಖಾಡಕ್ಕೆ ಧುಮುಕಿದ ರಾಹುಲ್‌ ಗಾಂಧಿ.. #pratidhvani

ಪ್ರಧಾನಮಂತ್ರಿಯವರು ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪೊಲೀಸ್ ಬಲವನ್ನು ಬಳಸುವುದನ್ನು ತಕ್ಷಣ ನಿಲ್ಲಿಸಿ, ದೇಶದ ಜನರಿಗೆ ಉತ್ತರ ನೀಡಬೇಕು. ಭಾರತದ ಯುವಜನತೆಗೆ ದಮನವಲ್ಲ; ನ್ಯಾಯ, ಹೊಣೆಗಾರಿಕೆ ಮತ್ತು ಗೌರವ ಬೇಕಾಗಿದೆ ಎಂಬುದನ್ನು ಮೋದಿಯವರು ಅರಿತು ವರ್ತಿಸಲಿ.

ನಾವು ವಿದ್ಯಾರ್ಥಿಗಳ ಜೊತೆಗೆ ಹಾಗೂ ನ್ಯಾಯಕ್ಕಾಗಿ ಧ್ವನಿ ಎತ್ತುವ ಪ್ರತಿಯೊಂದು ಪ್ರಜಾಸತ್ತಾತ್ಮಕ ಧ್ವನಿಯೊಂದಿಗೂ ದೃಢವಾಗಿ ನಿಲ್ಲುತ್ತೇವೆ. ವಿರೋಧ ಪಕ್ಷದ ನಾಯಕರನ್ನು ಬಂಧಿಸಬಹುದು. ಆದರೆ ಸತ್ಯವನ್ನಾಗಲಿ, ಭಾರತದ ಯುವಕರ ಆಕ್ರೋಶವನ್ನಾಗಲಿ ಬಂಧಿಸಲು ಸಾಧ್ಯವಿಲ್ಲ. ಅದು ಜ್ವಾಲಾಮುಖಿಯಂತೆ ಹಬ್ಬಿ ನರೇಂದ್ರ ಮೋದಿಯವರ ಸುಳ್ಳಿನ ಕೋಟೆಯನ್ನು ಸುಟ್ಟು ಬೂದಿ ಮಾಡಲಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Rahul Gandhi Stage Protest Outside PM Modi's Residence In Delhi: ಪ್ರಧಾನಿ ಮೋದಿ ಮನೆ ಮುಂದೆ ರಾಹುಲ್ ಧರಣಿ
Tags: BJPCJPcongressDelhiJDSKarnatakakarnatakapoliticsNarendra ModiPoliticsprotestSiddaramaiha
Previous Post

Santosh Lad: ದೆಹಲಿಯಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಂತೋಷ್ ಲಾಡ್

Next Post

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ದಿಢೀರ್‌ ಮುಂದೂಡಿಕೆ: ಯಾಕೆ..?

Related Posts

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO
Top Story

ಮಹಿಳೆಯ ವೇಷ ಧರಿಸಿ `ನೈಟ್ ರೈಡ್’ ಮಾಡಿದ  ಯುವಕನಿಗೆ ಕಾದಿತ್ತು ಶಾಕಿಂಗ್ ಅನುಭವ | WATCH VIDEO

by ಪ್ರತಿಧ್ವನಿ
September 20, 2026
0

ನವದೆಹಲಿ:  ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ ವೇಳೆ ಮಹಿಳೆಯರ ಸುರಕ್ಷತೆ ಹೇಗಿರುತ್ತದೆ ಎಂಬುದನ್ನು ಸ್ವತಃ ಅರಿಯಲು ಹೊರಟ ಕಂಟೆಂಟ್ ಕ್ರಿಯೇಟರ್ ಒಬ್ಬರಿಗೆ ಬೆಚ್ಚಿಬೀಳಿಸುವ ಅನುಭವ ಎದುರಾಗಿದೆ. ಮಹಿಳೆಯ...

Read moreDetails
ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

ಬಿಗ್ ಬಾಸ್ ವೇದಿಕೆಯಲ್ಲೇ ಟೀ-ಶರ್ಟ್ ಕಳಚಿದ ಸಲ್ಮಾನ್ ಖಾನ್ : ಟ್ರೋಲಿಗರಿಗೆ ಖಡಕ್ ಎಚ್ಚರಿಕೆ

September 20, 2026
2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

2027ರ ‘ಬೆಂಗಳೂರು ಕ್ವಾಂಟಂ ಸಮಿಟ್’ ಜಾಗತಿಕ ವೇದಿಕೆಯಾಗಿ ವಿಸ್ತರಣೆ: ಸಚಿವ ಡಾ. ಅಜಯ್ ಧರ್ಮಸಿಂಗ್ ಘೋಷಣೆ

September 20, 2026
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 576 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

September 20, 2026
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ; 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

September 20, 2026
Next Post
ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ದಿಢೀರ್‌ ಮುಂದೂಡಿಕೆ: ಯಾಕೆ..?

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ದಿಢೀರ್‌ ಮುಂದೂಡಿಕೆ: ಯಾಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada