• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Any Mind by Any Mind
November 6, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಚನ್ನಪಟ್ಟಣ:ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿರವರ ಪರವಾಗಿ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚಿಸಿದರು.

ADVERTISEMENT

ಚನ್ನಪಟ್ಟಣ ಕ್ಷೇತ್ರದ ಮಾರೇಗೌಡನದೊಡ್ಡಿ (ಎಮ್.ಜಿ ದೊಡ್ಡಿ), ನೆಲಮಾಕನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ಮಂಗಳವಾರ ಭೇಟಿ ನೀಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರನ್ನು ಗ್ರಾಮಸ್ಥರು ಆತ್ಮೀಯವಾಗಿ ಬರಮಾಡಿಕೊಂಡು, ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಬಂಡೆಪ್ಪ ಖಾಶೆಂಪುರ್ ರವರು, ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಸಿ.ಪಿ ಯೋಗೇಶ್ವರ್ ರವರು ಚನ್ನಪಟ್ಟಣ ಜನರಿಗೆ ಮೋಸ ಮಾಡಿದ್ದಾರೆ. ಎಲ್ಲಾ ಪಕ್ಷಗಳಿಗೆ ಅವರು ಜಂಪ್ ಮಾಡ್ಕೊಂಡು ಸಾಗುತ್ತಿದ್ದಾರೆ. ಅವರಿಗೆ ಚನ್ನಪಟ್ಟಣ ಕ್ಷೇತ್ರದ ಜನರು ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

ಸಿ.ಪಿ ಯೋಗೇಶ್ವರ್ ರವರಿಗೆ ನಾವು ಜೆಡಿಎಸ್, ಬಿಜೆಪಿ ಎರಡು ಪಕ್ಷಗಳಿಂದ ಟಿಕೆಟ್ ಕೊಡಲು ಸಿದ್ದರಿದ್ದೇವು. ಆದರೇ ಅವರು ಕಾಂಗ್ರೆಸ್ ಗೆ ಹೋಗುವ ನಿರ್ಧಾರವನ್ನ ಮೊದಲೇ ಮಾಡಿಕೊಂಡಿದ್ದರು. ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಅವರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದರು ಎಂದು ಚನ್ನಪಟ್ಟಣ ಕ್ಷೇತ್ರದ ಜನ ಹೇಳುತ್ತಿದ್ದಾರೆ. ಕ್ಷೇತ್ರದ ಜನ ಅವರಿಗೆ ಮನ್ನಣೆ ನೀಡಬಾರದು.ಚನ್ನಪಟ್ಟಣ ಕ್ಷೇತ್ರದ ಜನರು ಪುಣ್ಯವಂತರು ಅನ್ಸುತ್ತೆ ನೀವು ಗೆಲ್ಲಿಸಿ ಕಳುಹಿಸಿದ ಹೆಚ್.ಡಿ ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಕೇಂದ್ರ ಸಚಿವರಾಗಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಜೊತೆಗೆ ರಾಜ್ಯದ ಒಳಿತಿಗಾಗಿ ಅವರು ದುಡಿಯುತ್ತಿದ್ದಾರೆ. ಈ ಉಪಚುನಾವಣೆಯಲ್ಲಿ ಯೋಗೇಶ್ವರ್ ಕೈಕೊಟ್ಟು ಕಾಂಗ್ರೆಸ್ ಗೆ ಹೋಗಿರೋ ಕಾರಣದಿಂದಾಗಿ ನಿಖಿಲ್ ಕುಮಾರಸ್ವಾಮಿರವರಿಗೆ ಎನ್ಡಿಎ ಟಿಕೆಟ್ ನೀಡಲಾಗಿದೆ.

ನಿಖಿಲ್ ಕುಮಾರಸ್ವಾಮಿರವರು ಕೂಡ ತಂದೆಯವರಂತೆ ಜನರ ಒಳಿತಿನ ಬಗ್ಗೆ ಚಿಂತಿಸುವ ಯುವಕರಾಗಿದ್ದಾರೆ. ಅವರನ್ನು ಗೆಲ್ಲಿಸುವ ಮೂಲಕ ಕುಮಾರಸ್ವಾಮಿರವರ ಕೈ ಬಲಪಡಿಸಬೇಕಾಗಿದೆ. ಕ್ಷೇತ್ರದ ಜನತೆ ನಿಖಿಲ್ ಕೈ ಬಿಡಬಾರದು. ನಿಖಿಲ್ ಪರವಾಗಿ ಮತ ಚಲಾಯಿಸುವ ಮೂಲಕ ಭರ್ಜರಿ ಬಹುಮತದ ಗೆಲುವು ನೀಡಬೇಕು ಎಂದು ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅವರೊಂದಿಗೆ ಜೆಡಿಎಸ್ ರಾಜ್ಯ ವಕ್ತಾರ ಸಿಎಂ ನಾಗರಾಜ, ಚನ್ನಪಟ್ಟಣ ನಗರಸಭೆಯ ಸದಸ್ಯ ಮಂಜುನಾಥ ಸೇರಿದಂತೆ ಅನೇಕರಿದ್ದರು. ಈ ವೇಳೆ ವಿವಿಧ ಗ್ರಾಮಗಳ ಅನೇಕ ಜನರು ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬಳಿಕ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ರವರು, ಮಾಜಿ ಪ್ರಧಾನ ಮಂತ್ರಿಗಳು, ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡರವರ ನೇತೃತ್ವದಲ್ಲಿ ಚನ್ನಪಟ್ಟಣ ಕ್ಷೇತ್ರದ ಕೋಡಂಬಹಳ್ಳಿಯಲ್ಲಿ ನಡೆದ ಮತಯಾಚನೆ, ಚನ್ನಪಟ್ಟಣ ನಗರದ ಎನ್ಡಿಎ ಕಛೇರಿಯಲ್ಲಿ ಕೇಂದ್ರ ಸಚಿವರು, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಹೆಚ್.ಡಿ ಕುಮಾರಸ್ವಾಮಿರವರು, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರರವರು ಸೇರಿದಂತೆ ಎನ್ಡಿಎ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಬಿ.ವೈ ವಿಜಯೇಂದ್ರರವರ ಜನ್ಮ ದಿನದ ಅಂಗವಾಗಿ ಎನ್ಡಿಎ ಕಛೇರಿಯಲ್ಲಿ ಕೇಕ್ ಕತ್ತರಿಸಿ ಶುಭ ಕೋರಿದರು.

Tags: by-election of Channapatna assembly constituencyCongress PartyFormer Minister Bandappa KhashempurHD Deve GowdaNDA candidate Nikhil KumaraswamyOpposition BJP leader R Ashokಜೆಡಿಎಸ್ಬಿಜೆಪಿ
Previous Post

ಬಹು ನಿರೀಕ್ಷಿತ “ಫಾರೆಸ್ಟ್”ಚಿತ್ರ ಸದ್ಯದಲ್ಲೇ ತೆರೆಗೆ

Next Post

ಬಿಗ್‌ಬಾಸ್‌ನಲ್ಲಿ ಅವರಿಗೊಂದು ನ್ಯಾಯ ನಮಗೊಂದು ನ್ಯಾಯಾನಾ..?

Related Posts

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..
Top Story

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಮುಂದುವರೆದಿರುವ ಯುದ್ಧವು ದಿನದಿಂದ ದಿನಕ್ಕೆ ಮಗ್ಗಲು ಬದಲಿಸುತ್ತಿದೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಯನ್ನು ಬಂದ್‌ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ...

Read moreDetails
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
Next Post

ಬಿಗ್‌ಬಾಸ್‌ನಲ್ಲಿ ಅವರಿಗೊಂದು ನ್ಯಾಯ ನಮಗೊಂದು ನ್ಯಾಯಾನಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada