• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಿರ್ಮಲಾ ಸೀತಾರಾಮನ್‌ರನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು…!!

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ʼರನ್ನು ಭೇಟಿಯಾದ ಮಾಜಿ ಪ್ರಧಾನಿಗಳು

ಪ್ರತಿಧ್ವನಿ by ಪ್ರತಿಧ್ವನಿ
February 12, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹಲಸು, ಹುಣಸೆ ಮತ್ತು ನೇರಳೆ ಮಂಡಳಿ ರಚನೆ ಕುರಿತು ಚರ್ಚೆ. ಕರ್ನಾಟಕದ ತೆಂಗಿಗೆ ಹೆಚ್ಚುವರಿ ಬಜೆಟ್‌ ಅನುದಾನ ನೀಡಬೇಕೆಂದು ಕೋರಿಕೆ

ADVERTISEMENT

ನವದೆಹಲಿ: ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಯಥೇಚ್ಛವಾಗಿ ಬೆಳೆಯಲಾಗುತ್ತಿರುವ ಹಲಸು, ಹುಣಸೆ ಮತ್ತು ನೇರಳೆಗೆ ಉತ್ತೇಜನ ನೀಡುವುದಕ್ಕೆ ಪ್ರತ್ಯೇಕ ರಾಷ್ಟ್ರೀಯ ಮಂಡಳಿ ರಚಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಗುರುವಾರ ಬೆಳಗ್ಗೆ ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಮಾಜಿ ಪ್ರಧಾನಿಗಳು ಮನವಿ ಪತ್ರವನ್ನು ಸಲ್ಲಿಸಿ ಮಂಡಳಿ ರಚನೆ ಹಾಗೂ ಕರ್ನಾಟಕದ ತೆಂಗು ವಲಯಕ್ಕೆ ಹೆಚ್ಚುವರಿ ಬಜೆಟ್‌ ಅನುದಾನ ಒದಗಿಸುವ ಅಗತ್ಯವನ್ನು ಒತ್ತಿ ಹೇಳಿದರು.

ನಂತರ ಸಂಸತ್‌ ಭವನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾದ ಮಾಜಿ ಪ್ರಧಾನಿಗಳು; ಅವರಿಗೆ ಕೂಡ ಹಲಸು, ಹುಣಸೆ ಮತ್ತು ನೇರಳೆಗೆ ಪ್ರತ್ಯೇಕ ಮಂಡಳಿ ರಚಿಸುವ ಮನವಿ ಪತ್ರ ಸಲ್ಲಿಸಿ ಆದಷ್ಟು ಬೇಗ ಈ ಮಂಡಳಿಯನ್ನು ರಚಿಸುವ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟರು.

ಔಷಧಿಯ ಗುಣಗಳುಳ್ಳ ಹುಣಸೆ ಹಣ್ಣು, ಹಲಸು ಮತ್ತು ನೇರಳೆ ಭಾರತದಲ್ಲಿ ಶತಮಾನಗಳಿಂದ ಬೆಳೆಯುವ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಾಗಿವೆ. ಇವು ಆರೋಗ್ಯಕ್ಕೆ ಉಪಯುಕ್ತವಾಗಿದ್ದು, ಅವು ನೈಸರ್ಗಿಕವಾಗಿ ದೀರ್ಘಕಾಲ ಫಲವನ್ನು ನೀಡುತ್ತವೆ. ಕಡಿಮೆ ಮಳೆಯ ಅಗತ್ಯವಿದ್ದು, ಅತಿ ಕಡಿಮೆ ವೆಚ್ಚದಲ್ಲಿ ಬೆಳೆಸಲಾಗುತ್ತದೆ. ಅದರಲ್ಲಿಯೂ ಹುಣಸೆ ಹಣ್ಣನ್ನು ದೇಶಾದ್ಯಂತ ಬೆಳೆಯಲಾಗುತ್ತಿದೆ. ಮಧ್ಯ, ಪೂರ್ವ ಮತ್ತು ದಕ್ಷಿಣ ಭಾರತದಲ್ಲಿ ಹೆಚ್ಚಿನ ಪ್ರದೇಶದಲ್ಲಿ ಈ ಬೆಳೆಗಳನ್ನು ಬೆಳೆಯಲಾಗುತ್ತದೆ. ಆದರೆ ಹಲಸು ಮತ್ತು ನೇರಳೆಯನ್ನು ಹೆಚ್ಚಾಗಿ ಭಾರತದ ದಕ್ಷಿಣ, ಮಧ್ಯ, ಪೂರ್ವ ರಾಜ್ಯಗಳಲ್ಲಿ ಬೆಳೆಸಲಾಗುತ್ತದೆ. ಭಾರತವು ಹುಣಸೆ ಹಣ್ಣು, ಹಲಸು ಮತ್ತು ನೇರಳೆಗಳ ಅತಿದೊಡ್ಡ ಉತ್ಪಾದಕ ದೇಶವಾಗಿದೆ. ಈ ಹಿನ್ನೆಲೆ ಮಂಡಳಿ ರಚನೆ ಮಾಡುವ ಮೂಲಕ ದೊಡ್ಡ ಪ್ರಮಾಣದಲ್ಲಿ ಈ ಬೆಳೆಗಳನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಇಬ್ಬರೂ ಸಚಿವರಿಗೂ ಮಾಜಿ ಪ್ರಧಾನಿಗಳು ವಿವರಿಸಿದರು.

ಈ ಹಣ್ಣುಗಳು ಮತ್ತು ಅವುಗಳ ಉಪ ಉತ್ಪನ್ನಗಳು ದೇಶೀಯ ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಹೆಚ್ಚಿನ ಬೇಡಿಕೆ ಹೊಂದಿವೆ. ಇವುಗಳಲ್ಲಿ ಔಷಧಿಯ ಗುಣಗಳು ಇರುವುದರಿಂದ ಬಹುತೇಕ ಎಲ್ಲಾ ವಿದೇಶಗಳಲ್ಲಿ ಭಾರೀ ಬೇಡಿಕೆಯನ್ನು ಹೊಂದಿವೆ. ಅಲ್ಲದೆ ಇವು ಹೆಚ್ಚಿನ ಆದಾಯ ಗಳಿಸುವ ʼಡಾಲರ್ ಗಳಿಸುವʼ ಬೆಳೆಗಳಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶವನ್ನು ಸೃಷ್ಟಿಸುವುದರ ಜೊತೆಗೆ ರಾಷ್ಟ್ರೀಯ ಆರ್ಥಿಕತೆಗೆ ಹೆಚ್ಚಿನ ಕೊಡುಗೆ ನೀಡುತ್ತವೆ. ಹೀಗಾಗಿ ಮಂಡಳಿ ರಚನೆ ಮಾ*ಡುವ ಮೂಲಕ ಇನ್ನಷ್ಟು ಸಾಧ್ಯತೆ, ಅವಕಾಶಗಳನ್ನು ಸೃಷ್ಟಿಸಬಹುದಾಗಿದೆ ಎಂದು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

ಆರಂಭದಲ್ಲಿ ಎರಡು ಅಥವಾ ಮೂರು ರಾಜ್ಯಗಳಲ್ಲಿ ಪೈಲಟ್ ಯೋಜನೆ ಮಾದರಿಯಲ್ಲಿ ಇದನ್ನು ಅನುಷ್ಠಾನಕ್ಕೆ ತರಬಹುದು. ಎರಡನೇ ಹಂತದಲ್ಲಿ ದೇಶಾದ್ಯಂತ ಇದನ್ನು ವಿಸ್ತರಿಸಬಹುದು. ರೈತರಿಗೆ ಹೆಚ್ಚು ಲಾಭ, ಆರ್ಥಿಕ ಶಕ್ತಿ ತಂದುಕೊಡಲಿರುವ ಈ ಮೂರು ಹಣ್ಣುಗಳ ಬೆಳೆಗಳ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ರಾಷ್ಟ್ರೀಯ ಮಟ್ಟದಲ್ಲಿ ರಾಷ್ಟ್ರೀಯ ಹುಣಸೆ ಹಣ್ಣು, ಹಲಸು ಮತ್ತು ನೇರಳೆ ಮಂಡಳಿಯನ್ನು ರಚಹಿಸಬೇಕಾಗಿದೆ. ಆರಂಭದಲ್ಲಿ ಪರಿಣಾಮಕಾರಿ ಅನಿಷ್ಠಾನದ ದೃಷ್ಟಿಯಿಂದ ಮೂರು ವರ್ಷಗಳ ಅವಧಿಗೆ ವಾರ್ಷಿಕ 3000 ಕೋಟಿ ರೂ.ಗಳ ಬಜೆಟ್ ಅನ್ನು ಮೀಸಲಿಡಬೇಕು ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಮನವಿ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ತೆಂಗು ವಲಯಕ್ಕೆ ಹೆಚ್ಚುವರಿ ಅನುದಾನಕ್ಕೆ ಬೇಡಿಕೆ:
ದೇಶೀಯ ಮತ್ತು ರಫ್ತು ಮಾರುಕಟ್ಟೆಯಲ್ಲಿ ತೆಂಗಿನಕಾಯಿ ಮತ್ತು ಅದರ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇರುವುದರಿಂದ ಈ ಪ್ರದೇಶದಲ್ಲಿ ಉದ್ಯೋಗಾವಕಾಶಗಳ ಜೊತೆಗೆ ವಿವಿಧ ಉತ್ಪನ್ನಗಳು ಮತ್ತು ಉಪ ಉತ್ಪನ್ನಗಳಿಗೂ ಬೇಡಿಕೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ತೆಂಗು ಬೆಳೆಗಾರರಿಗೆ ಬಜೆಟ್ ಹಂಚಿಕೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಮಾಜಿ ಪ್ರಧಾನಿಗಳು ಕೃಷಿ ಸಚಿವರನ್ನು ಕೋರಿದರು.

ರಫ್ತು ವಹಿವಾಟು 2008-09ರಲ್ಲಿ ರೂ.179.81 ಕೋಟಿಗಳಿಂದ 2024-25ರಲ್ಲಿ 4349.01 ಕೋಟಿಗಳಿಗೆ ಏರಿದೆ. ಇದು ಅಖಿಲ ಭಾರತ ಮಟ್ಟದಲ್ಲಿ ಕಳೆದ 15 ವರ್ಷಗಳಲ್ಲಿ 20 ಪಟ್ಟು ಹೆಚ್ಚಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಬೆಳವಣಿಗೆ ಕಂಡುಬಂದಿದೆ. ಆದ್ದರಿಂದ, 2030ರ ವೇಳೆಗೆ ತೆಂಗಿನಕಾಯಿ ಕ್ಷೇತ್ರದಲ್ಲಿ ಬಲವಾದ ಬೆಳವಣಿಗೆಯನ್ನು ಸಾಧಿಸಲು ಬಜೆಟ್ ಹಂಚಿಕೆಯನ್ನು ಹೆಚ್ಚಿಸಬೇಕಾಗಿದೆ ಎಂದು ಅವರು ಸಲಹೆ ಮಾಡಿದರು.

ಮೌಲ್ಯವರ್ಧನೆ ಮತ್ತು ಸಂಸ್ಕರಣೆಗೆ 150 ಕೋಟಿ ರೂ. ಮೀಸಲಿಡಬೇಕು. 2014-15ರ ಅವಧಿಯಲ್ಲಿ ದೇಶದಲ್ಲಿ ತೆಂಗು ಬೆಳೆಯುವ ಪ್ರದೇಶಗಳಲ್ಲಿ 4 ತೆಂಗು ಉತ್ಪಾದಕ ಕಂಪನಿಗಳು (CPCs) ಸ್ಥಾಪನೆಯಾದವು. ಈ ಕಂಪನಿಗಳು 2016ರಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿವೆ. ಆದಾಗ್ಯೂ, ಈ ಕಂಪನಿಗಳು ರಾಜ್ಯ ಸರ್ಕಾರ ಅಥವಾ ತೆಂಗು ಅಭಿವೃದ್ಧಿ ಮಂಡಳಿಯಿಂದ ಹಣಕಾಸಿನ ನೆರವು ಇಲ್ಲದೆ ಕಾರ್ಯನಿರ್ವಹಿಸುತ್ತಿವೆ. ಅವು ತೆಂಗಿನ ರೈತರು ಮತ್ತು ತೆಂಗು ಅಭಿವೃದ್ಧಿ ಮಂಡಳಿ , ರಾಜ್ಯ ತೋಟಗಾರಿಕೆ ಇಲಾಖೆಗಳು, ಉತ್ತೇಜನಕಾರಿ ಸಂಸ್ಥೆಗಳ ನಡುವೆ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ. ತೆಂಗು ಅಭಿವೃದ್ಧಿ ಮಂಡಳಿ ತೆಂಗಿನ ಬೆಳೆಗಾರರೊಂದಿಗೆ ನೇರವಾಗಿ ಕೆಲಸ ಮಾಡಲು ತಳಮಟ್ಟದ ಸಿಬ್ಬಂದಿಯನ್ನು ಹೊಂದಿರದ ಕಾರಣ ತೆಂಗಿನ ಬೆಳೆಗಾರರಿಗೆ ತಾಂತ್ರಿಕ ಮಾರ್ಗದರ್ಶನ ಮತ್ತು ಸೌಲಭ್ಯಗಳನ್ನು ವಿತರಿಸುವಲ್ಲಿ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ವಾಸ್ತವವಾಗಿ ಪ್ರಸ್ತುತ ತೆಂಗು ಅಭಿವೃದ್ಧಿ ಮಂಡಳಿಯಿಂದ ಒದಗಿಸಲಾದ ಅನೇಕ ಸೌಲಭ್ಯಗಳನ್ನು ಇತ್ತೀಚಿನ ವರ್ಷಗಳಲ್ಲಿ ಈ ಕಂಪನಿಗಳ ಮೂಲಕ ಬೆಳೆಗಾರರಿಗೆ ರವಾನಿಸಲಾಗುತ್ತದೆ ಎಂಬ ಅಂಶವನ್ನು ಮಾಜಿ ಪ್ರಧಾನಿಗಳು ಕೃಷಿ ಸಚಿವರ ಗಮನಕ್ಕೆ ತಂದರು.

Motamma Exclusive Podcast  : ಇವತ್ತಿನ ಕಾಲದಲ್ಲಿ ದುಡ್ಡಿಲ್ಲದೆ ರಾಜಕಾರಣ ಮಾಡೋಕಾಗಲ್ಲ.. #pratidhvani

ಕಳೆದ ಹತ್ತು ವರ್ಷಗಳಲ್ಲಿ ಕೆಲವೇ ಕೇಂದ್ರಿಯ ಕಂಪನಿಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಆದರೆ ಅವುಗಳಲ್ಲಿ ಬಹುತೇಕ ಹಣಕಾಸಿನ ಬೆಂಬಲದ ಕೊರತೆಯಿಂದಾಗಿ ಮುಚ್ಚಲ್ಪಟ್ಟಿವೆ. ತಾಂತ್ರಿಕ ಮಾಹಿತಿಯ ಪರಿಣಾಮಕಾರಿ ಪ್ರಸಾರ, ಬೆಳೆಗಾರರಿಗೆ ನಿರಂತರ ನೆರವು ಮತ್ತು ಕೊನೆಯ ಹಂತದ ಒಳಹರಿವಿನ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಈ ಕಂಪನಿಗಳನ್ನು ಉಳಿಸಿಕೊಳ್ಳುವುದು ಮತ್ತು ಬಲಪಡಿಸುವುದು, ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: congressex prime ministerH D Devegowdahd kumarswamyJDSnirmala seetharaman
Previous Post

ಅಂತರರಾಷ್ಟ್ರೀಯ ಕಾಫಿ ಉತ್ಸವ ಉದ್ಘಾಟಿಸಿದ ಸಚಿವ ಎಂಬಿ ಪಾಟೀಲ

Next Post

ಬಂಗಾರ- ಬೆಳ್ಳಿಯನ್ನು ಗುಲಾಬಿ ಕಾಗದಲ್ಲಿ ಏಕೆ ಸುತ್ತಿಡುತ್ತಿದ್ದರು ?

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಬಂಗಾರ- ಬೆಳ್ಳಿಯನ್ನು ಗುಲಾಬಿ ಕಾಗದಲ್ಲಿ ಏಕೆ ಸುತ್ತಿಡುತ್ತಿದ್ದರು ?

ಬಂಗಾರ- ಬೆಳ್ಳಿಯನ್ನು ಗುಲಾಬಿ ಕಾಗದಲ್ಲಿ ಏಕೆ ಸುತ್ತಿಡುತ್ತಿದ್ದರು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada