• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
December 25, 2025
in Top Story, ಕರ್ನಾಟಕ, ರಾಜಕೀಯ
0
ಇಳಿವಯಸ್ಸಿನಲ್ಲೂ ನಾನು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಿದೆ-ಹೆಚ್‌.ಡಿ ದೇವೇಗೌಡ
Share on WhatsAppShare on FacebookShare on Telegram

ಬೆಂಗಳೂರು: ಬೆಂಗಳೂರು- ಮೈಸೂರು ಇನ್ಫಾಸ್ಟ್ರಕ್ಚರ್‌ ಯೋಜನೆಗೆ(Bangalore-Mysore Infrastructure Project) ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ(Supreme Court)  ರಿಟ್‌ ಅರ್ಜಿ ಒಂದು ಸಲ್ಲಿಕೆಯಾಗಿದ್ದು, ಅದರಲ್ಲಿ ನನ್ನನ್ನು ಕೂಡ ಪಾರ್ಟಿ ಮಾಡಿದ್ದಾರೆ. ಹೀಗಾಗಿ ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ ಎಂದು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು(Former PM HD Devegowda) ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT
Dr. H N Ravindra  K. J. George  : ಯುವ ರಾಜಕಾರಣಿಗಳು ಕೆ.ಜೆ ಜಾರ್ಜ್‌  ಅವರನ್ನು ನೋಡಿ ಕಲಿಯುವುದು ತುಂಬಾ ಇದೆ..!

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಬಿಎಂಐಸಿ ಯೋಜನೆಗೆ ಹಣಕಾಸು ಇಲಾಖೆಯ ಸಹಮತಿಯೂ ಇತ್ತು. ಆಗ ಯೋಜನೆಗೆ ಒಪ್ಪಂದ (ಎಂಓಯು) ಮಾಡಿಕೊಳ್ಳಲಾಗಿತ್ತು. ಆ ಒಪ್ಪಂದದ ಎಲ್ಲಾ ಮಾಹಿತಿಯೂ ಅವರಿಗೆ ಕೂಡ ಇದೆ ಎಂದರು.

BY Vijayendra About election ;  ಜನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ತಿರಸ್ಕರಿಸುತಿದ್ದಾರೆ #pratidhvani

ಈ ಯೋಜನೆಯು ಬೆಂಗಳೂರು ನಗರ, ಮಂಡ್ಯ, ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗಳಿಗೆ ಸಂಬಂಧಿಸಿದ್ದಾಗಿತ್ತು. ಐದು ಟೌನ್‌ಶಿಪ್‌ ಗಳು, ಕಾಂಕ್ರಿಟ್‌ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಒಪ್ಪಂದವಾಗಿತ್ತು. ಈ ಇಳಿವಯಸ್ಸಿನಲ್ಲೂ ನಾನು ವಕೀಲರಿಗೆ ಶುಲ್ಕ ಕೊಟ್ಟು ನ್ಯಾಯಾಲಯದಲ್ಲಿ ಹೋರಾಟ ಮಾಡಬೇಕಾಗಿದೆ. ನೈಸ್‌‍ ಕಂಪನಿ ವಿಚಾರದಲ್ಲಿ ಕಾನೂನು ಸಲಹೆಗಾರರಿಗೆ 55 ಲಕ್ಷ ರೂಪಾಯಿ ಕೊಡುತ್ತಿದ್ದಾರಂತೆ. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್‌, ಕಾನೂನು ಸಲಹೆಗಾರರು ಇದ್ದರೂ ಸಹ ಇನ್ನೊಬ್ಬರನ್ನು ನೈಸ್‌‍ ಕಂಪನಿಗೆ ಸಂಬಂಧಿಸಿದಂತೆ ಕಾನೂನು ಸಲಹೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

Darshan Wife Files Complaint Against Commenters:  ಕಮೆಂಟ್ ಹಾಕಿದವರಿಗೆ ಬಿಸಿ ಮುಟ್ಟಿಸಿದ ವಿಜಯಲಕ್ಷ್ಮಿ..!

ನನಗೆ ಇನ್ನೂ ಹೋರಾಟದ ಕೆಚ್ಚಿದೆ. ಹೋರಾಟ ಮಾಡುವ ಶಕ್ತಿ ಇದೆ. ಒಂದು ಲಕ್ಷಕ್ಕೂ ಹೆಚ್ಚು ನೌಕರರು ಹೊರಗುತ್ತಿಗೆ ಮೂಲಕ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಹುದ್ದೆಗಳು ಭರ್ತಿಯಾಗದೇ ಹಾಗೆಯೇ ಖಾಲಿ ಉಳಿದಿವೆ. ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದರೆ ಎಷ್ಟು ಹೊರಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ. ಈಗಿನ ಮುಖ್ಯಮಂತ್ರಿಗಳಿಗೆ ಬಡವರ ಬಗ್ಗೆ ಎಲ್ಲಿಲ್ಲದ ಅನುಕಂಪ ಇದೆ. ಮುಖ್ಯಮಂತ್ರಿ ಕಚೇರಿಯಲ್ಲೇ ಏಳೆಂಟು ಮಂದಿ ಕ್ಯಾಬಿನೆಟ್‌ ದರ್ಜೆ ಪಡೆದುಕೊಂಡು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದು ಇವರ ಆಡಳಿತದ ವೈಖರಿ ಎಂದು ದೇವೇಗೌಡರು ಲೇವಡಿ ಮಾಡಿದರು.

DK Shivakumar- Satish Jarkiholi: ರಾಜಣ್ಣ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಕೆ, ಸತೀಶ್ ಭಾಗಿ #pratidhvani

ಕೇಂದ್ರವನ್ನು ದೂರಿದರೆ ಪ್ರಯೋಜನ ಇಲ್ಲ

ರಾಜ್ಯ ಸರ್ಕಾರ ಪ್ರತೀ ವಿಷಯಕ್ಕೂ ಕೇಂದ್ರ ಸರ್ಕಾರವನ್ನು ದೂರುತ್ತಾ ಕೂತರೆ ಪ್ರಯೋಜನ ಇಲ್ಲ. ಅದರಿಂದ ಏನೂ ಸಾಧನೆ ಮಾಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದಾಗ ಕೇಂದ್ರ ಸರ್ಕಾರದಲ್ಲಿ ಡಾ. ಮನಮೋಹನ ಸಿಂಗ್‌ ಅವರು ಹಣಕಾಸು ಸಚಿವರಾಗಿದ್ದರು. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯಂತೆ ರೈತರ ಸಾಲದ ಮೇಲಿನ ಸುಸ್ತಿ ಬಡ್ಡಿ ಮನ್ನಾ ಮಾಡಲು ಪತ್ರ ಬರೆದಾಗ ಕೇಂದ್ರ ಮನಮೋಹನ್‌ ಸಿಂಗ್‌, ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್‌, ನಬಾರ್ಡ್‌ ಯಾರೂ ಕೂಡ ಒಪ್ಪಿಗೆ ಕೊಡಲಿಲ್ಲ ಎಂದು ಹೇಳಿದರು.

JDS MLA Ravikumar Respect CM Siddaramaiah : ದುಡ್ಡಿಲ್ಲ ಎನ್ನುವ ಬಿಜೆಪಿಗೆ ಇದಕ್ಕೆಲ್ಲಾ ಹಣ ಎಲ್ಲಿಂದ ಬಂತು..?

ಈಗ ನೋಡಿದರೆ ರಾಜ್ಯ ಸರ್ಕಾರ ಬೆಳಗಿನಿಂದ ಸಂಜೆಯವರೆಗೂ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತ ಕಾಲಹರಣ ಮಾಡುತ್ತಿದೆ. ಹೀಗೆ ಟೀಕೆ ಮಾಡುತ್ತಾ ಹೋದರೆ ಆಗುವ ಪ್ರಯೋಜನ ಏನು? ಮುಖ್ಯಮಂತ್ರಿ ಆದವರು ಪ್ರಧಾನಿಗಳ ಅಧ್ಯಕ್ಷತೆಯಲ್ಲಿ ನಡೆಯುವ ದಿಶಾ ಸಭೆಗೆ ಹೋಗಿ ರಾಜ್ಯಕ್ಕೆ ಏನು ಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಹೋರಾಟ ಮಾಡಬೇಕು. ಸಂಸದರಾಗಿ ನಾವು ನಮ್ಮ ಕರ್ತವ್ಯ ನಿಭಾಯಿಸುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

Tags: BJPcongressHD DevegowdaJDSKarnatakaKarnataka PoliticsPolitics
Previous Post

ʼಡೆವಿಲ್ʼ ದಾರಿ ಹಿಡಿದ ʼಮಾರ್ಕ್ʼ ʼ45ʼ: ನೆಗೆಟಿವ್ ವಿಮರ್ಶೆಗೆ ಹೆದರಿ ರೇಟಿಂಗ್ ಆಫ್

Next Post

HD Kumarswamy: ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post

HD Kumarswamy: ಮದ್ಯದ ಅಂಗಡಿಗಳಿಗೆ ಪರವಾನಗಿ ನೆಪದಲ್ಲಿ ಕೋಟಿ ಕೋಟಿ ಸುಲಿಗೆ! ಹೆಚ್.ಡಿ. ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada