• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ

ಪ್ರತಿಧ್ವನಿ by ಪ್ರತಿಧ್ವನಿ
June 10, 2026
in Top Story, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯಸಭೆ ಸ್ಥಾನದ ಬಗ್ಗೆ ನನಗೆ ವ್ಯಾಮೋಹವಿಲ್ಲ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
Share on WhatsAppShare on FacebookShare on Telegram

ಬೆಂಗಳೂರು: ಬಿಜೆಪಿ ಪಕ್ಷದಿಂದ 2026ರ ರಾಜ್ಯಸಭೆ ಅಭ್ಯರ್ಥಿ ಆಯ್ಕೆ ವಿಚಾರ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಕೈ ತಪ್ಪಿದ್ದು, ಈ ಬಗ್ಗೆ ಅನೇಕ ಚರ್ಚೆಗಳು ನಡೆಯುತ್ತಿದೆ. ಈ ಬಗ್ಗೆ ಇದೀಗ ಸ್ವತಃ ದೇವೇಗೌಡರೇ ಪ್ರತಿಕ್ರಿಯಿಸಿದ್ದು, ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯವು ರಾಜ್ಯಸಭೆ ಸ್ಥಾನವನ್ನು ಮೀರಿದ್ದು ಎಂದಿದ್ದಾರೆ.

ADVERTISEMENT
Basavaraj Bommai: ಕಾಂಗ್ರೆಸ್‌ ವಿದೇಶದಿಂದ ಸ್ಥಾಪನೆಯಾಗಿದೆ, RSS ಸ್ವದೇಶದಿಂದ ಸ್ಥಾಪಿಸಲ್ಪಟ್ಟಿದೆ.! #pratidhvani

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಪ್ಪತ್ತು ವರ್ಷಗಳ ಸುದೀರ್ಘ ರಾಜಕೀಯ ಜೀವನ ಸವೆಸಿರುವ ನನಗೆ ರಾಜ್ಯಸಭೆ ಸದಸ್ಯನಾಗಬೇಕು ಎಂಬ ವ್ಯಾಮೋಹವಿಲ್ಲ. ಸುದೀರ್ಘ ರಾಜಕೀಯ ಜೀವನದಲ್ಲಿ ಅಧಿಕಾರಕ್ಕಿಂತ ಜನಸೇವೆಯೇ ಮುಖ್ಯವಾಗಿತ್ತು ಎಂಬುದನ್ನು ಅತ್ಯಂತ ವಿನಯಪೂರ್ವಕವಾಗಿ ಹೇಳಲು ಬಯಸುತ್ತೇನೆ ಎಂದರು.

ಕಳೆದೆರಡು ದಿನಗಳಿಂದ ರಾಜ್ಯಸಭೆ ಸ್ಥಾನದ ವಿಚಾರದಲ್ಲಿ ತಮ್ಮ ಬಗ್ಗೆ ನಡೆಯುತ್ತಿರುವ ಚರ್ಚೆಗೆ ತೆರೆ ಎಳೆದ ಮಾಜಿ ಪ್ರಧಾನಿಗಳು, ಈ ಚರ್ಚೆ ಅನಗತ್ಯ. ಕೆಲವರು ಸುಖಾಸುಮ್ಮನೆ ಮಾತಾಡುತ್ತಿದ್ದಾರೆ. ಈ ವಿಚಾರದಲ್ಲಿ ನನಗೆ ಅಪಮಾನವಾಗಿದೆ ಎಂಬ ಹೇಳಿಕೆಗಳಿಗೆ ಯಾವುದೇ ಮಹತ್ವವನ್ನು ನಾನು ನೀಡುವುದಿಲ್ಲ. ಅದರಲ್ಲಿ ಯಾವುದೇ ಅರ್ಥವೂ ಇಲ್ಲ ಎಂದು ಹೇಳಿದರು.

HD Kumaraswamy on Zameer :  ಜಮೀರ್‌ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದೇನು..! #zameerahmedkhan

ನನ್ನ ಮತ್ತು ಪ್ರಧಾನಿ ಮೋದಿ ಅವರ ನಡುವೆ ಉತ್ತಮ ಬಾಂಧವ್ಯ ಇದೆ. ಒಂದು ರಾಜ್ಯಸಭೆ ಸ್ಥಾನ ಇಂತಹ ಉತ್ತಮ ಬಾಂಧವ್ಯವನ್ನು ಹಾಳು ಮಾಡುತ್ತದೆ ಎಂದು ಯಾರಾದರೂ ಭಾವಿಸಿದ್ದರೆ ಅದು ಅವರ ಮೂರ್ಖತನ. ಒಂದು ಕಾಲದಲ್ಲಿ ನಾನು ಮೋದಿಯವರನ್ನು ಕಟುವಾಗಿ ಟೀಕಿಸಿದ್ದೆ ಎಂಬುದು ನಿಜ. ಆದರೆ ಕಳೆದ ಹಲವು ವರ್ಷಗಳಿಂದ ನಾನು ಅವರನ್ನು ಬಹಳಷ್ಟು ಅರ್ಥ ಮಾಡಿಕೊಂಡಿದ್ದೇನೆ. ಅವರಲ್ಲಿ ವಿಶ್ವಾಸ ಇರಿಸಿದ್ದೇನೆ. ಅವರ ಒಳ್ಳೆಯ ಕೆಲಸಗಳನ್ನು ಹೃದಯಪೂರ್ವಕವಾಗಿ ಶ್ಲಾಘಿಸಿದ್ದೇನೆ ಎಂದರು.

Priyank Kharge vs RSS : ಸಚಿವ ಪ್ರಿಯಾಂಕ್ ಖರ್ಗೆಗೆ ಸಿ.ಟಿ ರವಿ ಕೌಂಟರ್! #ctravi #rss #priyankkharge

ಕಾಂಗ್ರೆಸ್ ಪಕ್ಷದ ನಾಯಕರ ಹೇಳಿಕೆಗಳಿಗೆ ಅತೀವ ಬೇಸರ ವ್ಯಕ್ತಪಡಿಸಿದ ದೇವೇಗೌಡರು, ನಾನು ಸುಮ್ಮನೆ ಕೂರುವುದಿಲ್ಲ. ಪಕ್ಷದ ಬಲವರ್ಧನೆಗೆ ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರಗಳನ್ನು ಸಂಸತ್ತಿನ ಒಳಗೆ ಮತ್ತು ಹೊರಗೆಯು ನೇರವಾಗಿ ಮಾತನಾಡಿದ್ದೇನೆ ಎಂದು ಹೇಳಿದರು.


ನರೇಂದ್ರ ಮೋದಿ ಅವರ ಬಗ್ಗೆ ಭಾರತ ಅಷ್ಟೇ ಅಲ್ಲ ಜಗತ್ತಿನ ಎಲ್ಲಾ ಭಾಗಗಳಲ್ಲಿಯೂ ಗೌರವಭಾವ ಇದೆ. ಅದರಿಂದ ರಾಷ್ಟ್ರಕೂ ಒಳ್ಳೆಯದಾಗುತ್ತಿದೆ. ಅವರ ಮಟ್ಟಕ್ಕೆ ಯಾವ ನಾಯಕನು ಬೆಳೆಯಲು ಸಾಧ್ಯವಿಲ್ಲ. ಅವರೊಂದಿಗೆ ನಾನು ಹೊಂದಿರುವ ಬಾಂಧವ್ಯ ವೈಯಕ್ತಿಕ ಮಟ್ಟದ್ದು. ಅದನ್ನು ರಾಜಕೀಯ ಕಾರಣಕ್ಕಾಗಿ ಕಳೆದುಕೊಳ್ಳಲು ಬಯಸುವುದಿಲ್ಲ. ನಾನು ಸಂಸತ್ತಿನಲ್ಲಿ ಇರಲಿ ಇಲ್ಲರಲಿ ಮೋದಿ ಅವರ ನಡುವಿನ ಸಂಬಂಧಕ್ಕೆ ದಕ್ಕೆ ಬರುವುದಿಲ್ಲ. ಕೊನೆಯವರೆಗೂ ನಮ್ಮ ಸಂಬಂಧ ಹೀಗೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

ತಮ್ಮ ರಾಜಕೀಯ ಜೀವನದ ಆರಂಭದ ದಿನಗಳನ್ನು ಸ್ಮರಿಸಿದ ದೇವೇಗೌಡರು, ‘ನಾನು ರಾಜಕಾರಣಕ್ಕೆ ಬಂದು ಎಷ್ಟು ವರ್ಷವಾಯಿತು ಎಂದು ಒಮ್ಮೆ ಯೋಚಿಸಿ. 1954-55 ರಿಂದಲೇ ನಾನು ಸಕ್ರಿಯ ರಾಜಕಾರಣದಲ್ಲಿದ್ದೇನೆ. ಅಂದು ಕೇವಲ ಗುತ್ತಿಗೆ ಕೆಲಸ ಮಾಡುತ್ತಿದ್ದ ನಾನು, ಅದರ ಜೊತೆಜೊತೆಗೆ ಜನರ ಕಷ್ಟಗಳಿಗೆ ಸ್ಪಂದಿಸುತ್ತಾ ರಾಜಕೀಯಕ್ಕೆ ಬಂದವನು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಜನರ ಮಧ್ಯೆಯೇ ಇದ್ದೇನೆ. ಹಾಗಾಗಿ, ಇಂದು ಒಂದು ಸ್ಥಾನಕ್ಕಾಗಿ ನಾನು ಹಾತೊರೆಯುವ ಅಗತ್ಯವಿಲ್ಲ ಎಂದರು.

Basavaraj Bommai : ಕಾಂಗ್ರೆಸ್‌ ಶಾಸಕರಿಗೆ ಸಚಿವ ಸ್ಥಾನದ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು..! #pratidhvani

ರಾಜ್ಯಸಭೆ ಸ್ಥಾನ ತಪ್ಪಿಸಿ ಬಿಜೆಪಿ ದೇವೇಗೌಡರಿಗೆ ಅಪಮಾನ ಮಾಡಿದೆ ಎಂದು ಕಾಂಗ್ರೆಸ್ ನಾಯಕರು ಪದೇಪದೇ ದೂರುತ್ತಿದ್ದಾರಲ್ಲ ಎನ್ನುವ ಪ್ರಶ್ನೆಗೆ ಖಡಕ್ಕಾಗಿ ಉತ್ತರಿಸಿದ ಅವರು, ಮೋದಿ ಅವರ ವಿಶ್ವಾಸದ ಮುಂದೆ ಇವರೆಲ್ಲರ ಹೇಳಿಕೆಗಳು ಟೀಕೆ ಟಿಪ್ಪಣಿಗಳು ಬಹಳ ಸಣ್ಣವು ಎಂದರು.

HD Kumaraswamy on DKS : ಡಿಕೆ ಶಿವಕುಮಾರ್‌ ಮೇಲೆ ಕುಮಾರಸ್ವಾಮಿ ಸಾಪ್ಟ್‌ ಕಾರ್ನರ್..! #pratidhvani

ಕೆಲವರು ನನ್ನ ಬಗ್ಗೆ ಕಾಳಜಿಯಿಂದ ಮಾತನಾಡುತ್ತಿದ್ದಾರೆ. ಬಹಳ ಅಪಮಾನವಾಯಿತು ಎಂದು ನೋವು ವ್ಯಕ್ತಪಡಿಸುತ್ತಿದ್ದಾರೆ. ಆದರೆ, ನನ್ನ ಹೆಸರು ಪರಿಗಣನೆಗೆ ಬರುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು ಬಿಟ್ಟರೆ, ನಾನು ಆ ಬಗ್ಗೆ ಎಲ್ಲಿಯೂ ನನಗೆ ರಾಜ್ಯಸಭೆ ಸ್ಥಾನ ಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಈ ಬಗ್ಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರು ಆಗಿರುವ ಕುಮಾರಸ್ವಾಮಿಯವರು ಸ್ಪಷ್ಟವಾಗಿಯೇ ಹೇಳಿದ್ದಾರೆ. ಇದರಲ್ಲಿ ಮತ್ತೊಮ್ಮೆ ನಾನು ಹೇಳುವಂಥದ್ದು ಏನು ಇಲ್ಲ. ಆದರೆ ಕಾಂಗ್ರೆಸ್ ಪಕ್ಷದ ಸ್ನೇಹಿತರು ಮಾತ್ರ ಇದನ್ನೇ ದೊಡ್ಡದಾಗಿ ಬಿಂಬಿಸಿ, ಅದಕ್ಕೆ ರಾಜಕೀಯ ಬಣ್ಣ ಲೇಪಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

Previous Post

ತಮಿಳುನಾಡು ಸಿಎಂ ಕರ್ನಾಟಕಕ್ಕೆ ಭೇಟಿ: ಜೂ.12ಕ್ಕೆ ಕೊಲ್ಲೂರು ಸನ್ನಿಧಿಗೆ ಆಗಮನ

Next Post

ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆ: ನಾಯಕರ ಅರ್ಹತೆಗಳ ಪೋಸ್ಟರ್ ವೈರಲ್

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆ: ನಾಯಕರ ಅರ್ಹತೆಗಳ ಪೋಸ್ಟರ್ ವೈರಲ್

ತಮಿಳುನಾಡು ರಾಜಕೀಯದಲ್ಲಿ ಹೊಸ ಚರ್ಚೆ: ನಾಯಕರ ಅರ್ಹತೆಗಳ ಪೋಸ್ಟರ್ ವೈರಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada