ಚಿಕ್ಕಬಳ್ಳಾಪುರ : ನಿಮಗೆ ನಾಚಿಕೆ ಆಗಲ್ವಾ, ನಾನು ಆಗಿದ್ರೆ 1 ನಿಮಿಷದಲ್ಲಿ ರಾಜೀನಾಮೆ ಕೊಡುತ್ತಿದ್ದೆ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Ishwar) ವಿರುದ್ಧ ಮಾಜಿ ಸಚಿವ ಸುಧಾಕರ್ (Sudhakar) ವಾಗ್ದಾಳಿ ನಡೆಸಿದರು.
![](https://pratidhvani.com/wp-content/uploads/2024/01/Pradeep-Eshwar-1-1-jpg.webp)
ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿಯಲ್ಲಿ ಕಾಯಕರ್ತರನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವರು, ನಾವು ಮಾಡಿದ್ದಂತಹ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ರದ್ದು ಮಾಡಿ ಕೋಲಾರಕ್ಕೆ ಮರಳಿ ಸೇರಿಸಿದ್ದೀರಿ. ನಮ್ಮ ಜಿಲ್ಲೆಯ ಹೈನುಗಾರರು ಏನು ಮಾಡಿದ್ರಿ ಎಂದು ಗೊತ್ತು, ಜಿಲ್ಲೆಯ ಜನ ಕಾಂಗ್ರೆಸ್ ಎಂಎಲ್ ಎ ಗಳನ್ನ ಗೆಲ್ಲಿಸಲಿಲ್ವಾ..? ಚಿಕ್ಕಬಳ್ಳಾಪುರ, ಚಿಂತಾಮಣಿ, ಬಾಗೇಪಲ್ಲಿ ಇನ್ನೂ ಗೆದ್ದ ಮೇಲೆ ಗೌರಿಬಿದನೂರಿನವರು ಸಹ ಕಾಂಗ್ರೆಸ್ ಗೆ ಸೇರಿಕೊಂಡಿದ್ದಾರೆ. ಒಬ್ಬರು ಮಂತ್ರಿ ಸಹ ಆಗಿದ್ದಾರೆ. ಇವರು ಏನು ಮಾಡ್ತಿದ್ದಾರೆ.? ಸ್ವಾಭಿಮಾನ ಇಲ್ವಾ ಜಿಲ್ಲೆಯಲ್ಲಿ ಹುಟ್ಟಿಲ್ವಾ..? ನನ್ನಂತಹವನು ಆಗಿದ್ದರೆ 1 ನಿಮಿಷದಲ್ಲಿ ರಾಜೀನಾಮೆ ಕೊಡ್ತಿದ್ದೆ ಎಂದು ಕಿಡಿಕಾರಿದರು.
![](https://pratidhvani.com/wp-content/uploads/2024/01/tnm_import_sites_default_files_KSudhakar_Facebook_11102021_1200_1-jpg.webp)
ಅಧಿಕಾರಕ್ಕಾಗಿ ನಾನು ಅಂತಿಕೊಂಡಿರಲಿಲ್ಲ ಮೆಡಿಕಲ್ ಕಾಲೇಜು ಹೋದಾಗ ನಾನು ರಾಜೀನಾಮೆ ಕೊಡಲಿಲ್ವಾ, ನಾನು ಜನ ರೈತರ ಪರ ನಿಂತಿದ್ದೀನಿ ಅಂತ ಟಾಂಗ್ ನೀಡಿದರು. ಎಚ್ ಎನ್ ಕೆಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಿ ಅಂತ ಆಗ್ರಹಿಸಿದೆ. ನೇರವಾಗಿ ಬಳಸಿದ್ರೆ ಆ ನೀರು ಮಾರಕ, ತಕ್ಷಣ ನೀವು ಹಾಲು ಒಕ್ಕೂಟ ಮರುಸ್ಥಾಪನೆ ಮಾಡಬೇಕು. ಮೂರನೇ ಹಂತದ ಶುದ್ಧೀಕರಣ ಆಗಬೇಕು. ಇವರು ನಾನು ಇದ್ದಾಗ ಆದ ಕಟ್ಟಡ ಅಷ್ಟೇ ಇದೆ, ಮೆಡಿಕಲ್ ಕಾಲೇಜು ಗೋಪುರ ಕೂಡ ಕಂಪ್ಲೀಟ್ ಮಾಡಿಲ್ಲ, ಆಸ್ಪತ್ರೆ ಮಾಡಲು ಯೋಗ್ಯತೆ ಇಲ್ಲ. ಇವರಿಗೆ ಏನ್ ಕಡಿದು ಕಟ್ಟೆ ಹಾಕಿದಂಗೆ ಕಾರ್ಯಕ್ರಮ ಮಾಡ್ತಾರೆ. ಮಕ್ಕಳ ಜೊತೆ ಮಾತಾಡಿಕೊಂಡು ಪೋಸ್ ಕೊಡ್ತಾರೆ ಇದೇ ಇವರ ಸಾಧನೆ ನಿಮ್ಮ ಕೊಡುಗೆ ಏನು ಅಂತ ಹೇಳಿ ಎಂದು ಸವಾಲ್ ಹಾಕಿದರು.