• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜೆಡಿಎಸ್‌ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆಯಾದ ಮಾಜಿ ಶಾಸಕ ಶಿವಲಿಂಗೇಗೌಡ

Any Mind by Any Mind
April 10, 2023
in Top Story, ಇದೀಗ, ರಾಜಕೀಯ
0
ಜೆಡಿಎಸ್‌ ತೊರೆದು ಕಾಂಗ್ರೆಸ್‌ ಗೆ ಸೇರ್ಪಡೆಯಾದ ಮಾಜಿ ಶಾಸಕ ಶಿವಲಿಂಗೇಗೌಡ
Share on WhatsAppShare on FacebookShare on Telegram

ಅರಸೀಕೆರೆ ಏ.೧೦: ಇತ್ತೀಚಿನ ದಿನಗಳಲ್ಲಿ ಇತಿಹಾಸ ಸೃಷ್ಟಿಸುವ ರೀತಿಯಲ್ಲಿ ಜೆಡಿಎಶ್ ನಿಂದ ಕಾಂಗ್ರೆಸ್ ಪಕ್ಷಕ್ಕೆ ಅನೇಕ ನಾಯಕರು ಸೇರ್ಪಡೆಯಾಗುತ್ತಿದ್ದಾರೆ. ಅಧಿಕಾರ ನಶ್ವರ, ಶಿವಲಿಂಗೇಗೌಡರು ಮಾಡಿರುವ ಸಾಧನೆ ಅಜರಾಮರ. ಆದರೆ ಕೊನೆಗೆ ಮತದಾರರೇ ಈಶ್ವರ ಎಂದು ನಿಮ್ಮ ಬದುಕು ಹಸನ ಮಾಡಲು ಶಿವಲಿಂಗೇಗೌಡರು ಹಾಗೂ ಅವರ ಆಪ್ತರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ADVERTISEMENT

ಶಿವಲಿಂಗೇಗೌಡ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್‌, ಪಕ್ಷದ ಅಧ್ಯಕ್ಷನಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಪರವಾಗಿ, ಪಕ್ಷದ ಇತರ ನಾಯಕರ ಪರವಾಗಿ ಶಿವಲಿಂಗೇಗೌಡರಿಗೆ ತುಂಬು ಹೃದಯದ ಸ್ವಾಗತ ಮಾಡಿಕೊಳ್ಳುತ್ತೇನೆ. ಇಂದು ನಾವು ಚುನಾವಣೆ ಹಂತದಲ್ಲಿದ್ದೇವೆ. ನಾನು ಶಿವಲಿಂಗೇಗೌಡರಿಗೆ 10 ವರ್ಷಗಲಿಂದ ಗಾಳ ಹಾಕುತ್ತಿದ್ದೆ. ಸಿದ್ದರಾಮಯ್ಯನವರು ಕೂಡ ಇವರಿಗೆ ಗಾಳ ಹಾಕುತ್ತಿದ್ದರು. ಆದರೆ ಇವರು ಗಾಳಕ್ಕೆ ಬಿದ್ದಿರಲಿಲ್ಲ. ಕೊನೆಗೆ ಇವರು ಕ್ಷೇತ್ರದ ಜನರ ಅಭಿವೃದ್ಧಿಯ ಗಾಳಕ್ಕೆ ಬಿದ್ದಿದ್ದಾರೆ. ನಾನು ಕ್ಷೇತ್ರದ ಋಣ ತೀರಿಸಬೇಕು ಎಂದು ಸಂಕಲ್ಪ ಮಾಡಿ ಪಕ್ಷಕ್ಕೆ ಬಂದಿದ್ದಾರೆ.

ನಾನು ಇಲ್ಲಿಗೆ ಬರುವಾಗ ನನ್ನ ಮಿತ್ರ ಶಶಿಧರ್ ಅವರ ಜತೆ ಮಾತನಾಡಿದೆ. ಅವರು ನಮಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಅವರ ಜತೆಯಲ್ಲಿ ಗುರುತಿಸಿಕೊಂಡಿರುವ ಎಲ್ಲ ಕಾರ್ಯಕರ್ತರಿಗೆ ಒಂದು ಭರವಸೆ ನೀಡಲು ಬಯಸುತ್ತೇನೆ. ನೀವು ನಮ್ಮ ಕಷ್ಟ ಕಾಲದಲ್ಲಿ ನಮ್ಮ ಧ್ವಜ ಹಿಡಿದಿದ್ದೀರಿ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಧ್ವಜವನ್ನು ಹಾಕಿ ಮೆರೆಸಿ ನೀವು ತೊಂದರೆ ಅನುಭವಿಸಿದ್ದೀರಿ. ರಾಜಕಾರಣದಲ್ಲಿ ದ್ವೇಷ ಸಹಜ. ಆದರೆ ಕಾಲ ಬದಲಾದಂತೆ ನಾವು ನಮ್ಮ ವೈಯಕ್ತಿಕ ವಿಚಾರ ಬಿಟ್ಟು ಬಹಳ ದೂರದೃಷ್ಟಿಯಿಂದ ಬಹಳ ಯೋಚನೆ ಮಾಡಬೇಕಿದೆ.

ನನಗೆ ಕುಮಾರಸ್ವಾಮಿ ಹಾಗೂ ದೇವೇಗೌಡರಿಗೆ ರಾಜಕಾರಣದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯವಿದೆ. ನಾನು ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತಿದ್ದೇನೆ, ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. ಕುಮಾರಸ್ವಾಮಿ ಅವರ ಧರ್ಮಪತ್ನಿ ವಿರುದ್ಧ ನನ್ನ ಸಹೋದರನನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಇವೆಲ್ಲಾ ರಾಜಕಾರಣದಲ್ಲಿ ನಡೆದಿದೆ. ಕಳೆದ ಚುನಾವಣೆಯಲ್ಲಿ ಸಷ್ಟ ಬಹುಮತ ಸಿಗದಿದ್ದಾಗ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಮ್ಮ ಪಕ್ಷದ ತೀರ್ಮಾನಕ್ಕೆ ತಲೆಬಾಗಿ ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿದೆವು. ಆದರೆ ಈ ಅಧಿಕಾರವನ್ನು ಕುಮಾರಣ್ಣ ಉಳಿಸಿಕೊಳ್ಳಲಿಲ್ಲ. ನಾನು ಶಿವಲಿಂಗೇಗೌಡರು ಸರ್ಕಾರ ಉಳಿಸಲು ಬಾಂಬೆಗೆ ಹೋಗಿ ಬೀದಿಯಲ್ಲಿ ನಿಂತು ಎಷ್ಟು ಹೋರಾಟ ಮಾಡಿದ್ದೇವೆ ಎಂದು ನಮಗೆ ಗೊತ್ತು. ಪೊಲೀಸರು ನಮ್ಮನ್ನು ಹೇಗೆ ನಡೆಸಿಕೊಂಡರು ಎಂದು ನೀವೆಲ್ಲ ನೋಡಿದ್ದೀರಿ. ನಮಗೆ ಕುಮಾರಣ್ಣನ ಸರ್ಕಾರ ಉಳಿಸಿಕೊಳ್ಳಬೇಕು ಎಂಬ ನಿಷ್ಠೆಯಿಂದ ಆ ಹೋರಾಟ ಮಾಡಿದ್ದೆವು. ಆದರೆ ಉಲಿಸಿಕೊಳ್ಳಲು ಆಗಲಿಲ್ಲ. ನಮಗೆ ಜಾತ್ಯಾತೀತ ತತ್ವದ ಮೇಲೆ ನಂಬಿಕೆ ಇದ್ದ ಕಾರಣ ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದ್ದೆವು.

ಈ ಹಿಂದೆ ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿತ್ತು. ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲಾರರು ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಶಿವಲಿಗೇಂಗೌಡರೂ ಹೊರಾಟ ಮಾಡಿಕೊಂಡು ಬಂದಿದ್ದಾರೆ. ಹೋರಾಟ ಮಾಡುವವರು ಗೆದ್ದೇ ಗೆಲ್ಲುತ್ತಾರೆ. ಅವರಿಗೆ ಸೋಲು ಹಾಗೂ ಸಾವಿನ ಭಯ ಇರುವುದಿಲ್ಲ ಎಂಬ ಮಾತನ್ನೂ ಅಂಬೇಡ್ಕರ್ ಅವರು ಹೇಳಿದ್ದಾರೆ.

ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಆ ಅವಕಾಶವನ್ನು ನೀವು ಹೇಗೆ ಬಳಸಿಕೊಳ್ಳುತ್ತೀರ ಎಂಬುದು ಬಹಳ ಮುಖ್ಯ. ನೀವೆಲ್ಲರೂ ರೈತನ ಮಕ್ಕಳು. ನಿಮಗೆ ಸಂಬಳ, ಪಿಂಚಣಿ, ಬಡ್ತಿ, ಲಂಚ ಯಾವುದೂ ಇಲ್ಲ. ಬಿಜೆಪಿಯವರು ನಿಮ್ಮ ಆದಾಯ ಡಬಲ್ ಮಾಡುತ್ತೇವೆ, 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ, ನಿಮ್ಮ ಖಾತೆಗಳಿಗೆ 15 ಲಕ್ಷ ಹಣ ಹಾಕುತ್ತೇವೆ ಎಂದಿದ್ದರು. ಆದರೆ ಯಾವುದನ್ನು ಮಾಡಲಿಲ್ಲ. ಈ ಬಗ್ಗೆ ನೀವು ಬಿಜೆಪಿಯನ್ನು ಪ್ರಶ್ನಿಸಬೇಕು.

ಜೀವನದಲ್ಲಿ ನಂಬಿಕೆ ಬಹಳ ಮುಖ್ಯ. ನಾವು ಬದುಕುತ್ತಿರುವುದೇ ನಂಬಿಕೆ ಮೇಲೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಪಕ್ಷ ಸಮಾಜಕ್ಕೆ ನೀಡಿರುವ ಬದ್ಧತೆ, ಬಡವರನ್ನು ರಕ್ಷಣೆ ಮಾಡಿಕೊಂಡು ಬರುವ ಸಿದ್ಧಾಂತ ಇಟ್ಟುಕೊಂಡಿದ್ದು, ಅದರ ಮೇಲೆ ನಾವು ಕೆಲಸ ಮಾಡಿಕೊಂಡು ಬಂದಿದ್ದೇವೆ. ರಾಜ್ಯ, ದೇಶದ ಹಿತಕ್ಕಾಗಿ ನಾವು ನಮ್ಮ ಸ್ವಾರ್ಥವನ್ನು ತ್ಯಾಗ ಮಾಡಬೇಕು. ಮೇ 10 ರಂದು ಚುನಾವಣೆ ನಡೆಯುತ್ತಿದ್ದು, ಆ ದಿನ ಕೇವಲ ಮತದಾನ ಮಾಡುವ ದಿನ ಮಾತ್ರವಲ್ಲ. ಕರ್ನಾಟಕದಲ್ಲಿ ಬದಲಾವಣೆ ತರುವ ದಿನ. ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸುವ ದಿನ, ನಿಮ್ಮ ಭವಿಷ್ಯವನ್ನು ನೀವೇ ನಿರ್ಧಾರ ಮಾಡಿಕೊಳ್ಳುವ ದಿನ ಎಂದು ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

Tags: AICCarasikeremlaBJPCongress JoiningCongress PartyDKShivakumarElectionHDKHdKumaraswamyJDS KarnatakaJDS MLA Shivalinge GowdajdskarnatakaKarnataka GovernmentkarnatakaelectionKPCCKPCC presidentmaliikarjunakargeshivalingegowdasiddaramaiahಎಚ್ ಡಿ ಕುಮಾರಸ್ವಾಮಿಸಿದ್ದರಾಮಯ್ಯ
Previous Post

ಭ್ರಷ್ಟ ಬಿಜೆಪಿಯನ್ನು ಬಡಿದೋಡಿಸಿ , ಕಾಂಗ್ರೆಸ್‌ ಗೆ ಅಧಿಕಾರ ನೀಡಿ ; ಡಿ.ಕೆ.ಶಿವಕುಮಾರ್

Next Post

ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ : ಡಿ.ಕೆ.ಶಿವಕುಮಾರ್

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ : ಡಿ.ಕೆ.ಶಿವಕುಮಾರ್

ನಾಯಕರನ್ನು ಪಕ್ಷದಲ್ಲಿ ಹಿಡಿದಿಟ್ಟುಕೊಳ್ಳಲು ಬಿಜೆಪಿಯಿಂದ ಪಟ್ಟಿ ಬಿಡುಗಡೆ ವಿಳಂಬ : ಡಿ.ಕೆ.ಶಿವಕುಮಾರ್

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada